ಮನೆ ಕಳೆದುಕೊಂಡವರಿಗೆ ಕೂಡಲೇ ಪರಿಹಾರ: ಸಿಎಂ ಬೊಮ್ಮಾಯಿ ಭರವಸೆ
ಕಾರವಾರ, ಜುಲೈ 29: "ಪಶ್ಚಿಮ ಘಟ್ಟ ಬಹಳ ಸೂಕ್ಷ್ಮವಾದ ಪ್ರದೇಶವಾಗಿದ್ದು, ತುಂಬಾ ಮಳೆ ಬೀಳುವ ಪ್ರದೇಶ ಕೂಡ ಹೌದು. ಇಲ್ಲಿನ ಮಣ್ಣು ಬಹಳ ಬೇಗ ಕುಸಿತಕ್ಕೆ ಒಳಗಾಗುತ್ತಿದೆ. ಮನೆ ಕಳೆದುಕೊಂಡವರಿಗೆ ಈ ಕೂಡಲೇ ಪರಿಹಾರ ನೀಡಲಾಗುವುದು,'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
Recommended Video
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಿವಿಧೆಡೆ ಪ್ರವಾಹ ಪೀಡಿತ ಸ್ಥಳಗಳ ವೀಕ್ಷಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಶಿರಸಿ, ಯಲ್ಲಾಪುರ ಸೇರಿದಂತೆ ಹಲವೆಡೆ ಬಹಳಷ್ಟು ಹಾನಿಯಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ. ಗುಳ್ಳಾಪುರ ಸೇತುವೆ ಕುಸಿತ ತುಂಬಾ ಭಯಾನಕವಾಗಿದೆ. ರಾಜ್ಯ ಮಟ್ಟದಲ್ಲಿ ಸೇತುವೆಯ ಬಗ್ಗೆ ಚರ್ಚಿಸಲಾಗುವುದು. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು,'' ಎಂದರು.
"ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಲವೆಡೆ ಗುಡ್ಡ ಕುಸಿತವಾಗಿ ನದಿ ನೀರು ನುಗ್ಗಿ ಹಾನಿಯಾಗಿದೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ನೀಡುವ ಬಗ್ಗೆ ನಿರ್ಧರಿಸಲಿದ್ದೇನೆ. ಕೇಂದ್ರದಿಂದ ಈಗಾಗಲೇ 695 ಕೋಟಿ ಹಣ ಬಂದಿದೆ. ಜಿಲ್ಲಾಧಿಕಾರಿ ನಿಧಿಯಲ್ಲಿ ಪರಿಹಾರದ ಹಣವಿದ್ದು, ಅದನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳುತ್ತೇವೆ,'' ಎಂದರು.

ವಿವಿಧೆಡೆ ಭೇಟಿ, ಪರಿಶೀಲನೆ
ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗುಡ್ಡ ಕುಸಿತದಿಂದ ಹಾನಿಗೊಳಗಾಗಿರುವ ಕಳಚೆ ಗ್ರಾಮ, ನಂತರ ಅರಬೈಲು ಘಟ್ಟ ಹಾಗೂ ಗುಳ್ಳಾಪುರ ಸೇತುವೆ ವೀಕ್ಷಣೆ ಮಾಡಿದರು.

ಗುಳ್ಳಾಪುರ ಸೇತುವೆ ಕುಸಿತ ವೀಕ್ಷಣೆಗೆ ತೆರಳುವ ಮುನ್ನ ಆ್ಯಂಟಿ ಸಪೋರ್ಟಿಂಗ್ ಚೆಕ್ ಟೀಮ್ನಿಂದ ಸ್ಥಳ ಪರಿಶೀಲನೆ ನಡೆಸಲಾಯಿತು. ಬಾಂಬ್ ಸ್ಕ್ವಾಡ್ ಟೀಮ್ನಿಂದ ಕೂಡ ಸೇತುವೆ ಪ್ರದೇಶವನ್ನು ಪರಿಶೀಲಿಸಿ, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.

ಪ್ರವಾಹದ ಹೊಡೆತಕ್ಕೆ ಮಧ್ಯದಲ್ಲಿಯೇ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸೇತುವೆ ಕುಸಿದು ಬಿದ್ದಿತ್ತು. ಅರಬೈಲು ಘಟ್ಟ ಪ್ರದೇಶದಲ್ಲಿ ಸುಮಾರು 10ಕ್ಕೂ ಅಧಿಕ ಕಡೆ ಗುಡ್ಡ ಕುಸಿತಗೊಂಡು ರಾಷ್ಟ್ರೀಯ ಹೆದ್ದಾರಿ 63ರ ಸಂಚಾರ ವ್ಯತ್ಯಯಗೊಂಡಿತ್ತು. ಹೀಗಾಗಿ ಇಲ್ಲಿ ಹೆದ್ದಾರಿಯ ಶಾಶ್ವತ ಕಾಮಗಾರಿಗೆ ಸುಮಾರು 70 ಕೋಟಿಗೂ ಅಧಿಕ ಅನುದಾನಕ್ಕಾಗಿ ಹೆದ್ದಾರಿ ಪ್ರಾಧಿಕಾರ ಪ್ರಸ್ತಾವ ಸಲ್ಲಿಸಿದೆ ಎನ್ನಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications