ಉತ್ತರ ಕನ್ನಡದಲ್ಲಿ ಮತದಾನಕ್ಕೆ ಅಡ್ಡಿಯಾದ ಗುಡುಗು ಸಹಿತ ಭಾರೀ ಮಳೆ
ಕಾರವಾರ, ಏಪ್ರಿಲ್ 23:ಲೋಕಸಭಾ ಚುನಾವಣೆಯ ಮತದಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಳೆ ಅಡ್ಡಿಯಾಗಿದೆ.
ಮುಂಡಗೋಡದಲ್ಲಿ ಅರ್ಧ ಗಂಟೆಗಳ ಕಾಲ ಗಾಳಿ ಸಹಿತ ಮಳೆಯಾಗಿದ್ದು, ಇನ್ನೂ ತುಂತುರು ಹನಿ ಮುಂದುವರೆದಿದೆ. ಬಸ್ ನಿಲ್ದಾಣದ ಸಮೀಪ ಮರವೊಂದು ಉರುಳಿದೆ. ಮರದ ಕೆಳಗೆ ಕುಳಿತಿದ್ದ ಪಕ್ಷದ ಕಾರ್ಯಕರ್ತರು ಸ್ವಲ್ಪದರಲ್ಲಿಯೇ ಪಾರಾಗಿದ್ದಾರೆ. ಕೆಲವು ಮತಗಟ್ಟೆಗಳ ಆವರಣದ ಒಳಗೆ ಗಟಾರದ ನೀರು ಹರಿದಿದೆ. ಸಣ್ಣ ಪ್ರಮಾಣದಲ್ಲಿ ಆಲಿಕಲ್ಲು ಸಹ ಬಿದ್ದಿವೆ.
ಕೆಲವು ಮತಗಟ್ಟೆಯ ಸುತ್ತಮುತ್ತ ನೀರು ನಿಂತಿದೆ. ಹೀಗಾಗಿ ಮತದಾರರು ಮತಗಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣ ಪ್ರದೇಶದ ಹಲವಾರು ಮತಗಟ್ಟೆಗಳು ಮತದಾರರಿಲ್ಲದೇ ಖಾಲಿ ಉಳಿದಿವೆ.
ಜೊಯಿಡಾ ತಾಲೂಕಿನ ಅಣಶಿ, ಕುಂಭಾರವಾಡಾ, ಜೊಯಿಡಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಅಣಶಿ, ನುಜ್ಜೀ, ಕುಂಭಾರವಾಡಾ, ಜೊಯಿಡಾ ಮತಗಟ್ಟೆಗೆ ಮಳೆಯಲಿ ನೆನೆದು ಬಂದೇ ಮತದಾರರು ಮತ ಚಲಾಯಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಧ್ಯಾಹ್ನ 2.10ಕ್ಕೆ ಪ್ರಾರಂಭವಾದ ಮಳೆ 3 ಗಂಟೆಯವರೆಗೂ ನಿಂತಿಲ್ಲ. ನೇರವಾಗಿ ಹೋಗಿ ಮತ ಹಾಕಿ ಬರುವ ನಿರೀಕ್ಷೆಯಲ್ಲಿದ್ದ ಬಹುತೇಕ ಗ್ರಾಮೀಣ ಮತದಾರರಿಗೆ ಗುಡುಗು ಸಹಿತವಾದ ಮಳೆ ನಿರಾಸೆ ತಂದಿದ್ದಂತೂ ಸುಳ್ಳಲ್ಲ. ಎಲ್ಲೆಲ್ಲಿ ಏನಾಗಿದೆ ಎಂಬ ಪೂರ್ತಿ ವಿವರ ಇಲ್ಲಿದೆ ನೋಡಿ...

ಕೈ ಕೊಟ್ಟ ವಿದ್ಯುತ್
ಶಿರಸಿ ನಗರದ ಮಾರಿಗುಡಿ ಹಿಂಭಾಗದ ನಾಸಿರ್ ಎಂಬುವವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿಹೋಗಿದ್ದು, ಹಲವೆಡೆ ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದ ಕಾರಣ 3 ಗಂಟೆಗೂ ಅಧಿಕ ಕಾಲ ವಿದ್ಯುತ್ ಕೈಕೊಟ್ಟಿತ್ತು.

ಧರೆಗುರುಳಿದ ಮರಗಳು
ಶಿರಸಿಯ ಅಶ್ವಿನ್ ಸರ್ಕಲ್, ಕಾಲೇಜ್ ರೋಡ್, ಹುಬ್ಬಳ್ಳಿ ರಸ್ತೆ, ಕೋಟೆಕೆರೆ, ಮರಾಠಿಕೊಪ್ಪ ಹಾಗೂ ಇತರೆಡೆ ಚರಂಡಿಗಳು ತುಂಬಿ ಹರಿದ ಪರಿಣಾಮ ರಸ್ತೆಗಳು ನದಿಯಂತಾಗಿತ್ತು.ಕೆಎಚ್ಬಿ ಕಾಲೋನಿ ಮತಗಟ್ಟೆ ಕೇಂದ್ರದ ಬಳಿ ಚಿಕ್ಕದಾದ ಎರಡು ಮರಗಳು ಧರೆಗುರುಳಿ ಆತಂಕಕ್ಕೆ ಕಾರಣವಾಗಿತ್ತು.

ಮರ ಬಿದ್ದು ವಾಹನ ಜಖಂ
ಭಾರೀ ಮಳೆಗೆ ಮರ ಬಿದ್ದ ಪರಿಣಾಮ ಚುನಾವಣಾ ಕರ್ತವ್ಯಕ್ಕೆ ಮೀಸಲಿದ್ದ ವಾಹನ ಜಖಂ ಆಗಿದೆ. ಶಿರಸಿಯ ಮಾಸ್ತಿಕಟ್ಟೆ ರಸ್ತೆಗೆ ಅಡ್ಡಲಾಗಿ ಒಂದು ತೆಂಗಿನ ಮರ ಮುರಿದು ಬಿದ್ದು, ಸಮಸ್ಯೆಯಾಗಿದೆ. ಹಾಗೆಯೇ ವಿದ್ಯಾ ನಗರ ಕ್ರಾಸ್ ಬಳಿ ಮರದ ದಿಮ್ಮಿಯೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.

ಮನೆಯೊಂದರ ಗೇಟ್ ಗೂ ಹಾನಿ
ಅಷ್ಟೇ ಅಲ್ಲ, ಮರಾಠಿಕೊಪ್ಪದಲ್ಲಿನ ಅಗ್ನಿಶಾಮಕ ವಸತಿ ಸಮುಚ್ಛಯದ ಬಳಿ ಮರ ಬಿದ್ದು, ಕಾಂಪೌಂಡ್ ಗೆ ಹಾನಿಯಾಗಿದೆ. ಇಂದಿರಾನಗರ ರಸ್ತೆಗೆ ಅಡ್ಡಲಾಗಿ ತೆಂಗಿನ ಮರವೊಂದು ಬಿದ್ದ ಪರಿಣಾಮ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಹಾಗೆಯೇ ಜಯನಗರದಲ್ಲಿ ಮನೆಯೊಂದರ ಗೇಟ್ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications