ಸಂಶೋಧನಾ ಹಡಗಿನ ಇಂಜಿನ್ ವೈಫಲ್ಯ: 8 ವಿಜ್ಞಾನಿಗಳು ಸೇರಿ 36 ಸಿಬ್ಬಂದಿ ರಕ್ಷಿಸಿದ ಕೋಸ್ಟ್ಗಾರ್ಡ್
ಕಾರವಾರ, ಜುಲೈ 28: ಸಮುದ್ರದ ನಡುವೆ ಇಂಜಿನ್ ವೈಫಲ್ಯಗೊಂಡು ಆತಂಕದಲ್ಲಿದ್ದ ಕೇಂದ್ರ ಸರ್ಕಾರದ ಸಂಶೋಧನಾ ಹಡಗಿನ ಎಂಟು ವಿಜ್ಞಾನಿಗಳನ್ನೂ ಸೇರಿದಂತೆ 36 ಸಿಬ್ಬಂದಿಯನ್ನು ಕೋಸ್ಟ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಕಾರವಾರ ಸಮೀಪದ ಅರಬ್ಬಿ ಸಮುದ್ರದಲ್ಲಿ ಚಲಿಸುತ್ತಿದ್ದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ಸಂಶೋಧನಾ ಹಡಗು ಆರ್ವಿ ಸಿಂಧುವಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಸಿಬ್ಬಂದಿ ಪರೀಕ್ಷಿಸಿದಾಗ ಹಡಗಿನ ಇಂಜಿನ್ ವಿಫಲಗೊಂಡಿರುವುದು ತಿಳಿದುಬಂದಿದೆ.

ಹಡಗಿನಲ್ಲಿ ಒಟ್ಟು 36 ಮಂದಿ ಇದ್ದು, ಎಲ್ಲರೂ ಆತಂಕಿತರಾಗಿದ್ದರು. ತಕ್ಷಣ ಕೋಸ್ಟ್ಗಾರ್ಡ್ ಅಪಾಯದ ಬಗ್ಗೆ ಸೂಚನೆ ರವಾನಿಸಲಾಯಿತು. ಹಡಗು ಸಂಕಷ್ಟದಲ್ಲಿರುವ ಬಗ್ಗೆ ಕೋಸ್ಟ್ಗಾರ್ಡ್ ಮಾಹಿತಿ ಸ್ವೀಕರಿಸಿ ಪರಿಶೀಲಿಸಿದಾಗ ಕಾರವಾರದಿಂದ 20 ನಾಟಿಕಲ್ ಮೈಲು ದೂರದಲ್ಲಿ ಹಡಗು ಕೆಟ್ಟು ನಿಂತಿರುವುದು ಗಮನಕ್ಕೆ ಬಂದಿದೆ.
ಆರ್ವಿ ಸಿಂಧು ಅತ್ಯಾಧುನಿಕ ಸಂಶೋಧನಾ ನೌಕೆಯಾಗಿದ್ದು, ಬೆಲೆಬಾಳುವ ವೈಜ್ಞಾನಿಕ ಉಪಕರಣಗಳು ಮತ್ತು ಸಂಶೋಧನಾ ಡಾಟಾಗಳನ್ನು ಹೊತ್ತೊಯ್ಯುತ್ತಿದ್ದರಿಂದ ಪರಿಸ್ಥಿತಿ ನಿರ್ಣಾಯಕವಾಗಿತ್ತು. ಅಲ್ಲದೇ ಹಡಗು ಸೂಕ್ಷ್ಮ ಕರಾವಳಿ ತೀರವಾದ ಕಾರವಾರಕ್ಕೆ ಸಮೀಪದಲ್ಲಿದ್ದು, ಒಂದುವೇಳೆ ತೈಲ ಸೋರಿಕೆಯಂಥ ಅಘಡವೇನಾದರೂ ಸಂಭವಿಸಿದಲ್ಲಿ ವಿನಾಶಕಾರಿ ಮಾಲಿನ್ಯ ಉಂಟಾಗುವ ಸಾಧ್ಯತೆಯ ಇತ್ತು. ಇದನ್ನರಿತ ಭಾರತೀಯ ಕೋಸ್ಟ್ಗಾರ್ಡ್ ತಕ್ಷಣವೇ ಕಾರ್ಯಪ್ರವೃತ್ತವಾಗಿ, ಹೆಚ್ಚಿನ ಆದ್ಯತೆಯ ರಕ್ಷಣಾ ಕಾರ್ಯಾಚರಣೆಯನ್ನು ಸಕ್ರಿಯಗೊಳಿಸಿತು. ನುರಿತ ತಂಡದೊಂದಿಗೆ ತಮ್ಮ ಹೆಚ್ಚು ಸುಧಾರಿತ ಹಡಗನ್ನು ಅಪಾಯ ಉಂಟಾಗಿರುವ ಪ್ರದೇಶಕ್ಕೆ ರವಾನಿಸಿತು.

ಪ್ರತಿಕೂಲ ಹವಾಮಾನ ಪರಿಸ್ಥಿತಿ, ಕಡಲತೀರದಿಂದ ಕೂಡ ಅಪಾಯ ಉಂಟಾಗಿರುವ ಪ್ರದೇಶ ಸಾಕಷ್ಟು ದೂರದಲ್ಲಿರುವುದು ಹಾಗೂ ಆರ್ವಿ ಸಿಂಧು ಹಡಗಿನ ಗಾತ್ರ ಕೂಡ ಬೃಹತ್ತಾಗಿರುವುದು ಕೋಸ್ಟ್ಗಾರ್ಡ್ ಸವಾಲಿನ ಕೆಲಸವಾದರೂ ತಂಡವು ಹಡಗನ್ನು ಸುರಕ್ಷಿತವಾಗಿ ಗೋವಾಕ್ಕೆ ತರಲು ಎಳೆದೊಯ್ಯಲು ತಡೆರಹಿತ ರಕ್ಷಣಾ ಕಾರ್ಯಾಚರಣೆ ನಡೆಸಿತು. ಕೊನೆಗೂ ಸಿಂಧು ಹಡಗಿನಲ್ಲಿದ್ದ ವಿಜ್ಞಾನಿಗಳು, ಸಿಬ್ಬಂದಿ ಸುರಕ್ಷಿತವಾಗಿದ್ದು, ದೇಶದ ಮಹತ್ವದ ಹಡಗನ್ನು ಕೋಸ್ಟ್ಗಾರ್ಡ್ ರಕ್ಷಣೆ ಮಾಡಿ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications