ರಸ್ತೆ, ಸೇತುವೆ ಇಲ್ಲದೆ ಮಕ್ಕಳ ಪರದಾಟ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮಸ್ಥರ ಹೋರಾಟ
ಕಾರವಾರ, ಜೂ22: ಕರಾವಳಿ ಭಾಗದಲ್ಲಿ ಸಾಮಾನ್ಯವಾಗಿ ಮಳೆಯ ಪ್ರಮಾಣ ಹೆಚ್ಚು, ಮಳೆಗಾಲ ಆರಂಭವಾದರೆ ಅಷ್ಟೇ ಇಲ್ಲಿ ಆ ಗ್ರಾಮ ಸಂಪೂರ್ಣವಾಗಿ ಸಂಪರ್ಕವನ್ನು ಕಳೆದುಕೊಳ್ಳುತ್ತದೆ. ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಸೇತುವೆಯೂ ಇಲ್ಲದೇ ಪ್ರತಿದಿನ ಗ್ರಾಮಸ್ಥರು ಪರದಾಡುತ್ತಿದ್ದಾರೆ.
ಇದೆಲ್ಲಾ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹಗುರಮನೆ ಹಾಗೂ ಮೇಲ್ಗದ್ದೆ ಗ್ರಾಮದಲ್ಲಿ ದಶಕಗಳಿಂದ ಓಡಾಟಕ್ಕೆ ಸರಿಯಾದ ರಸ್ತೆ, ಸೇತುವೆಯೂ ಇಲ್ಲದೆ ಗ್ರಾಮಸ್ಥರೆಲ್ಲ ಜಿಲ್ಲಾಧಿಕಾರಿ ಭೇಟಿಯಾಗಿ ಮೂಲಸೌಕರ್ಯ ಒದಗಿಸುವಂತೆ ಕೋರಿದ್ದಾರೆ.
ಹಗುರಮನೆ, ಮೇಲ್ಗದ್ದೆ ಗ್ರಾಮದಲ್ಲಿ ಸುಮಾರು 40ಕ್ಕೂ ಅಧಿಕ ಮನೆಗಳಿವೆ. ಇಲ್ಲಿನ ಬಹುತೇಕರಿಗೆ ಕೃಷಿಯೇ ಜೀವನಾಧಾರ. ಉದ್ಯೋಗ ಅರಸಿ ಹೊರಗೆ ಹೋಗುವವರ ಸಂಖ್ಯೆ ಕಡಿಮೆ. ಆದರೆ ಶಾಲಾ, ಕಾಲೇಜುಗಳಿಗೆ ತೆರಳುವ ಗ್ರಾಮದ ಸಾಕಷ್ಟು ವಿದ್ಯಾರ್ಥಿಗಳು ಕಷ್ಟಪಡುವಂತಾಗಿದೆ. ನದಿಗೆ ಸೇತುವೆ ಇಲ್ಲದ ಕಾರಣಕ್ಕೆ ಎಷ್ಟೋ ವಿದ್ಯಾರ್ಥಿಗಳು ಶಾಲೆಯನ್ನೇ ತೊರೆದ ನಿದರ್ಶನಗಳಿದ್ದು ಗ್ರಾಮಕ್ಕೆ ಸೇತುವೆ ಅತ್ಯಗತ್ಯವಾಗಿ ಬೇಕು.

ತುರ್ತು ಸಂದರ್ಭಗಳು ಎದುರಾದರೆ, ಯಾರಾದರೂ ಅನಾರೋಗ್ಯಕ್ಕೆ ತುತ್ತಾದರೆ ಅವರನ್ನು ಜೋಳಿಗೆಯಲ್ಲಿ ಹೊತ್ತು ನದಿ ದಾಟಬೇಕು. ಹೀಗಾಗಿ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡುವಂತೆ ದಶಕಗಳಿಂದ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಪ್ರತಿನಿತ್ಯ ಹೊಳೆ ದಾಟಿಕೊಂಡೇ ತೆರಳಬೇಕು
ವಾನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಗುರಮನೆ ಮತ್ತು ಮೇಲ್ಗದ್ದೆ ಗ್ರಾಮ, ಶಿರಸಿಯಿಂದ 35 ಕಿಮೀ ದೂರದಲ್ಲಿದೆ. ಈ ಗ್ರಾಮಕ್ಕೆ ಹೊಂದಿಕೊಂಡು ಬಿಳಿಹೊಳೆ ಹರಿಯುತ್ತಿದ್ದು, ಗ್ರಾಮಸ್ಥರು ಪ್ರತಿನಿತ್ಯದ ಓಡಾಡಲು ಹೊಳೆ ದಾಟಿಕೊಂಡೇ ತೆರಳಬೇಕು. ಆದರೆ ಈ ಹೊಳೆ ದಾಟಲು ಯಾವುದೇ ಪೂರಕ ವ್ಯವಸ್ಥೆಗಳಿಲ್ಲ. ಹೀಗಾಗಿ ಗ್ರಾಮಸ್ಥರು ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಾಗುವುದರಿಂದ ತಾತ್ಕಾಲಿಕ ಸೇತುವೆ ಮೇಲಿನ ಓಡಾಟ ಕಡಿತಗೊಳ್ಳುತ್ತದೆ.
ಈ ಸಂದರ್ಭದಲ್ಲಿ ಸುಮಾರು 8 ತಿಂಗಳುಗಳ ಕಾಲ ಗ್ರಾಮಕ್ಕೆ ಹೊರಜಗತ್ತಿನ ಸಂಪರ್ಕವೇ ಕಡಿತಗೊಳ್ಳುತ್ತದೆ. ಒಂದೆಡೆ ತುಂಬಿ ಹರಿಯುತ್ತಿರುವ ನದಿಯ ಮಧ್ಯೆ ಅನಾರೋಗ್ಯಪೀಡಿತರನ್ನು ಕಂಬಳಿಯಲ್ಲಿ ಹೊತ್ತೊಯ್ಯುತ್ತಿರುವುದು. ಇನ್ನೊಂದೆಡೆ ಅಡಿಕೆ ಸಂಕದ ಮೇಲೆ ಜೀವ ಕೈಯ್ಯಲ್ಲಿ ಹಿಡಿದುಕೊಂಡು ಸಾಗುತ್ತಿರುವ ಶಾಲಾ ಮಕ್ಕಳು. ಮತ್ತೊಂದೆಡೆ, ಗ್ರಾಮದ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಬಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸೇತುವೆ ನಿರ್ಮಾಣವಾಗದಿದ್ದಲ್ಲಿ ಚುನಾವಣೆ ಬಹಿಷ್ಕಾರ ಎಚ್ಚರಿಕೆ
ಈ ಹಿಂದೆ ಗ್ರಾಮಕ್ಕೆ ಸೇತುವೆ ನಿರ್ಮಿಸಲು ಯೋಜನೆ ಮಂಜೂರಾಗಿದ್ದು ಇನ್ನೇನು ಸೇತುವೆ ನಿರ್ಮಾಣವಾಗಬೇಕು ಎನ್ನುವಾಗಲೇ ಆ ಗ್ರಾಮದ ಸೇತುವೆ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ. ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆಯವರ ಕ್ಷೇತ್ರವೇ ಆಗಿದ್ದರೂ ಈ ಗ್ರಾಮಸ್ಥರಿಗೆ ಸೇತುವೆ ಭಾಗ್ಯ ಮಾತ್ರ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣವಾಗದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications