ಕಾರವಾರದಲ್ಲಿ ನಿರ್ಮಾಣವಾಗಲಿದೆ ಇಂಟರ್ ನ್ಯಾಷನಲ್ ಸ್ಟೇಡಿಯಮ್!
ಕಾರವಾರ, ಡಿಸೆಂಬರ್ 06: ತಾಲೂಕಿನ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದ 11 ಎಕರೆ ಸರ್ಕಾರಿ ಜಾಗದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ನಿರ್ಮಿಸಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ಗೆ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ಮಂಜೂರಾತಿ ನೀಡಿದೆ.
ಸುಮಾರು ಒಂದು ವರ್ಷದ ಹಿಂದೆ ಕಾರವಾರಕ್ಕೆ ಒಂದು ಸುಸಜ್ಜಿತ ಅಂತರಾಷ್ಟ್ರೀಯ ಕ್ರಿಕೇಟ್ ಕ್ರೀಡಾಂಗಣದ ಅವಶ್ಯಕತೆಯನ್ನು ಅರಿತ ಅಂದಿನ ಶಾಸಕ ಸತೀಶ ಸೈಲ್, ರಾಜ್ಯ ಕ್ರಿಕೆಟ್ ಸಂಸ್ಥೆಯೊಡನೆ ಸಮಾಲೋಚಿಸಿ ಅವರ ಮನವೊಲಿಸಿದ್ದರು.
ಈ ಬಗ್ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರೊಂದಿಗೆ ಸಮಾಲೋಚಿಸಿ, ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದಲ್ಲಿ ಲಭ್ಯವಿದ್ದ ಸರಕಾರಿ ಜಾಗದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ನಿರ್ಮಿಸಲು ಜಿಲ್ಲಾಡಳಿತವು ಒಪ್ಪಿಗೆ ನೀಡುವಂತೆ ಶ್ರಮವಹಿಸಿದ್ದರು.

ತದನಂತರ ರಾಜ್ಯ ಕ್ರಿಕೆಟ್ ಅಕೆಡೆಮಿ ಸಂಸ್ಥೆ ವತಿಯಿಂದ ಉನ್ನತ ಅಧಿಕಾರಿಗಳು ಕಾರವಾರದ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದ ಸರಕಾರಿ ಜಾಗವನ್ನು ಪರೀಕ್ಷಿಸಿ, ತಮಗೆ ಅವಶ್ಯಕತೆ ಇರುವ 11 ಎಕರೆ ಜಾಗವನ್ನು ಗುರುತಿಸಿ ಜಿಲ್ಲಾಡಳಿತಕ್ಕೆ ತಿಳಿಸಿದ್ದರು. ಆ ಪ್ರಕಾರ ಮುಂದಿನ ಕಾರ್ಯಸೂಚಿಯಂತೆ ರಾಜ್ಯ ಕಂದಾಯ ಇಲಾಖೆಯಿಂದ ಸಾವರಪೈ ಪ್ರದೇಶದ 11 ಎಕರೆ ಜಾಗವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗೆ ವಾರ್ಷಿಕ ಬಾಡಿಗೆಯ ಮೇಲೆ ಬೋಗ್ಯಕ್ಕೆ ನೀಡಿದ್ದರು.
ಮುಂದುವರಿದು, ಜಿಲ್ಲಾಡಳಿತ ಸದ್ರಿ 11 ಎಕರೆ ಜಾಗವನ್ನು ಕೆ.ಎಸ್.ಸಿ.ಎ. ಗೆ ಬೋಗ್ಯಕ್ಕೆ ನೀಡುವ ಬಗ್ಗೆ ಸೂಕ್ತ ಕರಾರು ಪತ್ರವನ್ನು ತಯಾರಿಸಿ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದರು.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಧ್ಯತೆ- ಬಾಧ್ಯತೆಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲಾಡಳಿತ ಕಳುಹಿಸಿರುವ ಪ್ರಸ್ತಾವನೆಗೆ ಅಂತಿಮ ಅನುಮೋದನೆಯನ್ನು ನೀಡಿದರು. ಆ ಮೂಲಕ ಕಾರವಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ನಿರ್ಮಿಸಲು ಹಸಿರು ನಿಶಾನೆ ದೊರಕಿರುವುದು ಕ್ಷೇತ್ರದ ಯುವಜನರ ಕನಸಿಗೆ ಇಂಬು ನೀಡಿದಂತಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications