ಡಿ.21ರಿಂದ ಮೂರು ದಿನಗಳವರೆಗೆ ಕಾರವಾರದಲ್ಲಿ ಅಂತರರಾಷ್ಟ್ರೀಯ ವೈನ್ ಮೇಳ
ಕಾರವಾರ, ಡಿಸೆಂಬರ್ 20 : ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹಾಗೂ ಕರ್ನಾಟಕ ದ್ರಾಕ್ಷರಸ ಮಂಡಳಿ ಸಹಯೋಹದಲ್ಲಿ ಡಿ.21ರಿಂದ 23ವರೆಗೆ ಅಂತರಾಷ್ಟ್ರೀಯ ವೈನ್ ಮೇಳವನ್ನು ನಗರದ ಕಾಳಿ ರಿವರ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದ್ರಾಕ್ಷರಸ ಮಂಡಳಿ ವ್ಯವಸ್ಥಾಪಕರ ನಿರ್ದೇಶಕ ಟಿ ಸೋಮು ಹೇಳಿದರು.
ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಮಾರು 150 ಕ್ಕೂ ಹೆಚ್ಚು ವಿವಿಧ ವೈನ್ ಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚಿಲ್ಲಿ, ಅಮೇರಿಕಾ ಮತ್ತು ಇತರೆ ದೇಶಗಳ ವೈನ್ ಗಳು ಪ್ರದರ್ಶನವಾಗಲಿವೆ.
ಕರ್ನಾಟಕದಲ್ಲಿ ವೈನ್ ಉತ್ಪಾದನೆಗೆ ಸೂಕ್ತವಾದ ದ್ರಾಕ್ಷಿ ತಳಿಗಳನ್ನು ಬೆಳೆಯಲು ಹಾಗೂ ರಾಜ್ಯದ ವೈನ್ ತಯಾರಕರಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆ ಪರಿಚಯಿಸಲು ಮತ್ತು ರಾಜ್ಯದಲ್ಲಿ ವೈನ್ ಬಳಕೆ ಹೆಚ್ಚಿಸಲು ಅನುವುಮಾಡಿಕೊಡುವ ಸಲುವಾಗಿ ಅಂತರಾಷ್ಟ್ರೀಯ ದ್ರಾಕ್ಷಾರಸ ಉತ್ಸವ ಆಯೋಜಿಸಲಾಗಿದೆ ಎಂದರು.

ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಉದ್ಘಾಟಿಸಲಿದ್ದು, ತೋಟಕಾರಿಕೆ ಸಚಿವ ಎಂ ಸಿ ಮನಗೂಳಿ ಹಾಗೂ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಉಪಸ್ಥಿತರು ಇರಲಿದ್ದಾರೆ. ಮೂರು ದಿನವೂ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರವೇಶ ದರ ರೂ.20 ನಿಗದಿ ಮಾಡಲಾಗಿದೆ ಎಂದು ಟಿ ಸೋಮು ಮಾಹಿತಿ ನೀಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications