ಇಸ್ಲಾಂ ಕುರಿತ ಹೇಳಿಕೆ; ಅನಂತಕುಮಾರ್ ಹೆಗಡೆ ಆರೋಪ ಮುಕ್ತ
ಶಿರಸಿ, ಡಿಸೆಂಬರ್ 29; "ಎಲ್ಲಿಯವರೆಗೆ ಜಗತ್ತಿನಲ್ಲಿ ಇಸ್ಲಾಂ ಇರುತ್ತದೆಯೋ, ಅಲ್ಲಿಯವರೆಗೆ ಭಯೋತ್ಪಾದನೆ ಇರುತ್ತದೆ" ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ಅವರು ಖುಲಾಸೆಗೊಂಡಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ಅವರನ್ನು ಖುಲಾಸೆಗೊಳಿಸಿದೆ. ಶಿರಸಿಯಲ್ಲಿ 2016ರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಹೇಳಿಕೆಯನ್ನು ಅವರು ನೀಡಿದ್ದರು.
"ಎಲ್ಲಿಯವರೆಗೆ ಜಗತ್ತಿನಲ್ಲಿ ಇಸ್ಲಾಂ ಇರುತ್ತದೆಯೋ, ಅಲ್ಲಿಯವರೆಗೆ ಭಯೋತ್ಪಾದನೆ ಇರುತ್ತದೆ. ಇಸ್ಲಾಂ ಜಗತ್ತಿನ ಶಾಂತಿಗೆ ಇಟ್ಟಿರುವ ಬಾಂಬ್. ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಭಟ್ಕಳ ಭಯೋತ್ಪಾದನೆಯ ಕೇಂದ್ರವಾಗಿದೆ' ಎಂದು ಹೇಳಿಕೆ ಕೊಟ್ಟಿದ್ದರು.

"ಪತ್ರಿಕೆಗಳಲ್ಲಿ ಬರಿಯೋ ಅವಕಾಶ ಇದ್ದರೆ ಇದೇ ಶಬ್ದಗಳಲ್ಲಿ ಬರೆಯಿರಿ. ಶೇ 100ರಷ್ಟು ನಾನು ನೀಡುವ ಹೇಳಿಕೆಯನ್ನು ಮುಂದೆಯೂ ಒಪ್ಪಿಕೊಳ್ಳುತ್ತೇನೆ. ಮುಂದೆ ನಾನು ಈ ವಾಕ್ಯವನ್ನು ಹೇಳಿಲ್ಲ ಅಂತಲೂ ಹೇಳುವುದಿಲ್ಲ" ಎಂದು ಕೂಡ ಮಾಧ್ಯಮದವರಿಗೆ ಸವಾಲು ಹಾಕಿದ್ದರು.
ಸಂಸದರ ಹೇಳಿಕೆಯಿಂದಾಗಿ ಮುಸಲ್ಮಾನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಮುರಾದ್ ಹುಸೇನ್ ಎನ್ನುವವರು ದೂರು ನೀಡಿದ್ದರು. ಆದರೆ, ಸಂಸದರ ಪರ ವಕೀಲ ಸಂತೋಷ್ ನಗರಾಳೆ, "ಈ ಹೇಳಿಕೆಗಳನ್ನು ಅವರು ಉದ್ದೇಶಪೂರ್ವಕವಾಗಿ ನೀಡಿದ್ದಲ್ಲ. ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವೂ ಅವರಿಗೆ ಇರಲಿಲ್ಲ" ಎಂದು ವಾದ ಮಂಡನೆ ಮಾಡಿದ್ದರು.
ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಪ್ರಕರಣದಿಂದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications