Gokarna: ಗೋಕರ್ಣ ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ದಿಢೀರ್ ನಾಪತ್ತೆ: ದೂರು ದಾಖಲು
ಕಾರವಾರ, ಫೆಬ್ರವರಿ 07: ಸಾಮಾನ್ಯವಾಗಿ ಗೋಕರ್ಣ ಪ್ರವಾಸಕ್ಕೆ ಪ್ರತಿನಿತ್ಯ ನೂರಾರು ವಿದೇಶಿಗರು ಆಗಮಿಸುತ್ತಾರೆ. ಹಲವಾರು ವಿದೇಶಿಗರು ವಾರ, ತಿಂಗಳುಗಟ್ಟಲೆ ಅಲ್ಲೇ ಇದ್ದು ಸಮುದ್ರ ತಟದಲ್ಲಿ ಸಮಯ ಕಳೆಯುತ್ತಾರೆ. ಇದೇ ರೀತಿ ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆಯೊಬ್ಬರು ದಿಢೀರ್ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಜಪಾನ್ ಮೂಲದ ಮಹಿಳೆಯೊಬ್ಬರು ಕುಮಟಾ ತಾಲೂಕಿನ ಗೋಕರ್ಣದಲ್ಲಿ ಏಕಾಏಕಿ ನಾಪತ್ತೆಯಾಗಿದ್ದಾರೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಮಹಿಳೆ ಎಮಿ ಯಮಾಝಕಿ ಪತಿಯೊಂದಿಗೆ ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದರು. ಈಕೆ ಫೆಬ್ರವರಿ 5ರಂದು ಗೋಕರ್ಣ ಬಂಗ್ಲೆಗುಡ್ಡೆ ನೇಚರ್ ಕಾಟೇಜ್ನಲ್ಲಿ ಪತಿ ಜೊತೆ ತಂಗಿದ್ದಳು. ಬೆಳಗ್ಗೆ 10:30ರ ವೇಳೆ ಕಾಟೇಜ್ನಿಂದ ಹೊರ ಹೋಗಿದ್ದರು. ಆದರೆ ಆ ಮಹಿಳೆ ಮರಳಿ ಕಾಟೇಜ್ಗೆ ಬಂದಿಲ್ಲ. ಪತಿಗೂ ಗೊತ್ತಿಲ್ಲದಂತೆ ದಿಢೀರ್ ಕಣ್ಮರೆಯಾಗಿದ್ದಾರೆ.
ಪತ್ನಿ ಎಮಿ ಯಮಾಝಕಿ ವಾಪಸ್ ಬಾರದ ಹಿನ್ನೆಲೆಯಲ್ಲಿ ಕಾಣೆಯಾದ ಮಹಿಳೆಯ ಪತಿ ದೈ ಯಮಾಝಕಿ ಗೋಕರ್ಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ವಿದೇಶಿ ಮಹಿಳೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡಿರುವ ಗೋಕರ್ಣ ಪೊಲೀಸರು ಪತಿ ದೈ ಯಮಾಝಕಿಯಿಂದ ಪಡೆದ ಪ್ರಾಥಮಿಕ ಮಾಹಿತಿ ಹಾಗೂ ಫೋಟೋ ಬಳಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ.
ಮದುವೆಯಾದ ಒಂದೇ ತಿಂಗಳಿಗೆ ಬಿಟ್ಟಹೋದ ಪತ್ನಿ : ನ್ಯಾಷನಲ್ ಕಬ್ಬಡಿ ಆಟಗಾರ ಸಾವಿಗೆ ಶರಣು
ಚಿಕ್ಕಮಗಳೂರು: ಮದುವೆಯಾದ ಒಂದೇ ತಿಂಗಳಿಗೆ ಪತ್ನಿ ಬಿಟ್ಟಹೋದ ಹಿನ್ನೆಲೆಯಲ್ಲಿ ನ್ಯಾಷನಲ್ ಲೆವೆಲ್ ಕಬ್ಬಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ ರಾಜ್ ಅರಸ್ ಮೃತ ದುರ್ದೈವಿ.
ತೇಗೂರು ಗ್ರಾಮದ ವಿನೋದ್ ರಾಜ್ ಅರಸ್ ಶುಕ್ರವಾರ ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. 2023 ಡಿ.10 ರಂದು ವಿನೋದ್ ರಾಜ್ ಅರಸ್ ಮದುವೆಯಾಗಿದ್ದರು, ಡಿ.31ಕ್ಕೆ ಪತಿ ಬೇಡ ಎಂದು ಪತ್ನಿ ಬಿಟ್ಟು ಹೋಗಿದ್ದು, ಇವರು ಎರಡು ವರ್ಷದ ಪ್ರೀತಿಸಿ ವಿನೋದ್ ಮದುವೆಯಾಗಿದ್ದರು ಎನ್ನಲಾಗಿದೆ. ಡಿ.31ರಂದು ಇವರ ಪ್ರೇಮ ವಿವಾಹ ಮಹಿಳಾ ಪೊಲೀಸ್ ಠಾಣಾ ಮೆಟ್ಟೀಲೇರಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications