Gokarna: ಗೋಕರ್ಣ ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ದಿಢೀರ್ ನಾಪತ್ತೆ: ದೂರು ದಾಖಲು
ಕಾರವಾರ, ಫೆಬ್ರವರಿ 07: ಸಾಮಾನ್ಯವಾಗಿ ಗೋಕರ್ಣ ಪ್ರವಾಸಕ್ಕೆ ಪ್ರತಿನಿತ್ಯ ನೂರಾರು ವಿದೇಶಿಗರು ಆಗಮಿಸುತ್ತಾರೆ. ಹಲವಾರು ವಿದೇಶಿಗರು ವಾರ, ತಿಂಗಳುಗಟ್ಟಲೆ ಅಲ್ಲೇ ಇದ್ದು ಸಮುದ್ರ ತಟದಲ್ಲಿ ಸಮಯ ಕಳೆಯುತ್ತಾರೆ. ಇದೇ ರೀತಿ ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಮಹಿಳೆಯೊಬ್ಬರು ದಿಢೀರ್ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಜಪಾನ್ ಮೂಲದ ಮಹಿಳೆಯೊಬ್ಬರು ಕುಮಟಾ ತಾಲೂಕಿನ ಗೋಕರ್ಣದಲ್ಲಿ ಏಕಾಏಕಿ ನಾಪತ್ತೆಯಾಗಿದ್ದಾರೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಮಹಿಳೆ ಎಮಿ ಯಮಾಝಕಿ ಪತಿಯೊಂದಿಗೆ ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದರು. ಈಕೆ ಫೆಬ್ರವರಿ 5ರಂದು ಗೋಕರ್ಣ ಬಂಗ್ಲೆಗುಡ್ಡೆ ನೇಚರ್ ಕಾಟೇಜ್ನಲ್ಲಿ ಪತಿ ಜೊತೆ ತಂಗಿದ್ದಳು. ಬೆಳಗ್ಗೆ 10:30ರ ವೇಳೆ ಕಾಟೇಜ್ನಿಂದ ಹೊರ ಹೋಗಿದ್ದರು. ಆದರೆ ಆ ಮಹಿಳೆ ಮರಳಿ ಕಾಟೇಜ್ಗೆ ಬಂದಿಲ್ಲ. ಪತಿಗೂ ಗೊತ್ತಿಲ್ಲದಂತೆ ದಿಢೀರ್ ಕಣ್ಮರೆಯಾಗಿದ್ದಾರೆ.
ಪತ್ನಿ ಎಮಿ ಯಮಾಝಕಿ ವಾಪಸ್ ಬಾರದ ಹಿನ್ನೆಲೆಯಲ್ಲಿ ಕಾಣೆಯಾದ ಮಹಿಳೆಯ ಪತಿ ದೈ ಯಮಾಝಕಿ ಗೋಕರ್ಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ವಿದೇಶಿ ಮಹಿಳೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡಿರುವ ಗೋಕರ್ಣ ಪೊಲೀಸರು ಪತಿ ದೈ ಯಮಾಝಕಿಯಿಂದ ಪಡೆದ ಪ್ರಾಥಮಿಕ ಮಾಹಿತಿ ಹಾಗೂ ಫೋಟೋ ಬಳಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ.
ಮದುವೆಯಾದ ಒಂದೇ ತಿಂಗಳಿಗೆ ಬಿಟ್ಟಹೋದ ಪತ್ನಿ : ನ್ಯಾಷನಲ್ ಕಬ್ಬಡಿ ಆಟಗಾರ ಸಾವಿಗೆ ಶರಣು
ಚಿಕ್ಕಮಗಳೂರು: ಮದುವೆಯಾದ ಒಂದೇ ತಿಂಗಳಿಗೆ ಪತ್ನಿ ಬಿಟ್ಟಹೋದ ಹಿನ್ನೆಲೆಯಲ್ಲಿ ನ್ಯಾಷನಲ್ ಲೆವೆಲ್ ಕಬ್ಬಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ ರಾಜ್ ಅರಸ್ ಮೃತ ದುರ್ದೈವಿ.
ತೇಗೂರು ಗ್ರಾಮದ ವಿನೋದ್ ರಾಜ್ ಅರಸ್ ಶುಕ್ರವಾರ ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. 2023 ಡಿ.10 ರಂದು ವಿನೋದ್ ರಾಜ್ ಅರಸ್ ಮದುವೆಯಾಗಿದ್ದರು, ಡಿ.31ಕ್ಕೆ ಪತಿ ಬೇಡ ಎಂದು ಪತ್ನಿ ಬಿಟ್ಟು ಹೋಗಿದ್ದು, ಇವರು ಎರಡು ವರ್ಷದ ಪ್ರೀತಿಸಿ ವಿನೋದ್ ಮದುವೆಯಾಗಿದ್ದರು ಎನ್ನಲಾಗಿದೆ. ಡಿ.31ರಂದು ಇವರ ಪ್ರೇಮ ವಿವಾಹ ಮಹಿಳಾ ಪೊಲೀಸ್ ಠಾಣಾ ಮೆಟ್ಟೀಲೇರಿತ್ತು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications