ಕಾರವಾರ ನಗರಸಭೆ ಚುನಾವಣೆ: ಬಿಜೆಪಿಗೆ ಆನಂದ್ ಅಸ್ನೋಟಿಕರ್ ಬೆಂಬಲ
ಕಾರವಾರ, ಅಕ್ಟೋಬರ್ 30: ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಗುರುವಾರ ಘೋಷಣೆ ಮಾಡಿದ್ದಾರೆ.
31 ಸದಸ್ಯ ಬಲದ ಕಾರವಾರ ನಗರಸಭೆಯಲ್ಲಿ ತಲಾ 11 ಸ್ಥಾನವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಗೆದ್ದಿದ್ದರೆ, ಜೆಡಿಎಸ್ 4 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆದ್ದಿದ್ದರು. ಇನ್ನು ಗೆದ್ದಂತಹ ಇಬ್ಬರು ಪಕ್ಷೇತರರು ಆನಂದ್ ಅಸ್ನೋಟಿಕರ್ ಜೊತೆ ಗುರುತಿಸಿಕೊಂಡಿದ್ದು, ಆರು ಜನ ಸದಸ್ಯರು ಆನಂದ್ ಒಟ್ಟಿಗೆ ಇದ್ದ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಯಾರೇ ಬರಲು ಜೆಡಿಎಸ್ ಬೆಂಬಲ ಅನಿವಾರ್ಯವಾಗಿತ್ತು.
ನವೆಂಬರ್ 1ರಂದು ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಜೆಡಿಎಸ್ ಪಕ್ಷದ ನಾಲ್ವರು ಹಾಗೂ ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ಕೊಡಲಿದ್ದಾರೆ. ನಗರಸಭೆಯ ಸಂಪೂರ್ಣ ಆಡಳಿತವನ್ನು ಬಿಜೆಪಿಗರೇ ಮಾಡಲಿದ್ದು, ನಾವು ಬಾಹ್ಯ ಬೆಂಬಲ ಕೊಡಲಿದ್ದೇವೆ ಎಂದು ಆನಂದ್ ಅಸ್ನೋಟಿಕರ್ ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.

ನಗರಸಭೆ ಚುನಾವಣೆಯಾಗಿ ಎರಡು ವರ್ಷವಾದರೂ ಸದಸ್ಯರಿಗೆ ಅಧಿಕಾರ ಸಿಗದೇ ಇದ್ದದ್ದು ಬೇಸರ ತಂದಿದೆ. ಈಗ ಚುನಾವಣೆ ನಡೆಸಲು ನಿರ್ಧರಿಸಿದ್ದು, ಕಾರವಾರದ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲ ಕೊಡಲು ನಿರ್ಧರಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಹೆಚ್ಚಿನ ಅನುದಾನ ತರಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಡಿಕೆ ಇಲ್ಲದೇ ಬೆಂಬಲ ಕೊಡಲು ನಿರ್ಧರಿಸಿದ್ದೇವೆ ಎಂದರು.
ಜೆಡಿಎಸ್ ಬೆಂಬಲ ನೀಡಿರುವುದು ಸ್ವಾಗತಾರ್ಹ: ರೂಪಾಲಿ ನಾಯ್ಕ
ಕಾರವಾರ ನಗರಸಭೆಯಲ್ಲಿ ಬಿಜೆಪಿ ಆಡಳಿತ ನಡೆಸಲು ಜೆಡಿಎಸ್ ಬೆಂಬಲ ನೀಡಿರುವುದು ಸ್ವಾಗತಾರ್ಹ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದ್ದಾರೆ. ನಗರಸಭೆಯಲ್ಲಿ ಉತ್ತಮ ಆಡಳಿತವನ್ನು ಮುಂದಿನ ದಿನದಲ್ಲಿ ಬಿಜೆಪಿ ಕೊಡಲಿದೆ. ಎಲ್ಲರೂ ಕುಳಿತು ಚರ್ಚೆ ನಡೆಸಿಯೇ ತಿರ್ಮಾನಗ ತೆಗೆದುಕೊಳ್ಳಲಿದ್ದೇವೆ. ಮುಂದಿನ ದಿನದಲ್ಲಿ ಕಾರವಾರ ನಗರಸಭೆ ಮಾದರಿ ನಗರಸಭೆ ಎನ್ನುವ ಹೆಗ್ಗಳಿಕೆ ಪಡೆಯಬೇಕೆಂಬುದು ನಮ್ಮ ಉದ್ದೇಶ ಎಂದಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications