ಕಾರವಾರ ನಗರಸಭೆ ಚುನಾವಣೆ: ಬಿಜೆಪಿಗೆ ಆನಂದ್ ಅಸ್ನೋಟಿಕರ್ ಬೆಂಬಲ
ಕಾರವಾರ, ಅಕ್ಟೋಬರ್ 30: ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಗುರುವಾರ ಘೋಷಣೆ ಮಾಡಿದ್ದಾರೆ.
31 ಸದಸ್ಯ ಬಲದ ಕಾರವಾರ ನಗರಸಭೆಯಲ್ಲಿ ತಲಾ 11 ಸ್ಥಾನವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಗೆದ್ದಿದ್ದರೆ, ಜೆಡಿಎಸ್ 4 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆದ್ದಿದ್ದರು. ಇನ್ನು ಗೆದ್ದಂತಹ ಇಬ್ಬರು ಪಕ್ಷೇತರರು ಆನಂದ್ ಅಸ್ನೋಟಿಕರ್ ಜೊತೆ ಗುರುತಿಸಿಕೊಂಡಿದ್ದು, ಆರು ಜನ ಸದಸ್ಯರು ಆನಂದ್ ಒಟ್ಟಿಗೆ ಇದ್ದ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಯಾರೇ ಬರಲು ಜೆಡಿಎಸ್ ಬೆಂಬಲ ಅನಿವಾರ್ಯವಾಗಿತ್ತು.
ನವೆಂಬರ್ 1ರಂದು ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು, ಜೆಡಿಎಸ್ ಪಕ್ಷದ ನಾಲ್ವರು ಹಾಗೂ ಇಬ್ಬರು ಪಕ್ಷೇತರರು ಬಿಜೆಪಿಗೆ ಬೆಂಬಲ ಕೊಡಲಿದ್ದಾರೆ. ನಗರಸಭೆಯ ಸಂಪೂರ್ಣ ಆಡಳಿತವನ್ನು ಬಿಜೆಪಿಗರೇ ಮಾಡಲಿದ್ದು, ನಾವು ಬಾಹ್ಯ ಬೆಂಬಲ ಕೊಡಲಿದ್ದೇವೆ ಎಂದು ಆನಂದ್ ಅಸ್ನೋಟಿಕರ್ ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.

ನಗರಸಭೆ ಚುನಾವಣೆಯಾಗಿ ಎರಡು ವರ್ಷವಾದರೂ ಸದಸ್ಯರಿಗೆ ಅಧಿಕಾರ ಸಿಗದೇ ಇದ್ದದ್ದು ಬೇಸರ ತಂದಿದೆ. ಈಗ ಚುನಾವಣೆ ನಡೆಸಲು ನಿರ್ಧರಿಸಿದ್ದು, ಕಾರವಾರದ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲ ಕೊಡಲು ನಿರ್ಧರಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಹೆಚ್ಚಿನ ಅನುದಾನ ತರಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಡಿಕೆ ಇಲ್ಲದೇ ಬೆಂಬಲ ಕೊಡಲು ನಿರ್ಧರಿಸಿದ್ದೇವೆ ಎಂದರು.
ಜೆಡಿಎಸ್ ಬೆಂಬಲ ನೀಡಿರುವುದು ಸ್ವಾಗತಾರ್ಹ: ರೂಪಾಲಿ ನಾಯ್ಕ
ಕಾರವಾರ ನಗರಸಭೆಯಲ್ಲಿ ಬಿಜೆಪಿ ಆಡಳಿತ ನಡೆಸಲು ಜೆಡಿಎಸ್ ಬೆಂಬಲ ನೀಡಿರುವುದು ಸ್ವಾಗತಾರ್ಹ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದ್ದಾರೆ. ನಗರಸಭೆಯಲ್ಲಿ ಉತ್ತಮ ಆಡಳಿತವನ್ನು ಮುಂದಿನ ದಿನದಲ್ಲಿ ಬಿಜೆಪಿ ಕೊಡಲಿದೆ. ಎಲ್ಲರೂ ಕುಳಿತು ಚರ್ಚೆ ನಡೆಸಿಯೇ ತಿರ್ಮಾನಗ ತೆಗೆದುಕೊಳ್ಳಲಿದ್ದೇವೆ. ಮುಂದಿನ ದಿನದಲ್ಲಿ ಕಾರವಾರ ನಗರಸಭೆ ಮಾದರಿ ನಗರಸಭೆ ಎನ್ನುವ ಹೆಗ್ಗಳಿಕೆ ಪಡೆಯಬೇಕೆಂಬುದು ನಮ್ಮ ಉದ್ದೇಶ ಎಂದಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications