ಉತ್ತರ ಕನ್ನಡ: ಧರೆ ಕುಸಿತ, ಐದು ತಾಸು ಸಂಚಾರ ಸ್ಥಗಿತ
ಕಾರವಾರ, ಜೂನ್.13: ಸಿದ್ದಾಪುರ ತಾಲ್ಲೂಕಿನ ಜೋಗಿನಮಠ (ಹೊನ್ನಾವರ-ತುಮಕೂರ ರಾಷ್ಟ್ರೀಯ ಹೆದ್ದಾರಿ 206) ರಸ್ತೆ ಪಕ್ಕದ ಧರೆ ಬುಧವಾರ ನಸುಕಿನಲ್ಲಿ ಕುಸಿದು ರಸ್ತೆ ಸಂಚಾರ ಐದಾರು ತಾಸು ಸಂಪೂರ್ಣ ಸ್ಥಗಿತಗೊಂಡ ಘಟನೆ ಬುಧವಾರ ನಡೆದಿದೆ.
ಕೆಲ ದಿನಗಳಿಂದ ಜಿಲ್ಲೆಯ ಮಲೆನಾಡ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಮಣ್ಣು ಮೃದುಗೊಂಡು ಧರೆ ಕುಸಿದಿದೆ.
ಸುಮಾರು 9 ಮರಗಳು ಹಾಗೂ ಬೃಹತ್ ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದವು. ಇದರಿಂದಾಗಿ ವಾಹನಗಳೆಲ್ಲವೂ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತವು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ ಸಿಬ್ಬಂದಿ ಸತತ ಮೂರ್ನಾಲ್ಕು ಗಂಟೆಗಳ ಕಾಲ ಶ್ರಮಿಸಿ ರಸ್ತೆಗೆ ಅಡ್ಡಲಾಗಿದ್ದ ಮರ ಹಾಗೂ ಬಂಡೆಗಳನ್ನು ತೆರವು ಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿಕೊಟ್ಟರು.

ತಹಶೀಲ್ದಾರ್ ಪುಟ್ಟರಾಜ ಗೌಡ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ರಸ್ತೆ ಸಂಚಾರ ಐದಾರು ತಾಸು ಸಂಪೂರ್ಣ ಸ್ಥಗಿತಗೊಂಡ ಘಟನೆ ಬುಧವಾರ ನಡೆದಿದೆ.
ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯ ಭಟ್ಕಳ, ಹೊನ್ನಾವರ, ಕಾರವಾರ, ಹಳಿಯಾಳ, ದಾಂಡೇಲಿ ಹಾಗೂ ಮುಂಡಗೋಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ, ಆಗಾಗ ಗುಡ್ಡಗಳು ಕುಸಿಯುವುದು ಸಾಮಾನ್ಯವಾಗಿದೆ.
ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ಗುಡ್ಡ ಕುಸಿದು ಜೀವಹಾನಿ ಸಂಭವಿಸದಂತೆ ಹೊನ್ನಾವರ ತಾಲೂಕಿನ ಕೆಳಗಿನೂರು, ಕರ್ಕಿ ಹಾಗೂ ಕುಮಟಾ ತಾಲೂಕಿನ ತಂಡ್ರಕುಳಿಯಲ್ಲಿ ಕುಟುಂಬಗಳನ್ನು ತಾತ್ಕಾಲಿಕವಾಗಿ ಮೂರ್ನಾಲ್ಕು ತಿಂಗಳ ಅವಧಿಗೆ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications