ಉತ್ತರ ಕನ್ನಡ: ಧರೆ ಕುಸಿತ, ಐದು ತಾಸು ಸಂಚಾರ ಸ್ಥಗಿತ
ಕಾರವಾರ, ಜೂನ್.13: ಸಿದ್ದಾಪುರ ತಾಲ್ಲೂಕಿನ ಜೋಗಿನಮಠ (ಹೊನ್ನಾವರ-ತುಮಕೂರ ರಾಷ್ಟ್ರೀಯ ಹೆದ್ದಾರಿ 206) ರಸ್ತೆ ಪಕ್ಕದ ಧರೆ ಬುಧವಾರ ನಸುಕಿನಲ್ಲಿ ಕುಸಿದು ರಸ್ತೆ ಸಂಚಾರ ಐದಾರು ತಾಸು ಸಂಪೂರ್ಣ ಸ್ಥಗಿತಗೊಂಡ ಘಟನೆ ಬುಧವಾರ ನಡೆದಿದೆ.
ಕೆಲ ದಿನಗಳಿಂದ ಜಿಲ್ಲೆಯ ಮಲೆನಾಡ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಮಣ್ಣು ಮೃದುಗೊಂಡು ಧರೆ ಕುಸಿದಿದೆ.
ಸುಮಾರು 9 ಮರಗಳು ಹಾಗೂ ಬೃಹತ್ ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದವು. ಇದರಿಂದಾಗಿ ವಾಹನಗಳೆಲ್ಲವೂ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತವು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ ಸಿಬ್ಬಂದಿ ಸತತ ಮೂರ್ನಾಲ್ಕು ಗಂಟೆಗಳ ಕಾಲ ಶ್ರಮಿಸಿ ರಸ್ತೆಗೆ ಅಡ್ಡಲಾಗಿದ್ದ ಮರ ಹಾಗೂ ಬಂಡೆಗಳನ್ನು ತೆರವು ಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿಕೊಟ್ಟರು.

ತಹಶೀಲ್ದಾರ್ ಪುಟ್ಟರಾಜ ಗೌಡ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ರಸ್ತೆ ಸಂಚಾರ ಐದಾರು ತಾಸು ಸಂಪೂರ್ಣ ಸ್ಥಗಿತಗೊಂಡ ಘಟನೆ ಬುಧವಾರ ನಡೆದಿದೆ.
ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯ ಭಟ್ಕಳ, ಹೊನ್ನಾವರ, ಕಾರವಾರ, ಹಳಿಯಾಳ, ದಾಂಡೇಲಿ ಹಾಗೂ ಮುಂಡಗೋಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ, ಆಗಾಗ ಗುಡ್ಡಗಳು ಕುಸಿಯುವುದು ಸಾಮಾನ್ಯವಾಗಿದೆ.
ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ಗುಡ್ಡ ಕುಸಿದು ಜೀವಹಾನಿ ಸಂಭವಿಸದಂತೆ ಹೊನ್ನಾವರ ತಾಲೂಕಿನ ಕೆಳಗಿನೂರು, ಕರ್ಕಿ ಹಾಗೂ ಕುಮಟಾ ತಾಲೂಕಿನ ತಂಡ್ರಕುಳಿಯಲ್ಲಿ ಕುಟುಂಬಗಳನ್ನು ತಾತ್ಕಾಲಿಕವಾಗಿ ಮೂರ್ನಾಲ್ಕು ತಿಂಗಳ ಅವಧಿಗೆ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications