ಸಮುದ್ರದಲ್ಲಿ 12 ಕಿ.ಮೀ ಒಬ್ಬಂಟಿಯಾಗಿ ಕಯಾಕ್ ಮಾಡಿ ಸಾಹಸ ಮೆರೆದ ಪತ್ರಕರ್ತ!
ಕಾರವಾರ, ಜನವರಿ 18: ಸಾಮಾನ್ಯವಾಗಿ ಪ್ರವಾಸಿಗರನ್ನು ಆಕರ್ಷಿಸಲು ನದಿಗಳಲ್ಲಿ ಕಯಾಕ್ ಸಾಹಸ ಚಟುವಟಿಕೆ ನಡೆಯೋದನ್ನು ನೋಡಿದ್ದೇವೆ. ಆದರೆ ಅರಬ್ಬಿ ಸಮುದ್ರದಲ್ಲಿ ಕಯಾಕ್ ಮಾಡುವ ಮೂಲಕ ಪತ್ರಕರ್ತನೋರ್ವ ಸಾಹಸ ಮೆರೆದಿದ್ದಾರೆ. ಉತ್ತರ ಕನ್ನಡದ ದಿಗ್ವಿಜಯ ನ್ಯೂಸ್ ಜಿಲ್ಲಾ ವರದಿಗಾರ ಶೇಷಗಿರಿ ಮುಂಡಳ್ಳಿ ಸಾಹಸ ಮೆರೆದ ಪತ್ರಕರ್ತರಾಗಿದ್ದಾರೆ.
ರವಿವಾರ ಬೆಳಿಗ್ಗೆ ಕಾರವಾರ ನಗರದ ಅಲಿಗದ್ದಾ ಕಡಲತೀರದಿಂದ ಒಬ್ಬಂಟಿಯಾಗಿ ಸಿಂಗಲ್ ಕಯಾಕ್ ಮೇಲೆ ತೆರಳಿದ ಇವರು ಆಳ ಸಮುದ್ರದಲ್ಲಿ ತಮ್ಮ ಪಯಣ ಮುಂದುವರಿಸಿದ್ದಾರೆ. ಕಡಲ ಅಲೆಯನ್ನು ಲೆಕ್ಕಿಸದೇ ಹುಟ್ಟು ಹಾಕುತ್ತಾ ಸಾಗಿದ್ದಾರೆ. ಒಂದು ತಾಸು 20 ನಿಮಿಷಗಳಲ್ಲಿ ಲೈಟ್ ಹೌಸ್ ಇರುವ ದ್ವೀಪ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿಂದೆ ಶಾಲಾ-ಕಾಲೇಜಿಗೆ ಹೋಗುವ ಸಂದಭರ್ದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಸೈಕಲ್ ರೇಸ್ ನಲ್ಲೂ ಕೂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಸಾಮಾನ್ಯವಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಸದಾ ಸುದ್ದಿಯಲ್ಲಿಯೇ ಇರುತ್ತಾರೆ. ಅವರಿಗೆ ಸಮಯ ವಿಶ್ರಾಂತಿ ಅಂತಾ ಸಿಗೋದಿಲ್ಲ. ಈ ನಡುವೆಯ ತಮ್ಮ ಒತ್ತಡ ಮರೆತು ಇವರು ನದಿಯನ್ನು ಮೀರಿದ ಸಮುದ್ರದಲ್ಲಿ ಕಯಾಕ್ ಅಡ್ವೆಂಚರ್ ಮಾಡಿ ಯಶಸ್ವಿಯಾಗಿರುವುದಕ್ಕ ಭೇಷ್ ಅನ್ನಲೇಬೇಕು.

ಇವರ ಸಾಹಸಮಯ ಕಾರ್ಯಕ್ಕೆ ಕರಾವಳಿ ಅಡ್ವೆಂಚರ್ ಪ್ರಕಾಶ ಹರಿಕಂತ್ರ, ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಟಿ.ಬಿ ಹರಿಕಾಂತ, ವಿಜಯವಾಣಿ ಜಿಲ್ಲಾ ವರದಿಗಾರ ಸುಭಾಷ್ ಧೂಪದಹೊಂಡ ಸೇರಿ ಕಾರವಾರ ಪತ್ರಕರ್ತರು ಸಹಕರಿಸಿದ್ದಕ್ಕೆ ಈ ಸಾಧನೆ ಸಾಧ್ಯವಾಗಿದೆ ಎಂದು ಶೇಷಗಿರಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸಾಹಸಮಯ ಚಟುವಟಿಕೆಗಳು ಕಡಿಮೆಯಾಗುತ್ತಿದೆ. ಮೊಬೈಲ್ ಹಿಡಿದು ಯುವ ಜನತೆ ಕಾಲ ಹರಣ ಮಾಡುತ್ತಿದ್ದಾರೆ. ಹೀಗಾಗಿ ಯುವ ಜನರ ಗಮನ ಸೆಳೆಯುವ ಸಲುವಾಗಿ ಅರಬ್ಬಿ ಸಮುದ್ರದಲ್ಲಿ ಈ ಸಾಹಸ ಮಾಡಿದ್ದಾರೆ. ಈ ಸಾಹಸಕ್ಕೆ ಕಾರವಾರದ ಪತ್ರಕರ್ತರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಜಿಲ್ಲೆಯ ವಿವಿದೆಡೆಯಿಂದ ಸ್ನೇಹಿತರು ಅಭಿನಂದಿಸಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications