Get Updates
Get notified of breaking news, exclusive insights, and must-see stories!

ಸ್ವೀಕರ್‌ ಕಾಗೇರಿಗೆ ಸ್ಥಳೀಯರ ತರಾಟೆ: ಇದು ಬಿಜೆಪಿಗೆ ಎಚ್ಚರಿಕೆಯ ಕರೆಗಂಟೆ? ಇಲ್ಲಿದೆ ವರದಿ, ವಿವರ

ಭೂಮಿಪೂಜೆಗೆಂದು ತೆರಳಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು, ಮಾರ್ಚ್‌ 15: ಕರ್ನಾಟಕ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ತೂರಾತುರಿಯಿಂದ ಕಾಮಗಾರಿಗಳಿಗೆ ಭೂಮಿಪೂಜೆ ನೇರವೇರಿಸುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯೂ ಹೊರತಲ್ಲ. ಭೂಮಿಪೂಜೆಗೆಂದು ತೆರಳಿದ್ದ ಅವರಿಗೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಿದ್ದಾಪುರ ತಾಲೂಕಿನ ಬೇಡ್ಕಣಿಯಲ್ಲಿ ರಸ್ತೆ ಕಾಮಗಾರಿಯ ಭೂಮಿಪೂಜೆಗೆಂದು ತೆರಳಿದ್ದರು. ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕರೂ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂಮಿಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Karnataka Assembly Elections 2023: People Got angry with Vishweshwar Hegde Kageri

ಸಿದ್ದಾಪುರ ತಾಲೂಕಿನ ಬೇಡ್ಕಣಿಯಲ್ಲಿ ರಸ್ತೆ ನಿರ್ಮಿಸಬೇಕೆಂದು ಸ್ಥಳೀಯರು ಕಳೆದ 15 ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಆದರೆ, ಸ್ಥಳೀಯರ ಬೇಡಿಕೆಗೆ ಕಾಗೇರಿ ಬೆಲೆ ನೀಡಿರಲಿಲ್ಲ. ಈಗ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುವುದು ಬೇಡವೆಂದು ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಅವರನ್ನು ತಡೆದಿದ್ದಾರೆ. ಆ ನಂತರ ಸ್ಥಳೀಯರ ಬೇಡಿಕೆ ಪ್ರಕಾರವೇ ರಸ್ತೆ ನಿರ್ಮಿಸುವುದಾಗಿ ಕಾಗೇರಿ ಅವರು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಬಳಿಕ ಅಧಿಕಾರಿಗಳು ಶಂಕುಸ್ಥಾಪನೆ ನೇರವೇರಿಸಿದ್ದಾರೆ.

'ಶನೇಶ್ವರ ದೇವಸ್ಥಾನದಿಂದ ಗುಂಜಗೋಡ ರಸ್ತೆಯನ್ನು ನಿರ್ಮಿಸಿಕೊಡುವಂತೆ ಹತ್ತಾರು ವರ್ಷಗಳಿಂದ ಹೋರಾಟ ಮಾಡಿದ್ದೇವೆ. ನಿಮ್ಮ ಮುಂದೆಯೂ ಹಲವಾರು ಸಾರಿ ಬೇಡಿಕೆ ಇಟ್ಟಿದ್ದೇವೆ. ಇಷ್ಟು ವರ್ಷಗಳ ಕಾಲ ನಮ್ಮ ಬೇಡಿಕೆಗೆ ನೀವು ಸ್ಪಂದಿಸಲೇ ಇಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ನೀವು ಇಲ್ಲಿಗೆ ಬಂದಿದ್ದೀರಿ. ಇಷ್ಟು ವರ್ಷಗಳ ಕಾಲ ಈಡೇರದ ಬೇಡಿಕೆ, ಈಗ ದಿಢೀರನೇ ಹೇಗಾಗುತ್ತದೆ' ಎಂದು ಕಾಗೇರಿ ಅವರಿಗೆ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಬಾಡ್ಕಣಿಯ ಶನೇಶ್ವರ ದೇವಸ್ಥಾನದಿಂದ ಗುಂಜಗೋಡು ರಸ್ತೆವರೆಗೂ ಮತ್ತೆ ಡಾಂಬರೀಕರಣ ಕೆಲಸ ಆಗಬೇಕಿದೆ. ಇಲ್ಲದಿದ್ದರೆ ನಿಮಗೆ ಭೂಮಿ ಪೂಜೆಯನ್ನು ಮಾಡಲು ಬೀಡುವುದಿಲ್ಲ ಎಂದು ಸಾರ್ವಜನಿಕರು ಪಟ್ಟು ಹಿಡಿದರು.

Karnataka Assembly Elections 2023: People Got angry with Vishweshwar Hegde Kageri

ಈ ಬಾರಿಯೂ ನಾನೇ ಶಾಸಕನಾಗಿ ಆಯ್ಕೆಯಾಗುತ್ತೇನೆ. ನಿಮ್ಮ ಬೇಡಿಕೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇನೆ ಎಂದು ಕಾಗೇರಿ ತಿಳಿಸಿದ್ದಾರೆ. ಕಾಗೇರಿಯವರನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಜೆಪಿಗೆ ಎಚ್ಚರಿಕೆಯ ಕರೆಗಂಟೆ ಎಂದು ಹೇಳಲಾಗುತ್ತಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 31 ಜುಲೈ 2019 ರಿಂದ ಕರ್ನಾಟಕ ವಿಧಾನಸಭೆಯ 23 ನೇ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ. ಕಾಗೇರಿಯವರು ಅವರು ಶಿರಸಿಯಿಂದ ಆರು ಬಾರಿ ಶಾಸಕರಾಗಿದ್ದಾರೆ. ಅವರು ಕರ್ನಾಟಕ ಸರ್ಕಾರದಲ್ಲಿ 2008 ರಿಂದ 2013 ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಕೋಲಾ ವಿಧಾನಸಭಾ ಕ್ಷೇತ್ರವನ್ನು 3 ಅವಧಿಗೆ ಪ್ರತಿನಿಧಿಸಿದ್ದಾರೆ. 1994-99, 1999-04 ಮತ್ತು 2004-2008 ರಲ್ಲಿ ಅವರು ಶಾಸಕರಾಗಿ ಆಯ್ಕೆಯಾದರು. 2008, 2013 ಮತ್ತು 2018 ರಲ್ಲಿ ಶಿರಸಿ-ಸಿದ್ದಾಪುರದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಅತ್ಯಂತ ಶಿಸ್ತಿನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+