ಕಾರವಾರದಲ್ಲಿ ಹಿಂದಿ ನಾಮಫಲಕಕ್ಕೆ ಮಸಿ ಬಳಿದ ಕರವೇ
ಕಾರವಾರ, ಜೂನ್ 14: ನಗರಸಭೆಯಿಂದ ವಾರ್ಡ್ಗಳಿಗೆ ಕನ್ನಡದ ಜೊತೆಗೆ ಮರಾಠಿ ಹಾಗೂ ಕೊಂಕಣಿ ಅರ್ಥ ಬರುವಂತೆ ಹಿಂದಿಯಲ್ಲಿ ನಾಮಫಲಕ ಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ನಾಮಫಲಕದಲ್ಲಿನ ಅನ್ಯ ಭಾಷೆಗೆ ಮಸಿ ಬಳಿದು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋವಾ ಹಾಗೂ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ವಿಷಯವಾಗಿ ಆಗಾಗ ಎರಡು ರಾಜ್ಯದ ಮುಖಂಡರುಗಳು ಕ್ಯಾತೆ ತೆಗೆಯುತ್ತಲೇ ಇರುತ್ತಾರೆ. ಆದರೆ ಈ ಭಾರೀ ಕಾರವಾರ ನಗರಸಭೆಯ ಮಾಡಿರುವ ಎಡವಟ್ಟು ಭಾಷಾ ವಿವಾದಕ್ಕೆ ಕಾರಣವಾಗಿದೆ.
ವಾರ್ಡ್ಗಳಿಗೆ ಅಳವಡಿಸಿದ ನಾಮಫಲಕಗಳಲ್ಲಿ ಕನ್ನಡದ ಜೊತೆಗೆ ಕೊಂಕಣಿ ಹಾಗೂ ಮರಾಠಿ ಅರ್ಥಬರುವಂತೆ ಹಿಂದಿ ಅಕ್ಷರಗಳಲ್ಲಿ ಬರೆದು ಅಳವಡಿಸಿರುವುದನ್ನು ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಆದರೆ ಕಾರವಾರ ರಾಜ್ಯದಲ್ಲಿ ಬೆಳೆಯುತ್ತಿರುವ ನಗರವಾಗಿರುವ ಕಾರಣ ಹಾಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವ ಕಾರಣ ಕೇವಲ ಕನ್ನಡದಲ್ಲಿದ್ದರೆ ಅರ್ಥ ಆಗುವುದಿಲ್ಲ ಎಂಬುದು ನಗರಸಭೆಯ ವಾದ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂಬ ಸರ್ಕಾರದ ನಿಯಮವಿದೆ. ಆದರೆ ಕನ್ನಡದ ಜೊತೆಗೆ ಬೇರೆ ಭಾಷೆ ಬಳಸಬಾರದು ಎಂದು ಎಲ್ಲಿಯೂ ಇಲ್ಲ ಎಂದಿದ್ದಾರೆ.
ಕಾರವಾರ ನಗರಸಭೆಯ ಕ್ರಮವನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು, ಬಳಿಕ ನಗರದ ವಿವಿಧ ರಸ್ತೆಗಳಲ್ಲಿ ನಗರಸಭೆ ಅಳವಡಿಸಿದ್ದ ನಾಮಫಲಕಗಳಲ್ಲಿನ ಕನ್ನಡ ಬಿಟ್ಟು ಇತರೆ ಭಾಷೆಯ ಅಕ್ಷರಗಳಿಗೆ ಮಸಿ ಬಳಿದರು. ಇತ್ತೀಚೆಗೆ ಗಡಿಭಾಗಗಳಲ್ಲಿ ಕನ್ನಡದ ಮೇಲೆ ಅನ್ಯ ಭಾಷೆಯ ಪ್ರಭಾವ ಆಗುತ್ತಿದ್ದು ಇದನ್ನು ಸಂಘಟನೆಯಿಂದ ತೀವ್ರವಾಗಿ ಖಂಡಿಸುತ್ತೇವೆ. ಕನ್ನಡವಲ್ಲದೆ ಇತರೆ ಭಾಷೆಗಳಿಗೆ ಪ್ರಾಧಾನ್ಯತೆ ಕೊಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಅಳವಡಿಸಿರುವ ನಾಮಫಲಕಗಳಲ್ಲಿನ ಇತರೆ ಭಾಷೆ ಬರಹಗಳನ್ನು ತೆಗೆಯಬೇಕು. ಒಂದೊಮ್ಮೆ ಹೀಗೆ ಮುಂದುವರಿದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದಾಗಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಈಗಾಗಲೇ ಹಿಂದಿ ಹೇರಿಕೆಯ ಕುರಿತು ದೇಶದಾದ್ಯಂತ ಚರ್ಚೆಗಳು ನಡೆಯುತ್ತಿದೆ. ಅಲ್ಲೆ ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತು, ಕರುನಾಡ ರಕ್ಷಣಾ ವೇದಿಕೆ, ಜನಶಕ್ತಿ ವೇದಿಕೆ ಸೇರಿದಂತೆ ಅನೇಕ ಕನ್ನಡಪರ ಕಾರ್ಯಕರ್ತರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಈ ಬಗ್ಗೆ ದೂರು ನೀಡಿದ್ದು ತಕ್ಷಣ ನಾಮಫಲಕಗಳನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications