ಯಲ್ಲಾಪುರದ ಖಾಸಗಿ ಶಾಲೆಯ 21 ವಿದ್ಯಾರ್ಥಿಗಳು, 2 ಶಿಕ್ಷಕರಿಗೆ ಕೊರೊನಾ ಸೋಂಕು
ಕಾರವಾರ, ಮಾರ್ಚ್ 30: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದ ಖಾಸಗಿ ಶಾಲೆಯೊಂದರ 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಡೀ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಶಾಲೆಯ ಕನ್ನಡ ಮಾಧ್ಯಮ ವಿಭಾಗದ ಹತ್ತನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರು ಸೇರಿದಂತೆ 123 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಸೋಮವಾರ ಪರೀಕ್ಷೆಯ ವರದಿ ಬಂದಿದ್ದು, 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಶಿಕ್ಷಕರಿಗೂ ಪಾಸಿಟಿವ್ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಇಡೀ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾಲೆಯ ಕನ್ನಡ ಮಾಧ್ಯಮ ಹಾಗೂ ಇಂಗ್ಲೀಷ್ ಮಾಧ್ಯಮ ಮತ್ತು ಕಾಲೇಜು ಪ್ರತ್ಯೇಕ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಮಂಗಳವಾರ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಗಂಟಲು ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಬೇಕೋ, ಬೇಡವೋ ಎಂದು ಅವರ ನಿರ್ಣಯಕ್ಕೆ ಬಿಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೇ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ ಅವರ ಕುಟುಂಬದವರ ಗಂಟಲು ದ್ರವದ ಪರೀಕ್ಷೆಯನ್ನು ಸಹ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಅಂಕೋಲಾದಲ್ಲಿ ಒಂದೇ ದಿನ 11 ಪ್ರಕರಣ
ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪ್ರಕರಣ ಹೊರತು ಪಡಿಸಿ 16 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಂಕೋಲಾ ತಾಲೂಕಿನಲ್ಲಿ 11 ಪ್ರಕರಣಗಳು ದಾಖಲಾಗಿದ್ದು, ಕಾರವಾರದಲ್ಲಿ 3, ಶಿರಸಿ 1 ಹಾಗೂ ಯಲ್ಲಾಪುರದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಇನ್ನು ಹೊನ್ನಾವರ, ಭಟ್ಕಳ ಹಾಗೂ ಜೋಯಿಡಾದಲ್ಲಿ ತಲಾ ಒಬ್ಬರಂತೆ ಮೂವರು ಚಿಕಿತ್ಸೆ ಪಡೆದು ಸೋಮವಾರ ಗುಣಮುಖರಾಗಿದ್ದಾರೆ.
Recommended Video
ಜಿಲ್ಲೆಯಲ್ಲಿ ಈವರೆಗೆ 14,910 ಪ್ರಕರಣ ದೃಢಪಟ್ಟಿದ್ದು, 14,639 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು 188 ಜನರು ಮೃತಪಟ್ಟಿದ್ದಾರೆ. 23 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 60 ಜನರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 83 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications