ರಾಘವೇಶ್ವರ ಶ್ರೀಗಳ ವಿರುದ್ದ ಷಡ್ಯಂತ್ರ: ಸೋಲಿನ ಸರಮಾಲೆಗೆ ಮತ್ತೊಂದು ಸೇರ್ಪಡೆ
ಕಾರವಾರ, ಏ 5: ನಕಲಿ ಅಶ್ಲೀಲ ಸಿಡಿ ತಯಾರಿಸಿ, ರಾಘವೇಶ್ವರ ಶ್ರೀಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ.
2010ರಲ್ಲಿ ಶ್ರೀಗಳನ್ನು ಹೋಲುವ ವ್ಯಕ್ತಿಗೆ ಶ್ರೀಗಳಂತೆ ಉಡುಗೆತೊಡುಗೆಯನ್ನು ತೊಡಿಸಿ, ಶ್ರೀಗಳಂತೆ ಹಾವ-ಭಾವಗಳ ಅಭ್ಯಾಸ ಮಾಡಿಸಿ; ಚಿತ್ರೀಕರಣ ಮಾಡಲಾಗಿತ್ತು. ವೈದಿಕ ವೃತ್ತಿಯಲ್ಲಿರುವ ಆರೋಪಿಗಳು, ತಮ್ಮ ಮಧ್ಯೆ ನಡೆಸಿದ ಸಂಭಾಷಣೆಗಳು, ಹಂಚಿಕೊಂಡ ವಿಡಿಯೋಗಳು ಆ ವೃತ್ತಿಯ ಗೌರವಕ್ಕೆ ಚ್ಯುತಿತರುವಂತೆ ಇದ್ದವು ಹಾಗೂ ಕೋಟ್ಯಾಂತರ ರೂಪಾಯಿಗಳ ಸಾಫ್ಟವೇರ್ ಹಾಗೂ ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ಚಿತ್ರಗಳ ಜೊತೆ ಜೋಡಿಸಿ, ತೋಜೋವಧೆ ಮಾಡುವ ಯತ್ನಗಳು ನಡೆದಿದ್ದವು.
ಮಾರ್ಫಿಂಗ್ ಮಾಡಿದ ಚಿತ್ರಗಳನ್ನು ಬಳಸಿಕೊಂಡು ಅಶೀಲ ಸಿಡಿ ತಯಾರಿಸಿ, ಶ್ರೀಗಳ ಮಾನಾಪಹರಣಮಾಡುವ ಹೀನಕೆಲಸ ಹಾಗೂ ಅದನ್ನು ರಾಷ್ಟ್ರಮಟ್ಟದ ಸುದ್ಧಿವಾಹಿನಿಯೊಂದರಲ್ಲಿ ಪ್ರಸಾರ ಮಾಡಿಸಲು ಮಾತುಕತೆಗಳೂ ನಡೆದಿದ್ದವು. ಐಜಿಪಿ ಗೋಪಾಲ್ ಹೊಸೂರ್ ನೇತೃತ್ವದ ಪೋಲಿಸ್ ತಂಡ ಈ ಹುನ್ನಾರವನ್ನು ಭೇದಿಸಿ, ಆರೋಪಿಗಳನ್ನು ಸಾಕ್ಷಾಧಾರ ಸಮೇತವಾಗಿ ಗೋಕರ್ಣದಲ್ಲಿ ಬಂಧಿಸಿದ್ದರು.

ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಪ್ರಯೋಗಾಲಯವೂ ಈ ಕುಕೃತ್ಯವನ್ನು ದೃಢೀಕರಿಸಿತ್ತು. ಆನಂತರ ತನಿಖೆ ನಡೆದು ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿಯೂ ಸಲ್ಲಿಕೆಯಾಗಿತ್ತು. ಈ ಮಧ್ಯೆ ವಿಚಾರಣೆಯನ್ನು ನಿಲ್ಲಿಸುವ, ಪ್ರಕರಣವನ್ನು ಮುಚ್ಚಿಹಾಕುವ ಹಲವಾರು ವಿಫಲಯತ್ನಗಳು ನಡೆದವು.
ಸೋಲುಗಳ ಸರಮಾಲೆ: ಪ್ರಕರಣ ತನಿಖಾ ಹಂತದಲ್ಲಿ ಇರುವಾಗ ಉಚ್ಚ ನ್ಯಾಯಾಲಯದಲ್ಲಿ ದೂರನ್ನು ರದ್ಧುಗೊಳಿಸಲು ಪ್ರಯತ್ನಿಸಿ ಸೋತರು, ಕುಮಟಾ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ವಜಾಗೊಳಿಸಲು ಎರಡು ಬಾರಿ ವಿಫಲ ಯತ್ನ ನಡೆಸಲಾಗಿತ್ತು.
2015 ರಲ್ಲಿ ಸ್ವಯಂ ರಾಜ್ಯಸರ್ಕಾರವೇ ಷಡ್ಯಂತ್ರಿಗಳ ಪರವಾಗಿ ನಿಂತು, ಅಭಿಯೋಜನೆಯ ಮೂಲಕ ಪ್ರಕರಣವನ್ನೇ ಮುಚ್ಚಿಹಾಕಲು ಯತ್ನಿಸಿತಾದರೂ, ನ್ಯಾಯಾಲಯ ಅದಕ್ಕೆ ತಡೆಯೊಡ್ಡಿತ್ತು. ಇದೀಗ ಜಿಲ್ಲಾ ಸತ್ರ ನ್ಯಾಯಾಲಯವೂ ಆರೋಪಿಗಳ ಮೇಲ್ಮನವಿಯನ್ನು ತಿರಸ್ಕರಿಸಿದ್ದು, ದೋಷಾರೋಪಣೆಯ ವಿಚಾರಣೆ ನಡೆಸುವಂತೆ ಆದೇಶ ಮಾಡಿದೆ.
ನಕಲಿ ಅಶ್ಲೀಲ ಸಿಡಿ ಪ್ರಯತ್ನ ವಿಫಲವಾದ ನಂತರ, ನಕಲಿ ಪಿ.ಐ.ಲ್ - 10 ಕೋಟಿ ಬ್ಲಾಕ್'ಮೇಲ್, ಮೊದಲ ಮಿಥ್ಯಾರೋಪ, ಆನಂತರ ಎರಡನೇ ಮಿಥ್ಯಾರೋಪ... ಮುಂತಾದವುಗಳ ಮೂಲಕ ಶ್ರೀಮಠ ಹಾಗೂ ಶ್ರೀಗಳ ಮೇಲೆ ನಿರಂತರವಾಗಿ ಕೇಸುಗಳನ್ನು ಹಾಕಿ, ಕಿರುಕುಳ ನೀಡುವ, ತೋಜೋವಧೆ ಮಾಡುವ ಪ್ರಯತ್ನಗಳಾಗುತ್ತಿವೆಯಾದರೂ, ಸತ್ಯ ಹಾಗೂ ಧರ್ಮದ ತಳಹದಿಯಲ್ಲಿರುವುದರಿಂದ ಶ್ರೀಮಠದ ಯಾ ಶ್ರೀಗಳ ಧವಳಕೀರ್ತಿಗೆ ಮಸಿಬಳಿಯುವ ಯಾವ ಪ್ರಯತ್ನವೂ ಗೆಲ್ಲಲಾರದು.

ಶ್ರೀಮಠವು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಚಲವಾದ ವಿಶ್ವಾಸವನ್ನು ಹೊಂದಿದ್ದು, ದಕ್ಷ ಪೋಲಿಸ್ ಅಧಿಕಾರಿಗಳು ಸಾಕ್ಷಾಧಾರ ಸಹಿತವಾಗಿ ಭೇದಿಸಿದ ಹಾಗೂ ಷಡ್ಯಂತ್ರಗಳಿಗೆ ಮೂಲವಾದ ಈ ನಕಲಿ ಅಶ್ಲೀಲ ಸಿಡಿ ಪ್ರಕರಣದ ಸಮಗ್ರ ತನಿಖೆ ನಡೆದು, ಆರೋಪಿಗಳ ಹಾಗೂ ಆರೋಪಿಗಳ ಹಿನ್ನೆಲೆಯಲ್ಲಿರುವವರಿಗೆ ನ್ಯಾಯಾಂಗ ವ್ಯವಸ್ಥೆಯ ಮೂಲಕ ಸೂಕ್ತ ಶಿಕ್ಷೆಯಾಗಲಿ, ಒಳಿತನ್ನು ಕೆಡುಕಿನಂತೆ ಬಿಂಬಿಸುವ ಹೀನ ಕಾರ್ಯಮಾಡುವವರು ಸರಿಯಾದ ಪಾಠ ಕಲಿಯುವಂತಾಗಲಿ ಎಂದು ಶ್ರೀಮಠ ಆಶಿಸುತ್ತದೆ ಎಂದು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications