ಬಿಜೆಪಿ ಆಡಳಿತಾವಧಿಯಲ್ಲಿ ಹಣವಿಲ್ಲದಿದ್ದರೂ ಕಾಮಗಾರಿ: ದಿವಾಳಿಯತ್ತ ಕಾರವಾರ ನಗರಸಭೆ!
ಕಾರವಾರ, ನವೆಂಬರ್ 07: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನುವ ಆರೋಪಗಳು ಮೊದಲಿಂದಲೂ ಕೇಳಿ ಬರುತ್ತಲೇ ಇದೆ. ಇದರ ನಡುವೆ ಕಳೆದ ಕೆಲ ವರ್ಷಗಳಿಂದ ಕಾಮಗಾರಿಗಳಲ್ಲಿ ಪರ್ಸೆಂಟೇಜ್ ಆರೋಪ ಪ್ರತ್ಯಾರೋಪಗಳು ಕೂಡ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಆದರೆ ಕಾರವಾರ ನಗರಸಭೆಯೊಂದರಲ್ಲಿ ಕಳೆದ ಅವಧಿಯಲ್ಲಿ ಹಣವೇ ಇಲ್ಲದಿದ್ದರೂ ನಡೆಸಿದ ಕೊಂಟ್ಯಾಂತರ ರೂಪಾಯಿ ಕಾಮಗಾರಿಯಿಂದಾಗಿ ಇದೀಗ ಗುತ್ತಿಗೆದಾರರಿಗೆ ಮಾತ್ರವಲ್ಲದೆ ನಗರಸಭೆ ವಾಹನಗಳಿಗೆ ಡಿಸೇಲ್ ತುಂಬಿಸುವುದಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಯಲ್ಲಿ ಇಂತಹದೊಂದು ಶೋಚನೀಯ ಸ್ಥಿತಿ ಅಧಿಕಾರಿಗಳ ಬೇಜವಬ್ದಾರಿಯಿಂದ ಎದುರಾಗಿದೆ. ನಗರಸಭೆಯಲ್ಲಿ ಅನುದಾನಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಮಾಡಿಸಿದ ಪರಿಣಾಮ ಪೂರ್ಣಗೊಂಡ ಕಾಮಗಾರಿಗಳ ಹತ್ತಾರು ಕೋಟಿ ರೂಪಾಯಿ ಬಿಲ್ ಪಾವತಿಗೆ ನಗರಸಭೆ ಪರದಾಡುತ್ತಿದೆ.

ಅಲ್ಲದೇ ಕಳೆದ ಕೆಲ ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿನ ಮಳಿಗೆಗಳು, ಅಂಗಡಿಗಳು ಹಾಗೂ ಮನೆಗಳಿಂದ ತೆರಿಗೆ ಸಂಗ್ರಹ ಕಾರ್ಯ ಸರಿಯಾಗಿ ಆಗದ ಪರಿಣಾಮ ನಗರಸಭೆಯ ಆದಾಯ ಕುಂಠಿತವಾಗಿದೆ. ಇದರಿಂದಾಗಿ ಇದೀಗ ನಗರಸಭೆಯ ಕಸ ಸಂಗ್ರಹಣೆ, ನೀರು ಪೂರೈಕೆ ಸೇರಿದಂತೆ ಅಗತ್ಯ ಸೇವೆಗಳ ವಾಹನಗಳ ಇಂಧನ ಹಾಕಿಸಲೂ ಸಹ ಹಣವಿಲ್ಲದಂತಾಗಿದೆ. ಇದರಿಂದ ಬಂಕ್ ಮಾಲೀಕರ ಹಣ ಇಲ್ಲ ಇಂಧನ ನೀಡಲು ನಿರಾಕರಿಸಿದ್ದಾರೆ.
ನಗರಸಭೆ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ 11 ಕೋಟಿ ಪಾವತಿಸಬೇಕಾಗಿದೆ. ಬೀದಿ ದೀಪ ನಿರ್ವಹಣೆ ಬಿಲ್ ಕೂಡ ಬಾಕಿ ಇದೆ. ಇದೀಗ ನಗರಸಭೆ ಬಾಕಿ ಉಳಿಸಿಕೊಂಡಿರುವವರಿಗೆ ಕಾಡಿ ಬೇಡಿಯಾದರೂ ತೆರಿಗೆ ವಸೂಲಿ ಮಾಡುವುದು ಅನಿವಾರ್ಯವಾಗಿದೆ. ಅಲ್ಲದೆ ಈಗಾಗಲೇ ಜಿಲ್ಲಾಧಿಕಾರಿ ನಗರಸಭೆ ಅಧಿಕಾರಿಗಳಿಗೆ ಕರ ವಸೂಲಿಗೆ ಖಡಕ್ ಸೂಚನೆ ನೀಡಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾರವಾರ ನಗರಸಭೆಯಲ್ಲಿಯೂ ಬಿಜೆಪಿ ಆಡಳಿತ ಇತ್ತು. ಅಧ್ಯಕ್ಷರ ಎರಡುವರೆ ವರ್ಷದ ಅವಧಿ ಮುಗಿದಿದ್ದರಿಂದ ಮೀಸಲಾತಿ ಸಮಸ್ಯೆಯಾಗಿ ಆರು ತಿಂಗಳಿಂದ ಆಡಳಿತಾಧಿಕಾರಿ ನೇಮಕವಾಗಿದೆ. ಹಿಂದಿನ ಅವಧಿಯಲ್ಲಿ ಹಣ ಇಲ್ಲದೆ ಇದ್ದರೂ ಕಾಮಗಾರಿ ನಡೆಸಿದ್ದರಿಂದ ನಗರಸಭೆಯಲ್ಲಿ ಖಜಾನೆ ಖಾಲಿಯಾಗಿದೆ. ಸದ್ಯ ಜಿಲ್ಲಾಧಿಕಾರಿ ಅವರೇ ಆಡಳಿತಾಧಿಕಾರಿಯಾಗಿದ್ದಾರೆ. ಅಧಿಕಾರಿಗಳ ಸಭೆ ನಡೆಸಿರುವ ಅವರು ಇದು ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಆಗಿರುವುದನ್ನು ಒಪ್ಪಿರುವ ಅವರು ಇದೀಗ ತೆರಿಗೆ ಸಂಗ್ರಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆಗೂ ಆದೇಶ ನೀಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications