ಹಿಂದುಳಿದ ವರ್ಗಗಳ ಅನ್ನವನ್ನು ಯಾರೂ ಕಸಿದುಕೊಳ್ಳಬಾರದು: ಬ್ರಹ್ಮಾನಂದ ಸರಸ್ವತಿ
ಕಾರವಾರ, ಫೆಬ್ರವರಿ 22: ಹಿಂದುಳಿದ ವರ್ಗಗಳ ಹಕ್ಕನ್ನು ಯಾರೂ, ಯಾವುದೇ ರೀತಿಯಲ್ಲಿ ಕಸಿದುಕೊಳ್ಳಬಾರದು. ನಮ್ಮ ಅನ್ನದ ಬಟ್ಟಲನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಹಿಂದುಳಿದ ವರ್ಗಗಳ 2ಎ ಹಿತರಕ್ಷಣಾ ವೇದಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಪೊಲೀಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ಎಂಬುದು ಭಗವಂತ ಇದ್ದ ಹಾಗೆ. ಸೃಷ್ಟಿ, ಸ್ಥಿತಿ, ಲಯ ಕಾಯ್ದುಕೊಳ್ಳುತ್ತದೆ. ಅದಕ್ಕೆ ಪೂರಕವಾಗಿ ಅಂಬೇಡ್ಕರರ ಸಂವಿಧಾನದ ಕಲಂ 14, 15 ತಾರತಮ್ಯ ಮಾಡಬಾರದು ಎಂದಿದೆ ಎಂದು ತಿಳಿಸಿದರು.
ಕಲಂ 16ರಲ್ಲಿ ಬಡವರ, ಅತಿ ಹಿಂದುಳಿದವರು, ಅತಿ ಹಿಂದುಳಿದ ಪ್ರದೇಶದಲ್ಲಿರುವವರಿಗೆ ಅವರ ಹಕ್ಕನ್ನು ಕಾಯ್ದಿರಿಸಿಕೊಳ್ಳುವ ಅವಕಾಶ ನೀಡಿದೆ. ಅಲ್ಲದೇ ಆ ಹಕ್ಕನ್ನು ಸಂವಿಧಾನ ಕಾಯ್ದುಕೊಂಡು ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು, ನಾಯಕರು, ಸ್ವಾಮೀಜಿಗಳು ಅವರವರ ಜನರನ್ನು ಓಲೈಸಲು, ಸಂವಿಧಾನದ ಸಿದ್ಧಾಂತವನ್ನು, ಇತಿಮಿತಿಯನ್ನು ಗಾಳಿಗೆ ತೂರುವಂಥದ್ದಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಮಾವೇಶದ ಮೂಲಕ ಸರ್ಕಾರಕ್ಕೊಂದು ಸಂದೇಶ ನೀಡಲಿದ್ದೇವೆ. ಈಗ ಶಾಂತ ರೀತಿಯ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಪ್ರತಿಫಲ ಸಿಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರತರ ಪ್ರತಿಭಟನೆ ನಡೆಸಲಾಗುವುದು. ಅವರವರ ಜಾತಿ, ಜನಾಂಗಗಳನ್ನು ಹೊಗಳಿಕೊಳ್ಳುವುದು ಆಯಾ ಸ್ವಾಮೀಜಿಗಳ, ನಾಯಕರಿಗೆ ಬಿಟ್ಟ ವಿಚಾರ. ನಾವು ಯಾವುದೇ ಹೊಸ ವಸ್ತುವನ್ನು ಕೇಳುತ್ತಿಲ್ಲ. ಬದಲಿಗೆ ಯಥಾಸ್ಥಿತಿಯನ್ನು ಸಂವಿಧಾನಬದ್ಧವಾಗಿ ಕಾಯ್ದುಕೊಳ್ಳಲು ಒತ್ತಾಯಿಸುತ್ತಿದ್ದೇವೆ ಎಂದರು.
ಮೀಸಲಾತಿ ನೀಡುವಿಕೆ ಅಷ್ಟೊಂದು ಸಣ್ಣ ವಿಚಾರವಲ್ಲ. ಅಧ್ಯಯನ ಮಾಡಬೇಕು, ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಬೇಕು. ಆದರೆ ಸಮುದಾಯಗಳು ಮನವಿ ಮಾಡಬಹುದು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಒಂದು ವೇಳೆ ಪಂಚಮಸಾಲಿಗಳನ್ನು 2ಎಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದರೆ ಮುಂದೆ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಬ್ರಹ್ಮಾನಂದ ಸರಸ್ವತಿ ಎಚ್ಚರಿಸಿದ್ದಾರೆ.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications