ಅರಣ್ಯಹಕ್ಕು ಅರ್ಜಿ ತಿರಸ್ಕಾರ; ವಿನೂತನ ಜನಾಂದೋಲನಕ್ಕೆ ಸಜ್ಜಾದ ಉತ್ತರ ಕನ್ನಡದ ಅರಣ್ಯವಾಸಿಗಳು
ಕಾರವಾರ, ಜನವರಿ 14: ಅರಣ್ಯ ಹಕ್ಕುಪತ್ರ ಮಂಜೂರಾತಿಗಾಗಿ ಒತ್ತಾಯಿಸಿ 50 ಸಾವಿರಕ್ಕೂ ಹೆಚ್ಚಿನ ಅರಣ್ಯವಾಸಿಗಳು ಜಿಲ್ಲಾಧಿಕಾರಿಗೆ ಮನವಿ ನೀಡುವ ಮೂಲಕ ವಿನೂತನ ರೀತಿಯ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ನೇತೃತ್ವದಲ್ಲಿ ಈ ಮನವಿ ಹೋರಾಟ ನಡೆಯಲಿದ್ದು, ಜಿಲ್ಲೆಯಲ್ಲಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ.
ಅರಣ್ಯ ಹಕ್ಕು ಕಾಯ್ದೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಆಧರಿಸಲು ಒತ್ತಾಯಿಸತಕ್ಕದ್ದಲ್ಲ ಎಂಬುದು ಕಾನೂನಿನಲ್ಲಿ ಉಲ್ಲೇಖವಿದೆ. ಈ ಅಂಶದಂತೆ ಮಂಜೂರಿ ಪ್ರಕ್ರಿಯೆ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯಾದ್ಯಂತ ಅರಣ್ಯವಾಸಿಗಳಿಂದ ಪ್ರತಿಭಟನೆ ನಡೆಯಲಿದೆ. ಆದರೆ ಈ ಹೋರಾಟಕ್ಕೆ ನಿರ್ದಿಷ್ಟ ದಿನಾಂಕವನ್ನು ವೇದಿಕೆ ಗೊತ್ತು ಮಾಡಿಲ್ಲ.

74,220 ಅರ್ಜಿ ತಿರಸ್ಕಾರ
ಹಕ್ಕು ಪತ್ರ ಮಂಜೂರಿಗೆ ಸಂಬಂಧಿಸಿ ಜಿಲ್ಲೆಯಲ್ಲಿ 87,685 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 2,852 ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದೆ. ಅವುಗಳಲ್ಲಿ ಬುಡಕಟ್ಟು 1,131, ಪಾರಂಪರಿಕ 394 ಹಾಗೂ ಸಮೂಹ ಉದ್ದೇಶಕ್ಕೆ 1,127 ಮಾನ್ಯತೆ ದೊರಕಿದೆ. ಬಂದಿರುವ ಅರ್ಜಿಗಳಲ್ಲಿ 74,220 ಅರ್ಜಿಗಳು ತಿರಸ್ಕಾರವಾಗಿವೆ. ಅಂದರೆ ಶೇ 74.34ರಷ್ಟು ತಿರಸ್ಕಾರವಾಗಿದ್ದು, ಬಂದಿರುವ ಅರ್ಜಿಗಳಲ್ಲಿ ಶೇ 3.25ರಷ್ಟು ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದಂತಾಗಿದೆ.

ಸಾಕ್ಷ್ಯ ನೀಡುವಂತೆ ಒತ್ತಾಯಿಸಬಾರದು
‘ಈಗಾಗಲೇ ಉಪ ವಿಭಾಗ ಮತ್ತು ಜಿಲ್ಲಾ ಮಟ್ಟದ ಸಮಿತಿಗಳು ಮೂರು ತಲೆಮಾರಿನ ಕೃಷಿ ಸಾಗುವಳಿ ಮಾಡಿಕೊಂಡು ಅಥವಾ ಜಮೀನಿನ ಮೇಲೆ ಅವಲಂಬಿತವಾಗಿರುವ ಬಗ್ಗೆ ಯಾವುದೇ ದೃಢೀಕೃತ ದಾಖಲೆಯನ್ನು ಸಲ್ಲಿಸದೇ ಇರುವುದರಿಂದ ಅರ್ಜಿಯನ್ನು ತಿರಸ್ಕರಿಸಿ ಆದೇಶಿಸುತ್ತಿದೆ. ಆದರೆ, ಕಾನೂನಿನಲ್ಲಿ ನಿರ್ದಿಷ್ಟಪಡಿಸಿದ ಸಾಕ್ಷ್ಯವನ್ನು ಪರಿಗಣಿಸಿ ಹಾಗೂ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯವನ್ನು ಆಧರಿಸಲು ಒತ್ತಾಯಿಸತಕ್ಕದ್ದಲ್ಲ ಎಂದು ಸ್ಪಷ್ಟಪಡಿಸಿದೆ.

ದಾಖಲೆ ಆಗ್ರಹಿಸುವುದು ಕಾನೂನಿಗೆ ವ್ಯತಿರಿಕ್ತ
ಅಲ್ಲದೇ, ಕೇಂದ್ರ ಬುಡಕಟ್ಟು ಮಂತ್ರಾಲಯ ಮತ್ತು ಗುಜರಾತ್ ಹೈಕೋರ್ಟ್ ಮೂರು ತಲೆಮಾರಿನ ದಾಖಲೆಯ ಸಾಕ್ಷ್ಯ ಅವಶ್ಯಕತೆಗೆ ಆಗ್ರಹಿಸುವುದು ಕಾನೂನಿಗೆ ವ್ಯತಿರಿಕ್ತವಾಗಿದೆ. ಈ ರೀತಿ ದಾಖಲೆ ಆಗ್ರಹಿಸುವುದು ಕಾನೂನಿಗೆ ವ್ಯತಿರಿಕ್ತವಾಗಿ ಅರ್ಥೈಯಿಸಲಾಗುತ್ತಿದೆ ಎಂದು ಹೇಳಿದೆ. ಅತಿಕ್ರಮಿತ ಪ್ರದೇಶವು ಜನವಸತಿ ಪ್ರದೇಶವೆಂಬ ಕುರುಹುಗಳ ಆಧಾರದ ಮೇಲೆ ಹಕ್ಕನ್ನು ನಿರ್ಧರಿಸಬೇಕೆಂದು ಸ್ಪಷ್ಟಪಡಿಸಿರುವುದು ದಾಖಲಾರ್ಹ ಅಂಶವಾಗಿದೆ' ಎಂದು ವಿವರಿಸುತ್ತಾರೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಎ.ರವೀಂದ್ರ ನಾಯ್ಕ.

ಸಾಮೂಹಿಕವಾಗಿ ಅರ್ಜಿ ನೀಡಲು ಸಿದ್ಧತೆ
‘ಅರಣ್ಯ ಹಕ್ಕು ಕಾಯಿದೆ, ಕೇಂದ್ರ ಬುಡಕಟ್ಟು ಮಂತ್ರಾಲಯ ಮತ್ತು ಗುಜರಾತ್ ಹೈಕೋರ್ಟ್ ಮಂಜೂರಿ ಪ್ರಕ್ರಿಯೆಯಲ್ಲಿ ಮೌಖಿಕ ಮತ್ತು ಪ್ರತ್ಯಕ್ಷ ಸಾಗುವಳಿ ಸಾಕ್ಷ್ಯದ ಮೇಲೆ ಮಂಜೂರಿಗೆ ಮಾನದಂಡ ನಿರ್ಧರಿಸಿದ್ದಾಗ್ಯೂ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಕ್ಕೆ ಆಗ್ರಹಿಸಿರುವುದು ವಿಷಾದಕರ. ಈ ಕಾರಣದಿಂದಾಗಿ ಅರಣ್ಯವಾಸಿಗಳು ಹಕ್ಕಿನಿಂದ ವಂಚಿತರಾಗಿರುವುದು ಖೇದಕರ. ಜಿಲ್ಲೆಯಲ್ಲಿ ವಾಸ್ತವ್ಯ ಮಾಡುತ್ತಿರುವ ಅರಣ್ಯವಾಸಿಗಳಿಗೆ ಕಾನೂನಾತ್ಮಕ ಹಕ್ಕು ದೊರಕಿಸಿಕೊಡುವಲ್ಲಿ ಜಿಲ್ಲಾಧಿಕಾರಿಗೆ ಸಾಮೂಹಿಕವಾಗಿ ಅರ್ಜಿ ನೀಡಲು ನಿರ್ಧರಿಸಲಾಗಿದೆ' ಎಂದು ತಿಳಿಸಿದ್ದಾರೆ.
‘ಕಾನೂನು ರಿತ್ಯಾ ಅರ್ಜಿಗಳು ವಿಲೇವಾರಿ ಜರುಗಿದ್ದಲ್ಲಿ ಬಹುತೇಕ ಅರಣ್ಯ ಅತಿಕ್ರಮಣದಾರರಿಗೆ ಅರಣ್ಯಭೂಮಿ ಸಾಗುವಳಿ ಹಕ್ಕು ಸಿಗುವುದರಲ್ಲಿ ಸಂಶಯವಿಲ್ಲ' ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications