ಕಾರವಾರ ಸಿಬರ್ಡ್ ನಿರಾಶ್ರಿತರಿಗೆ ಸಿಹಿ ಸುದ್ದಿ: 10 ಕೋಟಿ ಪರಿಹಾರ ಮಂಜೂರು
ಕಾರವಾರ, ಮಾರ್ಚ್ 31: ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬದ ಸಮಯದಲ್ಲೇ ಕಾರವಾರದ ಸಿಬರ್ಡ್ ನಿರಾಶ್ರಿತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಇಷ್ಟು ವರ್ಷಗಳು ಸಿಬರ್ಡ್ ನಿರಾಶ್ರಿತರು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಪರಿಹಾರ ಹಣ ಮಂಜೂರಾಗಿದೆ. 28/A ಪ್ರಕರಣದಲ್ಲಿ 2008-09 ರಿಂದ ಬಾಕಿ ಉಳಿದಿದ್ದ ಕಾರವಾರದ ಸಿಬರ್ಡ್ ಭೂ ನಿರಾಶ್ರಿತರ 10.47 ಕೋಟಿ ರೂಪಾಯಿಗಳ ಪರಿಹಾರ ಮಂಜೂರಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಬರ್ಡ್ ಯೋಜನೆ ಅಡಿಯಲ್ಲಿ ಸೇನಾ ನೆಲೆ ನಿರ್ಮಾಣಕ್ಕಾಗಿ ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಈ ಸ್ಥಳಾಂತರಕ್ಕೆ ಸೂಕ್ತ ಪರಿಹಾರ ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು ಇದರಿಂದಾಗಿ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದವು.

ಈ ಪ್ರಕರಣಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು ಅದನ್ನು ಸಂಸದನಾಗಿ ಆಯ್ಕೆಯಾದ ಮೇಲೆ ಈ ಕುರಿತು ತಕ್ಷಣ ನೌಕಾ ನೆಲೆ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮತ್ತು ಸ್ಥಳೀಯ ರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಕೇಂದ್ರ ರಕ್ಷಣಾ ಮಂತ್ರಿಗಳ ಗಮನಕ್ಕೆ ತಂದು, ನಿರಂತರ ಪ್ರಯತ್ನದಿಂದ 57 ಪ್ರಕರಣಗಳಿಗೆ ಪರಿಹಾರ ದೊರಕಿದೆ ಎಂದಿದ್ದಾರೆ.
ಕೆಲವು ನಿರಾಶ್ರಿತರ ಪ್ರಕರಣಗಳು ಅನೇಕ ವರ್ಷಗಳಿಂದ ಪರಿಹಾರಕ್ಕಾಗಿ ನಿರಂತರವಾಗಿ ಸರ್ಕಾರದ ಬಾಗಿಲು ತಟ್ಟುತ್ತಾ ಬಂದಿದ್ದರು. ಕೇಂದ್ರ ಸರ್ಕಾರದ ಈ ಆದೇಶದಿಂದ ಈಗ 10.47 ಕೋಟಿ ರೂಪಾಯಿಗಳ ಈ ಪರಿಹಾರ ನಿಧಿಯ ಮಂಜೂರಾತಿಯಿಂದ ಸಂಕಷ್ಟದಲ್ಲಿದ್ದ ಕುಟುಂಬಗಳು ದೀರ್ಘಕಾಲದ ನಿರೀಕ್ಷೆಯಿಂದ ಮುಕ್ತಿಗೊಳ್ಳಲಿದೆ.

ಕೆಲವೇ ದಿನಗಳಲ್ಲಿ ಈ 57 ಪ್ರಕರಣಗಳಿಗೆ ಪರಿಹಾರ ಅವರ ಖಾತೆಗಳಿಗೆ ಜಮಾ ಆಗಲಿದೆ. ಉಳಿದ ಪ್ರಕರಣಗಳಲ್ಲಿ ಹಂತ ಹಂತವಾಗಿ ಪರಿಹಾರವನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಆದೇಶಕ್ಕಾಗಿ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು, ಕೇಂದ್ರ ರಕ್ಷಣಾ ಮಂತ್ರಿಗಳಾದ ರಾಜನಾಥ ಸಿಂಗ್ ಅವರನ್ನು, ಮತ್ತು ಜಿಲ್ಲಾಡಳಿತ, ಕೇಂದ್ರ ಹಾಗೂ ರಾಜ್ಯ ಸರಕಾರದ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications