ಉತ್ತರ ಭಾರತ ಪ್ರವಾಸದ ಭಯಾನಕ ಅನುಭನ ಬಿಚ್ಚಿಟ್ಟ ಕಾರವಾರದ ಬೈಕ್ ರೈಡರ್ಸ್, ಏನದು?, ಇಲ್ಲಿದೆ ವಿವರ
ಕಾರವಾರ, ಜುಲೈ, 15: ಕಾರವಾರದ ಸಾಹಸಿ ಯುವಕರ ತಂಡವೊಂದು ಬೈಕ್ ಏರಿ ಉತ್ತರಭಾರತ ಸುತ್ತುವ ಕನಸ್ಸಿನೊಂದಿಗೆ ಹಿಮಾಚಲ ಪ್ರದೇಶದ ಕಡೆ ಹೊರಟಿತ್ತು. ಆದರೆ ಇಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಇದರಿಂದ ಕೂದಲೆಳೆ ಅಂತರದಲ್ಲಿ ಈ ತಂಡವು ಪಾರಾಗಿ ಸುರಕ್ಷಿತವಾಗಿ ತವರಿಗೆ ಮರಳಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೌದು..ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. ಅದರಲ್ಲಿಯೂ ಲಡಾಕ್ನಂತಹ ಸಾಹಸಿ ಪ್ರದೇಶಗಳಿಗೆ ತೆರಳಲು ಅದೆಷ್ಟೋ ಜನ ಎದುರು ನೋಡುತ್ತಿರುತ್ತಾರೆ. ಇಂತಹದ್ದೇ ಕನಸಿನೊಂದಿಗೆ ಉತ್ತರಕನ್ನಡ ಜಿಲ್ಲೆಯಿಂದ ಉತ್ತರ ಭಾರತದ ಪ್ರವಾಸ ಕೈಗೊಂಡಿದ್ದ ಐವರು ಯುವಕರು ಹಿಮಾಚಲ ಪ್ರದೇಶದಲ್ಲಿ ಎದುರಾದ ಪ್ರವಾಹದಿಂದ ಅದೃಷ್ಟವಸಾತ್ ಪಾರಾಗಿ ತವರಿಗೆ ಮರಳಿದ್ದಾರೆ.

ಕಾರವಾರದ ಪ್ರಕಾಶ ನಾಯ್ಕ, ದರ್ಶನ ಭುಜಲೆ, ವೃಷಭ ಕಾಮತ್, ಅಲಿಸಾಬ್ ಕುಕ್ಕಳ್ಳಿ ಹಾಗೂ ಕುಮಟಾದ ಅಲ್ಮಾಬ್ರೂಕ್ ಗಣಿ ಸೇರಿ ಒಟ್ಟು ಐದು ಜನ ಮೂರು ರಾಯಲ್ ಎನ್ಫೀಲ್ಡ್ನಲ್ಲಿ ಜೂನ್ 7ರಂದು ಉತ್ತರ ಭಾರತದ ಕಡೆ ಪ್ರಯಾಣ ಬೆಳಸಿದ್ದರು. ಆದರೆ ಇದೇ ಸಮಯಕ್ಕೆ ಉತ್ತರ ಭಾರತದಲ್ಲಿ ಭಾರೀ ಮಳೆಗೆ ಪ್ರವಾಹ ಸೃಷ್ಟಿಯಾಗಿತ್ತು.
ಹಿಮಾಚಲ ಪ್ರದೇಶದ ಕುಲು ಸಮೀಪ ಕಸೋಲ್ ಎಂಬಲ್ಲಿ ರಾತ್ರಿ ತಂಗಿದ್ದ ಐವರು ಬೆಳಗ್ಗೆ ಬೇಗನೆ ಎದ್ದು ಮಳೆಯಲ್ಲಿ ಮುಂದಿನ ಪ್ರಯಾಣ ನಡಿಸಿದ್ದರು. ಆದರೆ ಬಳಿಕ ಬಂದ ಸುದ್ದಿ ನೋಡಿ ತಂಡದ ಸದಸ್ಯರ ಎದೆ ಝಲ್ ಎನ್ನುವಂತಾಗಿತ್ತು. ಕಸೋಲ್ ಇದೇ ತಾವು ಉಳಿದುಕೊಂಡಿದ್ದ ಹೋಟೆಲ್ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು.
ಅಲ್ಲದೆ ಶ್ರೀನಗರ ಸಮೀಪವೂ ನಾವು ಸೇತುವೆಯೊಂದನ್ನು ದಾಟಿದ ಕೆಲ ಹೊತ್ತಿನ ಬಳಿಕ ಸೇತುವೆ ಪ್ರವಾಹದಿಂದ ಉಕ್ಕಿ ಹರಿಯತೊಡಗಿತ್ತು. ಆದರೆ ನಮ್ಮ ಕುಟುಂಬಸ್ಥರ ಪ್ರಾರ್ಥನೆಯಿಂದಲೋ ಏನೋ ಅದೃಷ್ಟವಸಾತ್ ಯಾವುದೇ ತೊಂದರೆ ಇಲ್ಲದೆ ವಾಪಸ್ಸಾಗಿದ್ದೇವೆ ಎನ್ನುತ್ತಾರೆ ಪ್ರವಾಸಿ ತಂಡದ ದರ್ಶನ್ ಭುಜಲೆ ಹೇಳಿದರು.
ಇನ್ನು ಪ್ರತಿ ದಿನ 600 ಕಿಲೋ ಮೀಟರ್ ದೂರ ಕ್ರಮಿಸುವ ಗುರಿಯೊಂದಿಗೆ ಹೊರಟ್ಟಿದ್ದ ನಾವು ಜೈಪುರ ಬಳಿ ಹೆದ್ದಾರಿ ಪಕ್ಕವೇ ಟೆಂಟ್ ಹಾಕಿ ರಾತ್ರಿ ತಂಗಿದ್ದೇವು. ಆದರೆ ಬೆಳಗ್ಗೆ 4 ಗಂಟೆಗೆ ಭಾರೀ ಮಳೆಯಿಂದ ಟೆಂಟ್ ಹಾರಿ ಹೋಗಿತ್ತು.
ಆದರೆ ಪುಣೆ, ಇಂದೋರ್ ಅಜ್ಮೇರ್, ಜೈಪುರ, ಆಗ್ರಾ, ದೆಹಲಿ, ಪಠಾಣಕೋಟ್, ಅಮೃತಸರ, ಜಮ್ಮು, ಶ್ರೀನಗರ, ಕಾರ್ಗಿಲ್, ಲೇಹ್, ಲದಾಕ್, ಸರ್ಚು, ಮಲಾಲಿ, ಶಿಲ್ಮಾ ಚಂಡೀಘಢ ಹೀಗೆ ದೇಶದ ಪ್ರಮುಖ ಊರುಗಳನ್ನು ಸುತ್ತಿ ಸುರಕ್ಷಿತವಾಗಿ ಮರಳಿದ್ದೇವೆ. ಅಮೃತಸರದಲ್ಲಿ ವಾಘಾ ಬಾರ್ಡರ್, ಕಾರ್ಗಿಲ್ನ ಹುತಾತ್ಮರ ಸ್ಮಾರಕಗಳು ಮರೆಯಲಾರದ ಅನುಭವ. ದೇಶದ ಪ್ರತಿಯೊಬ್ಬರೂ ನೋಡಬೇಕಾದ ಸ್ಥಳಗಳವು ಎಂದು ಪ್ರಕಾಶ ನಾಯ್ಕ ಹೇಳಿದರು.
ಇನ್ನು ವಾಹನ ತೆರಳುವ ವಿಶ್ವದ ಅತಿ ಎತ್ತರದ ಪ್ರದೇಶ ಉಮ್ಲಿಂಗ್ ಲಾ ಸಮುದ್ರ ಮಟ್ಟದಿಂದ 19,024 ಅಡಿ ಇದೆ. ಈ ಪ್ರದೇಶದಲ್ಲಿ ಶೂನ್ಯಕ್ಕಿಂತ ಕಡಿಮೆ ತಾಪಮಾನ ಇರುತ್ತದೆ. ಅಲ್ಲಿಂದ ಅತೀ ಸಮೀಪದಲ್ಲಿ ಚೀನಾ ಗಡಿಯಿದೆ. ವರ್ಷದ ಎಲ್ಲ ಸಮಯದಲ್ಲಿ ಅಲ್ಲಿಗೆ ತೆರಳಲು ಅವಕಾಶ ಸಿಗುವುದಿಲ್ಲ. ನಮ್ಮ ಅದೃಷ್ಟಕ್ಕೆ ಅಲ್ಲಿಗೆ ತೆರಳಲು ಅವಕಾಶ ಸಿಕ್ಕಿತು. ನಡುವೆ ಕೊಂಚ ಆಮ್ಲಜನಕದ ಸಮಸ್ಯೆಯಾಯಿತು. ಆದರೆ, ಅದನ್ನೆಲ್ಲ ಮೀರಿ ನಾವು ಅಲ್ಲಿಗೆ ಹೋಗಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ ಬಂದೆವು ಎಂದು ಹೇಳಿದರು.
ಒಟ್ಟಾರೆ ಪ್ರವಾಸಿ ತಾಣಗಳನ್ನು ಸುತ್ತಲು ಪ್ರವಾಸ ಕೈಗೊಂಡಿದ್ದ ಬೈಕ್ ರೈಡರ್ಗಳು ಉತ್ತರ ಭಾರತದಲ್ಲಿ ಎದುರಾದ ಪ್ರವಾಹದಿಂದ ಅದೃಷ್ಟವಸಾತ್ ಪಾರಾಗಿ ಮರಳಿ ಕುಟುಂಬಸ್ಥರನ್ನು ಸೇರಿಕೊಂಡಿರುವುದೇ ಸಂತೋಷದ ವಿಚಾರವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications