2018ನೇ ಸಾಲಿನ ಕೊಂಕಣಿ ಅಕಾಡೆಮಿ ಪ್ರಶಸ್ತಿ ಘೋಷಣೆ
ಕಾರವಾರ, ಫೆಬ್ರವರಿ 10: 2018ನೇ ಸಾಲಿನ ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ 2018ನೇ ಸಾಲಿನ ಪುಸ್ತಕ ಬಹುಮಾನ ಘೋಷಣೆಯಾಗಿದೆ.
ಅಕಾಡೆಮಿಯ ಗೌರವ ಪ್ರಶಸ್ತಿಗೆ ಕೊಂಕಣಿ ಸಾಹಿತ್ಯದಲ್ಲಿ ಜೆ.ಎಫ್.ಡಿಸೋಜಾ, ಕೊಂಕಣಿ ಕಲೆಯಲ್ಲಿ ಕೂಡ್ಲ ಆನಂದು ಮಧುಕರ್ ಶ್ಯಾನಭಾಗ, ಕೊಂಕಣಿ ಜಾನಪದದಲ್ಲಿ ಡಾ.ವಸಂತ ಬಾಂದೇಕರ್ ಆಯ್ಕೆಯಾಗಿದ್ದಾರೆ.
ಕೊಂಕಣಿ ಕವನದಲ್ಲಿ ರೋಶು ಬಜ್ಪೆ ಅವರ 'ತೀಂತ್ ಜಾಲೆಂ ರಗತ್', ಕೊಂಕಣಿ ಸಣ್ಣಕಥೆಯಲ್ಲಿ ಜೆಯಲ್ ಮಂಜರಪಲ್ಕೆ ಅವರ 'ಚಂದ್ರೆಮಾಚಿ ಖತಾಂ', ಕೊಂಕಣಿ ಕಾದಂಬರಿಯಲ್ಲಿ ಲವಿ ಗಂಜಿಮಠ ಅವರ 'ಚುಕ್ಲ್ಲಿಂ ಮೆಟಾಂ" ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ.

ಜೆ.ಎಫ್.ಡಿಸೋಜಾ
ಜೋಕಿಮ್ ಫೆಡ್ರಿಕ್ ಡಿ'ಸೋಜಾ ಇವರ ಜನನ ಮಂಗಳೂರು ಮಿಲಾಗ್ರಿಸ್ ನ ಅತ್ತಾವರದಲ್ಲಿ. 1961ರಲ್ಲಿ ಸರಕಾರಿ ಅರಣ್ಯ ಇಲಾಖೆಯಲ್ಲಿ ಸೇವೆಗೆ ಸೇರಿಕೊಂಡು 39 ವರ್ಷಗಳ ಸುದೀರ್ಘ ಸೇವೆ ನೀಡಿ, ಸುಪರಿಟೆಂಡೆಂಟ್ ಪದವಿಯೊಂದಿಗೆ ನಿವೃತ್ತಿ ಹೊಂದಿದ್ದಾರೆ. ಇವರು ಜೆ.ಎಫ್. ಡಿಸೋಜಾ ಅತ್ತಾವರ, ಜೆಫ್ರಿ ಕುಮಾರ್, ಜೆಪ್ಪು ಜೆಫ್ರಿ ಹೆಸರಿನಲ್ಲಿ ಮಕ್ಕಳ ಕತೆ, ಲೇಖನಗಳನ್ನು ಬರೆದಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕೊಂಕಣಿ, ತುಳು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಈ ರೀತಿ ಕೊಂಕಣಿ, ಕನ್ನಡ, ಇಂಗ್ಲಿಷ್, ತುಳು ಸಾಹಿತ್ಯದಲ್ಲಿಇವರ ಕೆಲಸ ಇಂದಿಗೂ ಸಾಗುತ್ತಲೇ ಇದೆ.
ಕೂಡ್ಲ ಆನಂದು ಮಧುಕರ್ ಶ್ಯಾನಭಾಗ
ಕೂಡ್ಲ ಆನಂದ ಮಧುಕರ್ ಶ್ಯಾನಭಾಗ ಇವರ ಜನನ 1953. ಸುಮಾರು 40 ಕ್ಕೂ ಹೆಚ್ಚು ನಾಟಕದ ನಿರ್ದೇಶನ ಮಾಡಿ ಪ್ರಮುಖ ನಗರ ಉತ್ಸವಗಳಲ್ಲಿ ಪ್ರದರ್ಶನ ನೀಡಿರುತ್ತಾರೆ. 2005-08 ನೇ ಸಾಲಿನಲ್ಲಿ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅನೇಕ ಯುವ ಕಲಾವಿದರನ್ನು ಒಟ್ಟುಗೂಡಿಸಿ ಕೊಂಕಣಿ ನಾಟಕ ಕಲಾ ತರಬೇತಿಯನ್ನು ನಡೆಸುತ್ತಿದ್ದಾರೆ.
ಡಾ.ವಸಂತ ಬಾಂದೇಕರ್
ಡಾ. ವಸಂತ ಬಾಂದೇಕರ್ ರವರ ಜನನ 1947. ಕೊಂಕಣಿ ಏಕ್ವ್ಯಕ್ತಿ ಸೇವೆಯ ಜೊತೆಗೆ ನಶಿಸಿ ಹೋಗುತ್ತಿರುವ ಕೊಂಕಣಿ ಜಾನಪದ ಕಲೆಗಳನ್ನು, ಸಾಹಿತ್ಯವನ್ನು ಲಿಖಿತವಾಗಿ ಛಾಯಾ ಚಿತ್ರದ ಮುಖಾಂತರ ಆಡಿಯೋ-ವೀಡಿಯೋ ಮೂಲಕ ಸಂಗ್ರಹಿಸಿ ಯುವಕ ಯುವತಿಯರಿಗೆ ತರಬೇತಿ ನೀಡಿ ವಿವಿಧ ಕಲಾತಂಡಗಳನ್ನು ಕಾರವಾರ ಕರಾವಳಿ ಉತ್ಸವ- ಕೊಂಕಣಿ ಸಾಹಿತ್ಯ ಅಕಾಡೆಮಿ ಉತ್ಸವ-ಜಾಗೃತಿ ಅಭಿಯಾನ-ಮಾಂಡ ಸೋಬಾಣ ಆಯೋಜಿತ ಉತ್ಸವ ಹೀಗೆ ಹಲಾವಾರು ಉತ್ಸವಗಳಲ್ಲಿ ಇವರ ನೇತೃತ್ವದ ಜೊತೆಗೆ ಕಲಾತಂಡಗಳ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೀಡಿರುತ್ತಾರೆ.
ಪುಸ್ತಕ ಬಹುಮಾನ ಪುರಸ್ಕೃತರು
ರೋಶು ಬಜ್ಪೆ ಎಂ.ಕಾಮ್. ಪದವೀಧರಾಗಿದ್ದು, ಸಣ್ಣ ಕತೆ, ವಿನೋದ, ವಿಡಂಬನಾ, ಲೇಖನಾಂ ಲಲಿತಪ್ರಬಂಧಗಳನ್ನು ಬರೆದಿದ್ದಾರೆ.
ಜೆಯಲ್ ಮಂಜರಪಲ್ಕೆ ಹೆಸರಲ್ಲಿ ಕೊಂಕಣಿಯಲ್ಲಿ ಬರೆಯುತ್ತಿರುವ ಜ್ಯೋತಿ ಲೊರಿನ್ ಡಿಸಿಲ್ವಾ ಮೂಲತ: ಬೆಳ್ಮಣ್ಣಿನವರು. ಎಂ.ಎ. ಬಿ.ಎಡ್ ಮಾಡಿ ಕುಂದಾಪುರದ ಸಂತ ಮೇರಿಸ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ಅವರ ಕಥೆಗಳು ಕೊಂಕಣಿಯ ವಿವಿಧ ನಿಯತಕಾಲಿಕಗಳಲ್ಲಿ ಪ್ರಕಟವಾಗುತ್ತಿವೆ.
ತಾರಾ ಲವೀನಾ ಫೆರ್ನಾಂಡಿಸ್, ಎಂ.ಎ. ಬಿ.ಎಡ್ ಪದವೀಧರೆಯಾಗಿದ್ದು, ಕಿನ್ನಿಕಂಬಳ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಲವಿ ಗಂಜಿಮಠ ಹೆಸರಿನಲ್ಲಿ ಕೊಂಕಣಿ ಸಾಹಿತ್ಯ ರಚನೆ ಮಾಡುತ್ತಿರುವ ಇವರು ಅಮ್ಚೊ ಯುವಕ್ ಪತ್ರಿಕೆಯಲ್ಲಿ ಪ್ರಕಟವಾದ ವಿಧಿಚಿ ದಾವ್ಲಿ ಎನ್ನುವ ಸಣ್ಣ ಕಥೆಯ ಮೂಲಕ ಸಾಹಿತ್ಯ ಸಂಸಾರಕ್ಕೆ ಕಾಲಿಟ್ಟರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications