ಕಾರವಾರದಲ್ಲಿ ಮತ್ತೆ ಬಸ್ ಅಪಘಾತ: ಕಂಡಿಷನ್ ಇಲ್ಲದ ಬಸ್ಗಳನ್ನು ರಸ್ತೆಗಿಳಿಸದಂತೆ ಸ್ಥಳೀಯರ ಆಕ್ರೋಶ!
ಕಾರವಾರ, ಜನವರಿ 04: ಶಕ್ತಿ ಯೋಜನೆ ಜಾರಿಯಾದ ಬೆನ್ನಲ್ಲೇ ಉಚಿತ ಪ್ರಯಾಣದಿಂದಾಗಿ ಸಾರಿಗೆ ಬಸ್ಗಳಲ್ಲಿ ಓಡಾಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಬಸ್ಗಳು ನಿತ್ಯವೂ ತುಂಬಿಯೇ ಓಡಾಡುತ್ತಿದ್ದರೂ ಕೂಡ ಈವರೆಗೂ ಹೆಚ್ಚುವರಿ ಅಥವಾ ಹೊಸ ಬಸ್ ಆಗಲಿ ಬಿಡುವ ಕೆಲಸವಾಗಿಲ್ಲ. ಆದರೆ ಗಡಿ ಜಿಲ್ಲೆ ಕಾರವಾರದಲ್ಲಿ ಬಸ್ ಕಂಡಿಷನ್ ಇಲ್ಲದೆ ಇದ್ದರೂ ಬಸ್ ತುಂಬ ಜನರನ್ನು ತುಂಬಿಕೊಂಡು ತೆರಳುತ್ತಿದ್ದ ಬಸ್ಗಳು ಪದೇ ಪದೇ ಅಪಘಾತಕ್ಕೊಳಗಾಗುತ್ತಿರುವುದು ಇದೀಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದ ಗಡಿ ಜಿಲ್ಲೆ ಕಾರವಾರದಲ್ಲಿ ಕಂಡಿಷನ್ ಇಲ್ಲದ ಸರ್ಕಾರಿ ಬಸ್ಸುಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಅದರಂತೆ ಇಂದು ಮುಂಜಾನೆ ಕಾರವಾರದಿಂದ ನೌಕಾನೆಲೆಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಸಂಕ್ರಭಾಗ ಘಟ್ಟದಲ್ಲಿ ಕಂದಕಕ್ಕೆ ಉರುಳಿದ್ದು ಚಾಲಕ ಸೇರಿ ಐದು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ಮಳೆಯಿಂದಾಗಿ ಬಸ್ ಸ್ಕಿಡ್ ಆಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಕಳೆದ ಎರಡು ದಿನ ಹಿಂದೆಯೂ ಕಾರವಾರದಿಂದ ಮಲ್ಲಾಪುರಕ್ಕೆ ತೆರಳುತ್ತಿದ್ದ ಐವತ್ತಕ್ಕೂ ಅಧಿಕ ಜನರಿದ್ದ ಬಸ್ಸು ಬಸ್ ನಿಲ್ದಾಣದಿಂದ ಒಂದೆರಡು ಕಿಲೋ ಮೀಟರ್ ಸಂಚರಿಸುತ್ತಿರುವಾಗಲೇ ಎಕ್ಸೆಲ್ ಬ್ಲೇಡ್ ತುಂಡಾಗಿ ಅಪಘಾತಕ್ಕೊಳಗಾಗಿತ್ತು. ಬಸ್ಸು ರಸ್ತೆ ಮಧ್ಯದಲ್ಲಿಯೇ ಪಲ್ಟಿಯಾಗುವ ಹಂತಕ್ಕೆ ತಲುಪಿತ್ತು. ಇನ್ನು ಸ್ಥಳೀಯರು ಇದನ್ನು ಗಮನಿಸಿ ಪಲ್ಟಿಯಾಗುತ್ತಿದ್ದ ಬಸ್ಸನ್ನು ಎತ್ತಿ ಹಿಡಿದು ಜಾಕ್ ನೀಡಿ ಸಂಭವನೀಯ ಅವಘಡ ತಪ್ಪಿಸಿದ್ದರು.
ಘಟನೆಯಲ್ಲಿ ಬಸ್ನಲ್ಲಿ ಪ್ರಯಾಣಿಕರು ಸೇರಿದಂತೆ ರಸ್ತೆಯಲ್ಲಿದ್ದವರು ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಜಿಲ್ಲಾ ಕೇಂದ್ರದಲ್ಲಿಯೇ ಇಂತಹ ಗುಜರಿ ಬಸ್ಗಳನ್ನು ಬಿಡಲಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಕೂಡಲೇ ಇಲಾಖೆ ಈ ಬಗ್ಗೆ ಗಮನ ಹರಿಸಿ ಕಂಡೀಷನ್ ಇಲ್ಲದ ಬಸ್ಗಳನ್ನು ಗುಜರಿಗೆ ಹಾಕಿ ಒಳ್ಳೆಯ ಬಸ್ಗಳನ್ನು ಕಲ್ಪಿಸಬೇಕು ಎಂದು ಸೈಯದ್ ಆಗ್ರಹಿಸಿದ್ದಾರೆ.

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಬಸ್ ಡಿಪೋಗಳಿದೆ. ಶಿರಸಿ ವಿಭಾಗದಲ್ಲಿರುವ 510 ಬಸ್ ಗಳ ಪೈಕಿ ಜಿಲ್ಲೆಯಾದ್ಯಂತ ಪ್ರತಿನಿತ್ಯ ನಿಗದಿತ ಮಾರ್ಗಗಳಿಗೆ 477 ಬಸ್ ಸಂಚಾರ ನಡೆಸುತ್ತವೆ. ಬದಲಿ ವ್ಯವಸ್ಥೆ ಬಳಕೆಗಾಗಿ 30 ಬಸ್ ಮೀಸಲಿಡಲಾಗಿದೆ. ಗ್ರಾಮೀಣ ಪ್ರದೇಶಕ್ಕೆ 212 ಹಾಗೂ ತಾಲ್ಲೂಕು, ಜಿಲ್ಲೆಗಳಿಗೆ ತೆರಳುವ ವೇಗದೂತ ಬಸ್ಗಳು 235 ಇದೆ.
ಇನ್ನು ಹೆಚ್ಚುವರಿಯಾಗಿ 100 ಬಸ್ ಗಳ ಬೇಡಿಕೆ ಇದೆ. ಆದರೆ ಈ ಬಸ್ ಗಳಪೈಕಿ ಹತ್ತು ವರ್ಷ ಮೀರಿರುವ ಬಸ್ಗಳ ಸಂಖ್ಯೆ- 70ಕ್ಕೂ ಹೆಚ್ಚು ಇದೆ. 120 ಕ್ಕೂ ಹೆಚ್ಚು ಚಾಲಕ, ನಿರ್ವಾಹಕರು ಅಗತ್ಯತೆ ಇರುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಎಲ್ಲಿಯೋ ನಗರ ಪ್ರದೇಶಗಳಲ್ಲಿ ಓಡಿ ಹಳೆಯದಾದ ಬಸ್ ಗಳನ್ನು ಜಿಲ್ಲೆಗೆ ನೀಡಲಾಗುತ್ತಿದೆ. ಆದರೆ ಇವುಗಳ ಕಂಡಿಷನ್ ಸರಿ ಇಲ್ಲದೆ ಇದ್ದರೂ ಓಡಾಡಕ್ಕೆ ಬಿಡುತ್ತಿರುವ ಕಾರಣ ಇದೀಗ ಅಪಘಾತಗಳ ಸಂಖ್ಯೆ ಹೆಚ್ಚಲು ಕಾರಣ ಎನ್ನಲಾಗುತ್ತಿದೆ.
ಇನ್ನು ಶಕ್ತಿ ಯೋಜನೆ ಬಂದ ನಂತರ ಕಾರವಾರದಲ್ಲಿ ಬಸ್ಸಿನಲ್ಲಿ ಸಂಚರಿಸುವವರ ಸಂಖ್ಯೆ ಸಹ ಹೆಚ್ಚಾಗಿದೆ. ಕಂಡಿಷನ್ ಇಲ್ಲದ ಬಸ್ಸನ್ನು ಓಡಾಟಕ್ಕೆ ಬಿಡದೆ ಸುರಕ್ಷಿತ ಪ್ರಯಾಣಕ್ಕೆ ಉತ್ತಮ ಬಸ್ ಬಿಡಬೇಕು. ಇಲ್ಲವಾದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸ್ಥಳೀಯರಾದ ಯಶೋಧಾ ಆಗ್ರಹಿಸಿದ್ದಾರೆ.

ಇನ್ನು ಕಂಡಿಷನ್ ಇಲ್ಲದೇ ಈ ರೀತಿ ಓಡಾಟಕ್ಕೆ ಕಳಿಸಿ ದಾರಿ ಮಧ್ಯದಲ್ಲಿ ಅನಾಹುತ ಆಗಿರುವ ಹಲವು ಘಟನೆ ಕಾರವಾರದಲ್ಲಿ ನಡೆದಿದೆ. ಆದರೂ ಸಹ ಇದನ್ನು ಕಾರವಾರದ ಡಿಫೋ ಮ್ಯಾನೇಜರ್ ಸೌಮ್ಯಾ ಅವರ ಬಳಿ ಕೇಳಿದಾಗ ಪ್ರತಿಕ್ರೀಯೆ ನೀಡಲು ನಿರಾಕರಣೆ ಮಾಡಿದ್ದಾರೆ. ತಾವು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳೋದಾಗಿ ಜಾರಿಕೊಳ್ಳುತ್ತಿದ್ದಾರೆ.
ಒಟ್ಟಿನಲ್ಲಿ ಸರ್ಕಾರ ಒಂದೆಡೆ ಶಕ್ತಿ ಯೋಜನೆ ಮೂಲಕ ಬಸ್ಸಿನಲ್ಲಿ ಒಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಿಗೆ ಮಾಡುತ್ತಿದ್ದರೆ ಇನ್ನೊಂದೆಡೆ ಕಂಡಿಷನ್ ಇಲ್ಲದ ಬಸ್ಸಿನ ಓಡಾಟಕ್ಕೆ ಅವಕಾಶ ಮಾಡಿಕೊಡುವ ಮೂಲಕ ಅಪಘಾತಕ್ಕೆ ಆಹ್ವಾನ ಮಾಡುವಂತಿದ್ದು ಸಾರಿಗೆ ಇಲಾಖೆ ಸಚಿವರು ಈ ಬಗ್ಗೆ ಗಮನಹರಿಸಿ ಕಂಡಿಷನ್ ಇಲ್ಲದ ಬಸ್ಸಿನ ಓಡಾಟವನ್ನು ನಿಲ್ಲಿಸಿ ಮುಂದಾಗುವ ಅನಾಹುತಕ್ಕೆ ಬ್ರೇಕ್ ಹಾಕಬೇಕಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications