Get Updates
Get notified of breaking news, exclusive insights, and must-see stories!

ಯಲ್ಲಾಪುರದಲ್ಲಿ ಧರೆ‌ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು!

ಕಾರವಾರ, ಮಾರ್ಚ್ 8: ಗುಡ್ಡದ ಮಣ್ಣು (ಧರೆ) ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್ ನ ಮಂಜುನಾಥ ಭಟ್ಟ ಎನ್ನುವವರ ಮಾಲೀಕತ್ವದ ತೋಟದ ಕೆಲಸಕ್ಕೆಂದು ಏಳು ಮಂದಿ ಕಾರ್ಮಿಕರು ತೆರಳಿದ್ದರು. ಧರೆ ಅಗೆದು ತೋಟಕ್ಕೆ ಮಣ್ಣು ಹಾಕುತ್ತಿದ್ದ ವೇಳೆಗೆ ತೋಟದ ಧರೆ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ.

ಈ ವೇಳೆ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ್ ಡೋಯಿಪಡೆ (18) ಹಾಗೂ ಮಾಳು ಡೋಯಿಪಡೆ (21) ಅವರ ಮೇಲೆ ಮಣ್ಣು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Landslide In Yellapur: Four Labours Killed On The Spot

ತಗ್ಗಿಬಾಯಿ, ಸೋನಿ ಹಾಗೂ ಬೀರು ಎನ್ನುವವರು ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+