ಇದೆಂಥಾ ಪ್ರಶ್ನೆ: ಆರೋಗ್ಯ ಸಲಹೆ ಪಡೆಯೋಕೂ ಜಾತಿ ಹೇಳ್ಬೇಕಾ?
Recommended Video

ಕಾರವಾರ, ಜೂನ್.25 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ಸೌಲಭ್ಯಗಳು ಸುಲಭವಾಗಿ ದೊರೆಯಬೇಕೆಂಬ ಉದ್ದೇಶದೊಂದಿಗೆ ಸರ್ಕಾರ ಸಾರ್ವಜನಿಕರಿಗಾಗಿ ಆರಂಭಿಸಿರುವ '104 ಆರೋಗ್ಯ ವಾಣಿ'ಗೆ ಕರೆ ಮಾಡುವವರಿಗೆ ಪ್ರತಿನಿಧಿಗಳು ಜಾತಿಯ ಮಾಹಿತಿ ಕೇಳುತ್ತಿರುವುದು ಇದೀಗ ಆಕ್ಷೇಪಕ್ಕೆ ಕಾರಣವಾಗಿದೆ.
ಆರೋಗ್ಯ ಚಿಕಿತ್ಸೆಗಾಗಿ ಸಕಾಲದಲ್ಲಿ ಆಸ್ಪತ್ರೆಗಳನ್ನು ತಲುಪಲು ಸಾಧ್ಯವಾಗದ ಗ್ರಾಮೀಣ ಜನರು ದೂರವಾಣಿ ಮೂಲಕ ತಜ್ಞ ವೈದ್ಯರ ಸಲಹೆ ಪಡೆಯಲು 104 ಆರೋಗ್ಯ ವಾಣಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.
ಆರೋಗ್ಯ ಸಲಹೆ, ಆಪ್ತ ಸಮಾಲೋಚನೆ, ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ, ಆರೋಗ್ಯ ಸಂಸ್ಥೆ ಅಥವಾ ಸಿಬ್ಬಂದಿಯ ವಿರುದ್ಧ ದೂರು ದಾಖಲು ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಸಾಮಾನ್ಯ ಕಾಯಿಲೆಗಳಾದ ಕೆಮ್ಮು, ಶೀತ, ಜ್ವರ, ಭೇದಿ, ಹೊಟ್ಟೆ ನೋವು, ಸಕ್ಕರೆ ಕಾಯಿಲೆ, ಮೊಡವೆ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಔಷಧ ಶಿಫಾರಸ್ಸು ಹಾಗೂ ಅವುಗಳ ಸೇವನೆಯ ಬಗ್ಗೆ ದೂರವಾಣಿ ಮೂಲಕವೇ ಇಲ್ಲಿ ಸಲಹೆಗಳನ್ನು ನೀಡಲಾಗುತ್ತದೆ.

ಇದಕ್ಕಾಗಿ ಕರೆ ಮಾಡುವ ಸಾರ್ವಜನಿಕರ ಕರೆ ಸ್ವೀಕರಿಸುವ ಪ್ರತಿನಿಧಿಯು ಕರೆ ಮಾಡಿದವರ ಹೆಸರು ಹಾಗೂ ಜಿಲ್ಲೆಯನ್ನು ಕೇಳಿ ತಮ್ಮಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಬಳಿಕ ಕರೆ ಮಾಡಿದವರಿಗೆ ನೋಂದಾವಣಿ ಸಂಖ್ಯೆಯೊಂದನ್ನು ನೀಡುತ್ತಾರೆ.
ಎರಡನೇ ಬಾರಿಗೆ ಸಹಾಯವಾಣಿಗೆ ಕರೆ ಮಾಡಿದರೆ ಈ ಸಂಖ್ಯೆಯನ್ನು ಹೇಳಿದರೆ ಸಾಕು, ಸಂಪೂರ್ಣ ಮಾಹಿತಿ ಪ್ರತಿನಿಧಿಗಳಿಗೆ ಲಭ್ಯವಾಗಲಿದೆ.
ಇವಿಷ್ಟನ್ನು ಕೇಳಿದ ಪ್ರತಿನಿಧಿಗಳು ಕರೆಯನ್ನು ಇನ್ನೊಬ್ಬ ಪ್ರತಿನಿಧಿಗೆ ವರ್ಗಾಯಿಸುತ್ತಾರೆ. ಈ ಪ್ರತಿನಿಧಿ ಕರೆ ಮಾಡಿದವರಿಗೆ ಸಲಹೆಗಳನ್ನು ನೀಡುತ್ತಾರೆ. ಸಲಹೆ ನೀಡಿದ ಬಳಿಕ, 'ಈ ಉಚಿತ ಸಹಾಯವಾಣಿಯು ರಾಜ್ಯ ಸರ್ಕಾರ ಹಾಗೂ ಪಿಎಸ್ಎಂಆರ್ ಐ ಸಹಯೋಗದಲ್ಲಿ ನಡೆಯುತ್ತಿರುವುದರಿಂದ ಸರ್ಕಾರದ ಮಾಹಿತಿಗಾಗಿ, ನಿಮ್ಮ ಆಕ್ಷೇಪಣೆ ಇಲ್ಲದಿದ್ದರೆ ನಿಮ್ಮ ಜಾತಿ ಯಾವುದೆಂದು ತಿಳಿದುಕೊಳ್ಳಬಹುದೆ' ಎಂದು ಪ್ರಶ್ನಿಸುತ್ತಿದ್ದಾರೆ.

ಸರ್ಕಾರದ ಸಹಾಯವಾಣಿಯಾಗಿಯೂ ಸಾರ್ವಜನಿಕರ ಜಾತಿಯನ್ನು ಕೇಳುತ್ತಿರುವುದು ಆಕ್ಷೇಪಾರ್ಹವಾಗಿದ್ದು, ಇದು ಸರ್ಕಾರದಿಂದಲೇ ಆಗುತ್ತಿದೆಯೇ ಅಥವಾ ಪ್ರತಿನಿಧಿಗಳು ವೈಯಕ್ತಿಕ ಹಿತಾಸಕ್ತಿಯಿಂದ ಮಾಡುತ್ತಿದ್ದಾರೆಯೇ ಎನ್ನುವುದು ತಿಳಿದುಬರಬೇಕಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications