ಶುಭ ಶಕುನವೇ? ಎಚ್ಡಿಕೆ ಪೂಜೆ ಸಲ್ಲಿಸುವ ವೇಳೆ ಪುಷ್ಪ ಪ್ರಸಾದ ಕೊಟ್ಟ ಗೋಕರ್ಣ ಗಣಪತಿ!
ಕರ್ನಾಟಕ ವಿಧಾನಸಭೆ ಚುನಾವಣೆ 2023: ಮುಂಬರುವ ಚುನಾವಣೆಯ ಸಿದ್ಧತೆಯಲ್ಲಿ ನಿರತರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಗೋಕರ್ಣದ ಮಹಾಗಣಪತಿ ದೇಗುಲದಲ್ಲಿ ಗಣಪ ಪ್ರಸಾದ ಕೊಟ್ಟಿದ್ದಾನೆ.
ಕುಮಾರಸ್ವಾಮಿಯವರು ಪೂಜೆ ಸಲ್ಲಿಸುವ ವೇಳೆ ಪುಷ್ಪ ಪ್ರಸಾದ ಲಭಿಸಿದೆ. ಗೋಕರ್ಣ ಮಹಾಗಣಪತಿ ದೇಗುಲದಲ್ಲಿ ಗಣಪ ಪ್ರಸಾದ ಕೊಟ್ಟಿದ್ದಾನೆ. ಈ ಮೂಲಕ ಮಹಾಗಣಪತಿ ಅಭಯ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಗಣಪತಿ ಬಲಗಡೆ ಕಿವಿಯಿಂದ ಹೂವು ಬಿದ್ದಿದ್ದು ಹೆಚ್.ಡಿ. ಕುಮಾರಸ್ವಾಮಿ ಭಕ್ತಿಯಿಂದ ಬೇಡಿಕೊಂಡಿದ್ದಾರೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ 'ಪಂಚರತ್ನ' ಯಾತ್ರೆಯು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಕುಮಾರಸ್ವಾಮಿ ತೆರಳಿದ್ದರು. ಮಹಾಬಲೇಶ್ವರ ದೇವರ ಆಶೀರ್ವಾದವನ್ನು ಪಡೆದರು.
ಬಳಿಕ ಅವರು ಶಿವನ ಆತ್ಮಲಿಂಗದ ದರ್ಶನ ಪಡೆದು ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಘ್ನ ನಿವಾರಕನಿಗೆ ಪೂಜೆ ಮಾಡುವ ವೇಳೆ ಪುಷ್ಪ ಪ್ರಸಾದವನ್ನು ಗಣಪ ನೀಡಿದ್ದಾನೆ. ಹೆಚ್ಡಿಕೆ ಪೂಜೆ ಮಾಡುವ ವೇಳೆ ಬಲಭಾಗದಲ್ಲಿ ಪುಷ್ಪ ಬಿದ್ದಿದ್ದು ಅರ್ಚಕರು ಅದನ್ನು ಕುಮಾರಸ್ವಾಮಿಗೆ ನೀಡಿದ್ದಾರೆ.
ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು,' ಅಭಿವೃದ್ಧಿ ಮಾಡಬೇಕಾದ ಸರ್ಕಾರ ಗೊಂದಲ ಮಾಡುತ್ತಿದೆ. ಹಿಜಾಬ್ ವಿಚಾರ ತೆಗೆದು ದೇಶದಲ್ಲಿ ಗೊಂದಲ ಹುಟ್ಟಿಸಿದೆ. ಊಟ ಮಾಡುವ ಹಲಾಲ್ ವಿಚಾರದಲ್ಲೂ ಗೊಂದಲ ಮೂಡಿಸಿದೆ. ಜೆಡಿಎಸ್ ಅಧಿಕರಕ್ಕೆ ಬಂದರೆ ನೆಮ್ಮದಿ ಜೀವನಕ್ಕೆ ಆಧ್ಯತೆ ಎಂದರು.

ರಾಜ್ಯ ವಿಧಾನಸಭೆ ಚುನಾವಣೆ:-
ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಹೀಗಾಗಿ ಪ್ರಬಲ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಹಲವಾರು ಭರವಸೆಗಳ ಮೂಲಕ ಜನರನ್ನು ತನ್ನತ್ತ ಸೆಳೆಯುವ ಕಾರ್ಯದಲ್ಲಿ ನಿರತವಾಗಿವೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications