ಮೈಕ್‌ ನಿರ್ಬಂಧ ದೇವಾಲಯ, ಚರ್ಚ್‌ಗೂ ಅನ್ವಯಿಸಬೇಕು; ಮುತಾಲಿಕ್

ಕಾರವಾರ, ಮಾರ್ಚ್ 19: "ಕೇವಲ ಮಸೀದಿಗಳಲ್ಲಿ ಮೈಕ್‌ಗಳಿಗೆ ನಿರ್ಬಂಧಿಸುವುದು ಮಾತ್ರವಲ್ಲ, ಸಾಮಾನ್ಯ ನಾಗರಿಕರ ಸುಖ, ಶಾಂತಿ, ಸೌಹಾರ್ದಕ್ಕೆ ತೊಂದರೆಯಾಗುವ ಯಾವುದೇ ಶಬ್ದ ಮಾಲಿನ್ಯವಿದ್ದರೂ ತಡೆಯಬೇಕು. ಚರ್ಚ್‌ಗಳಿಗೂ ಇದನ್ನು ಅನ್ವಯಿಸಬೇಕು" ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಕಾರವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಅವರು ಪತ್ರಿಕಾಗೋಷ್ಠಿ ನಡೆಸಿದರು. "ರಾಜ್ಯ ವಕ್ಫ್ ಬೋರ್ಡ್ ಕರ್ನಾಟಕದಲ್ಲಿ ನೋಂದಾವಣೆಗೊಂಡಿರುವ 32 ಸಾವಿರ ಮಸೀದಿಗಳಿಗೆ ಪತ್ರ ಬರೆದು ಮೈಕ್ ಅನ್ನು ರಾತ್ರಿ 10ರಿಂದ 6 ಗಂಟೆಯವರೆಗೆ ಬಳಸಬಾರದು ಹಾಗೂ ಬಳಕೆಯ ವೇಳೆ ಅದರ ಶಬ್ದದಿಂದ ಯಾರಿಗೂ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ" ಇದು ಸ್ವಾಗತಾರ್ಹ ಎಂದರು.

"ಮಸೀದಿಗಳ ಮೈಕ್‌ನಿಂದ ಸಾರ್ವಜನಿಕರಿಗೆ ಎಷ್ಟು ಕಿರಿಕಿರಿಯಾಗುತ್ತಿದೆ ಎನ್ನುವುದು ವಕ್ಫ್ ಬೋರ್ಡ್‌ಗೆ ಈಗಲಾದರೂ ತಿಳಿದು ಎಚ್ಚರಿಕೆ ವಹಿಸುತ್ತಿರುವುದು ಅಭಿನಂದನಾರ್ಹ. ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಮೈಕ್‌ಗಳನ್ನು ಬಳಸಬಾರದು ಹಾಗೂ ಮಸೀದಿಗಳಲ್ಲಿ ಮೈಕ್‌ಗಳನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ 22 ವರ್ಷಗಳ ಹಿಂದೆಯೇ ಆದೇಶಿಸಿದೆ. ಆದರೆ ಇದು ಈವರೆಗೂ ಜಾರಿಯಾಗಿಲ್ಲ. ಕೋರ್ಟ್ ಆದೇಶವನ್ನೇ ಉಲ್ಲಂಘಿಸಿ ಮೈಕ್‌ಗಳನ್ನು ಬಳಸುತ್ತಿರುವುದನ್ನು ನೋಡಿದರೆ ಈಗ ವಕ್ಫ್ ಬೋರ್ಡ್‌ ಸೂಚನೆಯನ್ನು ಪಾಲಿಸುತ್ತಾರೆ ಎಂಬ ವಿಶ್ವಾಸ ನಮಗಿಲ್ಲ" ಎಂದು ಹೇಳಿದರು.

Loudspeakers Should Ban In Chruh Says Pramod Muthalik

"ಮಸೀದಿಗಳ ಮೈಕ್‌ಗಳಿಗೆ ಸಂಬಂಧಿಸಿ ಕೋರ್ಟ್‌ ಆದೇಶ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನಾ ಸಂಘಟನೆ ಏಪ್ರಿಲ್ ಕೊನೆಯ ವಾರದಲ್ಲಿ ಕರ್ನಾಟಕದ ಸಾವಿರ ಸ್ಥಳಗಳಲ್ಲಿ ಏಕಕಾಲದಲ್ಲಿ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ದಾಖಲಿಸಲಿದೆ. ಮೈಕ್‌ಗಳಿಂದ ಆಸ್ಪತ್ರೆ, ಕೋರ್ಟ್, ಶಾಲಾ- ಕಾಲೇಜುಗಳಿಗೆ ತೊಂದರೆಯಾಗುತ್ತಿದ್ದರೂ ದರ್ಪದಿಂದ ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆಂದು ದೂರುಗಳನ್ನು ನೀಡಿ ಹೋರಾಟ ಮಾಡುವವರಿದ್ದೇವೆ" ಎಂದು ತಿಳಿಸಿದರು.

"ಆದೇಶ ಪಾಲನೆಯಾಗದಿರುವುದಕ್ಕೆ ಕಾರಣ ಪೊಲೀಸ್ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ. ಇವರೇನು ಕತ್ತೆ ಕಾಯುತ್ತಿದ್ದಾರಾ?. ಇವರಿಗೆ ಆದೇಶದ ಬಗ್ಗೆ ಹಾಗೂ ಮೈಕ್‌ಗಳನ್ನು ಬಳಸುತ್ತಿರುವ ಬಗ್ಗೆ ತಿಳಿಯುತ್ತಿಲ್ಲವಾ?. ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯ ಪೊಲೀಸ್ ಠಾಣೆಗಳನ್ನು ಸುಡಲು ಕಾರಣವೇ ಇಂಥ ಬೇಜವಾಬ್ದಾರಿತನ. ನಿಯಮ ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೆ ಅವರು ಮೇಲೆದ್ದು ಬರುತ್ತಿದ್ದಾರೆ" ಎಂದು ಆರೋಪಿಸಿದರು.

"ಪಟಾಕಿ ಹೊಡೆಯುವುದು ವರ್ಷಕ್ಕೆ ಒಂದೇ ಸಾರಿ. ಇದರಿಂದ ಮಾಲಿನ್ಯ ಆಗುತ್ತದೆ ಎಂಬ ಬಗ್ಗೆ ಒಂದೇ ಒಂದು ದೂರು ಇನ್ನೂ ಬಂದಿಲ್ಲ. ಬುದ್ಧಿಜೀವಿಗಳು, ಎಡಪಂಥೀಯ ವಿಚಾರಧಾರೆಗಳನ್ನು ಹೊಂದಿರುವವರು ಹಿಂದೂ ಹಕ್ಕುಗಳನ್ನು ಮಾತ್ರ ಗುರಿಯಿಟ್ಟು ವ್ಯವಸ್ಥಿತವಾಗಿ ಇದರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವರ್ಷಕ್ಕೆ ಒಂದು ಸಾರಿ ಪಟಾಕಿ ಹೊಡೆಯುವುದರಿಂದ ಮಾಲಿನ್ಯ ಆಗುತ್ತದೆ, ಆರೋಗ್ಯ ಸಮಸ್ಯೆಗಳಾಗುತ್ತವೆ ಎಂಬ ಬಗ್ಗೆ ಒಂದೇ ಒಂದು ದೂರು ಇಲ್ಲ. ವರ್ಷದ ಇಡೀ ದಿನ ಐದು ಬಾರಿ ಮಸೀದಿಗಳಲ್ಲಿ ಅಜಾನ್ ಕೂಗುತ್ತಿರುವ ಬಗ್ಗೆ ಸಾವಿರ ಸಾವಿರ ದೂರುಗಳು ಬಂದಿವೆ" ಎಂದು ಹೇಳಿದರು.

"ಒಂದು ವೇಳೆ ಪಟಾಕಿಯಿಂದಲೂ ಸಮಸ್ಯೆ ಆಗುತ್ತದೆಯೆಂದಾದರೆ ದೂರುಗಳನ್ನು ನೀಡಿ, ಚರ್ಚೆಗಳು ಕೂಡ ನಡೆಯಲಿ. ಪಟಾಕಿ ಹೊಡೆಯುವುದು ತಪ್ಪು ಎಂದಾದರೆ ಅದನ್ನು ಕೂಡ ನಿಲ್ಲಿಸಿ. ಇಷ್ಟೇ ಅಲ್ಲದೇ, ದೇವಾಲಯಗಳಲ್ಲಿ ಮೈಕ್‌ಗಳಲ್ಲಿ ಸಂಗೀತ, ಭಜನೆಗಳನ್ನು ಹಾಕುವುದರಿಂದ ಸಾಮಾನ್ಯ ಜನರಿಗೆ ತೊಂದರೆಯಾದರೂ ನಿಲ್ಲಿಸಿ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+