ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರ: ಸಚಿವ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿ

|
Google Oneindia Kannada News

ಕಾರವಾರ, ಜೂನ್ 15: ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಾವಲು ವಾಹನದಲ್ಲಿದ್ದ ಮಾರುತಿ ನಾಯ್ಕ್ ಮತ್ತು ಚಾಲಕ ರಾಜೇಶ್ ನಾಯ್ಕ್ ಎಂಬುವವರಿಗೆ ಗಾಯಗಳಾಗಿದ್ದು, ಉತ್ತರ ಕನ್ನಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಮೂವರ ದುರ್ಮರಣ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ಅಪಘಾತದಲ್ಲಿ ಮೂವರ ದುರ್ಮರಣ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಕದ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಬೆಂಗಾವಲು ಪಡೆ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

minister RV Deshpande escort vehicle tumbled in Karwar

ಸೆಕೆ ಎಂದು ರೈಲಿನಿಂದ ಇಳಿದಿದ್ದ ನಾಲ್ವರ ಮೇಲೆ ಹರಿದ ರಾಜಧಾನಿ ಎಕ್ಸ್‌ಪ್ರೆಸ್ಸೆಕೆ ಎಂದು ರೈಲಿನಿಂದ ಇಳಿದಿದ್ದ ನಾಲ್ವರ ಮೇಲೆ ಹರಿದ ರಾಜಧಾನಿ ಎಕ್ಸ್‌ಪ್ರೆಸ್

ಆರ್ ವಿ ದೇಶಪಾಂಡೆ ಅವರು ಜಿಲ್ಲೆಯ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೆಂಗಾವಲು ವಾಹನ ಉರುಳಿಬಿದ್ದಿದೆ.

English summary
Congress leader, Revenue Minister RV Deshpande's escort vehicle tumbled in a national highway in Kadra near Karwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X