ಸಮಾಜ ಕಲ್ಯಾಣ ಇಲಾಖೆ ಕಟ್ಟಡದ ಗುದ್ದಲಿ ಪೂಜೆ ನಡೆಸಿದ ಮರುಕ್ಷಣವೇ, ಕಾಮಗಾರಿ ಸ್ಥಗಿತಗೊಳಿಸಲು ಆದೇಶ
ಕಾರವಾರ, ನವೆಂಬರ್ 30: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪಟ್ಟಣದ ಹೊರವಲಯದ ವಿಠ್ಠಲಘಾಟ ಬಳಿ 1 ಕೋಟಿ 86 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಕಟ್ಟಡದ ಶಿಲಾನ್ಯಾಸ ಹಾಗೂ ಗುದ್ದಲಿ ಪೂಜೆಯನ್ನು ನೆರವೆರಿಸಿದ ತಕ್ಷಣವೇ ಕಟ್ಟಡ ಕಾಮಗಾರಿಯನ್ನು ಸ್ಥಗಿತ ಮಾಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆ ಬಳಿಕ ಅವರು ಮಾಧ್ಯಮದೊಂದಿಗೆ ಸಚಿವ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಕಟ್ಟಡಕ್ಕೆ ಆಯ್ಕೆ ಮಾಡಿದ ಜಾಗದ ಕುರಿತು ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಯಾವುದೇ ಇಲಾಖೆಯ ಕಚೇರಿಗಳು ಸಾರ್ವಜನಿಕರಿಗೆ, ಬಡವರಿಗೆ ಅನುಕೂಲವಾಗುವ ಸ್ಥಳದಲ್ಲಿರಬೇಕೇ ಹೊರತು ಊರ ಹೊರಗೆ ಸರಕಾರದ ಕೊಟ್ಯಾಂತರ ರೂ. ವ್ಯಯ ಮಾಡಿ ಸಾರ್ವಜನಿಕರಿಗೆ ಅನುಕೂಲಕರವಾಗದ ರೀತಿಯಲ್ಲಿ ಮಾಡಬಾರದು ಎಂದರು.
ಹೀಗಾಗಿ ತಕ್ಷಣದಿಂದಲೇ ಇಲ್ಲಿ ಕಾಮಗಾರಿಯನ್ನು ನಿಲ್ಲಿಸಲು ಆದೇಶಿಸಿದ್ದೇನೆ. ಈಗ ನಿಗದಿಯಾದ ಸ್ಥಳವು ಪಟ್ಟಣದಿಂದ ದೂರದಲ್ಲಿದ್ದು, ನೀಲಂಪುರ ಗುಡ್ಡದಾಚೆ ಇದೆ. ಅಲ್ಲದೆ ಚತುಷ್ಪಥ ಹೆದ್ದಾರಿಯನ್ನು ದಾಟಿ ರೇಲ್ವೆ ಟ್ರ್ಯಾಕ್ ಹೋಗಬೇಕು. ಇಲ್ಲಿ ಯಾವ ಅನುಕೂಲತೆಗಳೂ ಇಲ್ಲ. ಹೀಗಾಗಿ ಇಲ್ಲಿ ಕಚೇರಿ ಕಟ್ಟಡ ಯಾಕೆ ಎಂದು ಪ್ರಶ್ನಿಸಿದರು.

ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರು ಈ ಸ್ಥಳದ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಹಶೀಲ್ದಾರ ಉದಯ ಕುಂಬಾರ, ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿ.ಪಂ ಸದಸ್ಯ ಜಗದೀಶ ನಾಯಕ, ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ, ಸ್ಥಾಯಿಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಪ್ರಮುಖರಾದ ಭಾಸ್ಕರ ನಾರ್ವೇಕರ, ರಾಜೇಂದ್ರ ನಾಯ್ಕ, ಸಂಜಯ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications