ಕಾಂಗ್ರೆಸ್ ಅಭ್ಯರ್ಥಿ ಶಿವರಾಮ ಹೆಬ್ಬಾರ ಮೇಲೆ ಚಪ್ಪಲಿಯಿಂದ ಹಲ್ಲೆ
ಕಾರವಾರ ಮೇ 09 : ಯಲ್ಲಾಪುರದ ಕಾಂಗ್ರೆಸ್ ಅಭ್ಯರ್ಥಿ ಶಿವರಾಮ ಹೆಬ್ಬಾರ ಅವರಿಗೆ ವ್ಯಕ್ತಿಯೋರ್ವ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಮುಂಡಗೋಡದ ಲಂಬಾಣಿ ತಾಂಡ ಎಂಬಲ್ಲಿ ಚುನಾವಣಾ ಪ್ರಚಾರ ನಡೆಸಲು ಸಂಜೆ ಶಿವರಾಮ ಹೆಬ್ಬಾರ ತೆರಳಿದ್ದರು. ಈ ವೇಳೆ ಪ್ರಚಾರ ಕಾರ್ಯ ಶುರು ಮಾಡಬೇಕೆನ್ನುವಷ್ಟರಲ್ಲಿ ವ್ಯಕ್ತಿಯೋರ್ವ ತನ್ನ ಚಪ್ಪಲಿಯಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಸ್ಥಳದಲ್ಲಿದ್ದ ಕಾರ್ಯಕರ್ತರು ಹಾಗೂ ಪೊಲೀಸರು ಹಲ್ಲೆ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಹಲ್ಲೆ ಮಾಡಿದವನನ್ನು ಲಂಬಾಣಿತಾಂಡದ ನಿವಾಸಿ ಮೊಹಮ್ಮದ್ ಜಾಫರ್ ಹುಬ್ಬಳ್ಳಿ ಎಂದು ಗುರುತಿಸಲಾಗಿದೆ. ಈತ ಕಳೆದ ಐದು ವರ್ಷಗಳಿಂದ ಆಶ್ರಯ ಮನೆಗಾಗಿ ಬೇಡಿಕೆ ಇಟ್ಟಿದ್ದನಂತೆ. ಇದಕ್ಕಾಗಿ ಶಾಸಕ ಶಿವರಾಮ ಹೆಬ್ಬಾರ ಅವರ ಬಳಿ ಅನೇಕ ಬಾರಿ ಬೇಡಿಕೆ ಇಟ್ಟು, ಮನವಿ ಮಾಡಿದ್ದನಂತೆ.

ಆದರೆ, ಅದನ್ನು ಈಡೇರಿಸದಿದ್ದಕ್ಕೆ ಕುಪಿತಗೊಂಡು ಪ್ರಚಾರದ ವೇಳೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಘಟನೆಯ ಬಳಿಕವೂ ಶಿವರಾಮ ಹೆಬ್ಬಾರ ಅವರು ತಮ್ಮ ಪ್ರಚಾರ ಮುಂದುವರಿಸಿದರು. ಈ ವೇಳೆ, ಇಂಥ ನಾಯಿಗಳಿಗೆಲ್ಲ ನಾನು ಬಗ್ಗಲ್ಲ. ಈ ಕೃತ್ಯದ ಹಿಂದೆ ಯಾರಿದ್ದಾರೆಂದು ಸಂಪೂರ್ಣ ತನಿಖೆ ನಡೆಯಬೇಕು. ಇದರ ಹಿಂದಿರುವ ಎಲ್ಲಾ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.
ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಪ್ರಮೋದ್ ಹೆಗಡೆ ಮತ್ತು ಕಾಂಗ್ರೆಸ್ ನಿಂದ ಶಿವರಾಮ ಹೆಬ್ಬಾರ್ ಸ್ಪರ್ಧಿಸುತ್ತಿದ್ದು, ಹವ್ಯಕ ಮತಗಳು ಒಡೆದುಹೋಗಬಹುದು ಎಂದು ಹೇಳಲಾಗುತ್ತಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications