ಶಿವಮೊಗ್ಗವಾಯ್ತು ಇದೀಗ ಉತ್ತರ ಕನ್ನಡಕ್ಕೂ ಹಬ್ಬಿದ ಮಂಗನ ಕಾಯಿಲೆ: ನಿಯಂತ್ರಣ ಹೇಗೆ?
ಉತ್ತರ ಕನ್ನಡ, ಜನವರಿ 31: ಆರಂಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್ಡಿ) ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕಬಂಧಬಾಹುಗಳನ್ನು ಚಾಚುತ್ತಿದೆ. ಶಿವಮೊಗ್ಗದ ಜನರು ಮಂಗನ ಕಾಯಿಲೆಯಿಂದ ಹೈರಾಣಾಗಿದ್ದಾರೆ. ಇದೀಗ ಈ ಕಾಯಿಲೆ ಉತ್ತರ ಕನ್ನಡ ಜಿಲ್ಲೆಗೂ ಹಬ್ಬಿದ್ದು, ಆತಂಕ ಹೆಚ್ಚಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಸಿದ್ದಾಪುರದ ಕೊರ್ಲಕೈದ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 7 ಪ್ರಕರಣಗಳು ಬೆಳಕಿಗೆ ಬಂದಿದೆ. ದಿನೇ ದಿನೇ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಕೇವಲ 10 ದಿನದಲ್ಲಿ 16 ಜನರಲ್ಲಿ ಕಾಯಿಲೆ ಕಾಣಿಸಿಕೊಂಡಿದೆ.

ಕಳೆದ ಕೆಲ ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಮಂಗನ ಕಾಯಿಲೆ ಜಿಲ್ಲೆಯಲ್ಲಿ ಇತ್ತೀಚಿಗೆ ಕಡಿಮೆಯಾಗಿತ್ತು. ಇದೀಗ ಮತ್ತೆ ಮಂಗನ ಕಾಯಿಲೆ ಆವರಿಸುತ್ತಿದ್ದು, ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಕಳೆದ ಐದು ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದ್ದು, ಈ ಪೈಕಿ 8 ಜನ ಕಾಯಿಲೆ ಉಲ್ಬಣಗೊಂಡು ಸಾವನ್ನಪ್ಪಿದ್ದರು.
ಇದೀಗ ಮತ್ತೆ ಈ ಕಾಯಿಲೆ ಜಿಲ್ಲೆಗೆ ಲಗ್ಗೆ ಇಟ್ಟಿದ್ದು, ಹಲವು ಜನರಲ್ಲಿ ಲಕ್ಷಣಗಳು ಕಾಣಿಸಿಕೊಂಡಿದೆ. ಇನ್ನು ಮಂಗನ ಕಾಯಿಲೆಯಿಂದ 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಡಳಿತಕ್ಕೆ ಹೊಸ ಸಮಸ್ಯೆ ಎದುರಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮಂಗನ ಕಾಯಿಲೆಗೆ ಆರಂಭದಲ್ಲೇ ಬ್ರೇಕ್ ಹಾಕಲು ಸಜ್ಜಾಗುತ್ತಿದೆ.

ಮಂಗನ ಕಾಯಿಲೆ ಎಂದರೇನು..?
ಮಂಗನ ಕಾಯಿಲೆ ಕೆ ಎಫ್ ಡಿವಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್ ವೈರಸ್) ಎಂಬ ವೈರಸ್ನಿಂದ ಹರಡುವ ಕಾಯಿಲೆಯಾಗಿದೆ. 1957ರಲ್ಲಿ ಮರಣ ಹೊಂದಿದ ಕೋತಿಯಲ್ಲಿ ಮೊದಲ ಬಾರಿಗೆ ಈ ವೈರಸ್ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ರೋಗಗ್ರಸ್ತ ಕೋತಿಯ ದೇಹದಲ್ಲಿದ್ದ ಉಣ್ಣಿ ಅಥವಾ ಉಣುಗು(Tick) ಕೋತಿ ಮರಣ ಹೂಂದಿದ ನಂತರ ಉದುರಿ ಗಾಳಿಯ ಮೂಲಕ, ಅಥವಾ ಜಾನುವಾರುಗಳ ಮೂಲಕ ಇಲ್ಲವೇ ನೇರವಾಗಿ ಮನುಷ್ಯನ ದೇಹಕ್ಕೆ ಅಂಟಿಕೊಳ್ಳುತ್ತದೆ.
ಅದು ಕಚ್ಚುವುದರಿಂದ ವೈರಾಣು ಮನುಷ್ಯನ ದೇಹ ಪ್ರವೇಶಿಸಿ, ರೋಗ ಉಂಟು ಮಾಡುತ್ತದೆ. ಸೂಕ್ತವಾದ ಲಸಿಕೆ ಚಿಕಿತ್ಸೆ ಇಲ್ಲದಿರುವ ಕಾರಣ ಈಗೀಗ ಇದು ಮಾರಣಾಂತಿಕ ಕಾಯಿಲೆಯಂತಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮೊದಲು ಕಾಣಿಸಿಕೊಂಡ ಮಂಗನ ಜ್ವರಕ್ಕೆ ಕಾರಣವಾದ ಈ ವೈರಸ್ಗೆ ಕ್ಯಾಸನೂರು ಎಂದು ಹೆಸರಿಡಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications