SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಟಾದ ನಾಗಾಂಜಲಿ ನಾಯ್ಕ
ಕಾರವಾರ, ಏಪ್ರಿಲ್ 30:ಮಾಜಿ ಬಿಎಸ್ಎಫ್ ಯೋಧನ ಮಗಳು ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾಳೆ.
ಕುಮಟಾ ಕಲಭಾಗದ ಕೊಲಬಾ ವಿಠೋಬಾ ಶಾನಭಾಗ ಕಲಭಾಗಕರ್ ಹೈಸ್ಕೂಲ್ ನ (ಸಿವಿಎಸ್ ಕೆ) ವಿದ್ಯಾರ್ಥಿನಿ ನಾಗಾಂಜಲಿ ನಾಯ್ಕ 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾಳೆ.
ನಾಗಾಂಜಲಿ, ಪರಮೇಶ್ವರ ನಾಯ್ಕ ಹಾಗೂ ಚೇತನಾ ನಾಯ್ಕ ದಂಪತಿಯ ಪುತ್ರಿ. ಪರಮೇಶ್ವರ ಅವರು ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸಿ, 2006ರಲ್ಲಿ ನಿವೃತ್ತಿ ಪಡೆದರು. ತದನಂತರ ಕಳೆದ ಹತ್ತು ವರ್ಷಗಳಿಂದ ಸ್ವಂತ ಟೆಂಪೊವೊಂದನ್ನು ಇಟ್ಟುಕೊಂಡು, ಬಾಡಿಗೆಗೆ ಬಿಡುತ್ತಿದ್ದಾರೆ.

"ನಾಗಾಂಜಲಿ Rank ಬರುತ್ತಾಳೆಂಬ ವಿಶ್ವಾಸ ನಮಗೆ ಹಾಗೂ ಅವಳಿಗೂ ಇತ್ತು. ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಹಳ ಕೂಲಂಕುಷವಾಗಿ ಅಧ್ಯಯನ ಮಾಡಿದ್ದಳು. ತುಂಬಾ ಮುಗ್ಧೆ ಹಾಗೂ ವಿಧೇಯಕ ವಿದ್ಯಾರ್ಥಿನಿ" ಎನ್ನುವುದು ಶಾಲೆಯ ಮುಖ್ಯ ಶಿಕ್ಷಕಿ ಸುಮಾ ಪ್ರಭು ಅವರ ಅಭಿಪ್ರಾಯ.
ಶಾಲೆಯಲ್ಲಿ ಪ್ರತಿವರ್ಷ 90ಕ್ಕೂ ಅಧಿಕ ಮಕ್ಕಳು ಡಿಸ್ಟಿಂಕ್ಷನ್ ಬರುತ್ತಿದ್ದರು. ಶೇ. 70 ನಮ್ಮಲ್ಲಿ ಕನಿಷ್ಠ ಅಂಕ. ಈ ಬಾರಿ 129 ಮಕ್ಕಳು ಪರೀಕ್ಷೆಗೆ ಕುಳಿತಿದ್ದರು ಎಂದು ಸುಮಾ ಪ್ರಭು ಅವರು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶೈಕ್ಷಣಿಕ ಜಿಲ್ಲೆ. ಈ ಬಾರಿ ಶೇ 88.12 ಫಲಿತಾಂಶ ದಾಖಲಿಸಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ಬಾರಿ ಇಷ್ಟೇ ಫಲಿತಾಂಶ ದಾಖಲಿಸಿ ಎರಡನೇ ಸ್ಥಾನದಲ್ಲಿತ್ತು. ಶಿರಸಿ ಶೈಕ್ಷಣಿಕ ಜಿಲ್ಲೆ 21ನೇ ಸ್ಥಾನದಲ್ಲಿತ್ತು. ಈ ಬಾರಿ 12ನೇ ಸ್ಥಾನಕ್ಕೆ ಬಂದಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications