ಹಲವು ಸುರಕ್ಷತಾ ಕ್ರಮಗಳೊಂದಿಗೆ ನಿರ್ವಿಘ್ನವಾಗಿ ನಡೆದ 'ದ್ವೀಪ ಜಾತ್ರೆ'
ಕಾರವಾರ, ಜನವರಿ 28: ಮೀನುಗಾರರ ಆರಾಧ್ಯದೈವ ಎಂದೇ ಕರೆಸಿಕೊಳ್ಳುವ ಇಲ್ಲಿನ ಕೂರ್ಮಗಡ ನಡುಗಡ್ಡೆಯ ನರಸಿಂಹ ದೇವರ ಜಾತ್ರೆ ಪ್ರತಿವರ್ಷದಂತೆ ಈ ಬಾರಿ ಸಹ ಅದ್ಧೂರಿಯಾಗಿ ನಡೆಯಿತು.
ಕಾರವಾರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕೂರ್ಮಗಡ ದ್ವೀಪಕ್ಕೆ ಜನರು ಬೋಟುಗಳಲ್ಲಿ ತೆರಳಿ ನರಸಿಂಹ ದೇವರ ದರ್ಶನ ಪಡೆದರು.
ಸಮುದ್ರದ ನಡುಗಡ್ಡೆಯಲ್ಲಿ ನಡೆಯುವ ಈ ವಿಶೇಷ ಜಾತ್ರೆ ದ್ವೀಪ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ. ಈ ಜಾತ್ರೆಗೆ ನೂರಾರು ಭಕ್ತರು ದೋಣಿಗಳಲ್ಲಿ ತೆರಳಿ ದೇವರ ದರ್ಶನ ಪಡೆದುಕೊಳ್ಳುವುದೇ ವಿಶಿಷ್ಟ ಅನುಭವ. ಆದರೆ ಕಳೆದೆರಡು ವರ್ಷಗಳ ಹಿಂದೆ ದೋಣಿ ದುರಂತ ಉಂಟಾಗಿ ಸಾವು ನೋವು ಸಂಭವಿಸಿದ್ದರಿಂದಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಈ ಬಾರಿ ಜಾತ್ರೆಗೆ ಅವಕಾಶ ನೀಡಲಾಗಿತ್ತು.

ಕಳೆದೆರಡು ವರ್ಷಗಳ ಹಿಂದೆ ಜಾತ್ರೆಗೆ ತೆರಳಿ ಆಗಮಿಸುತ್ತಿದ್ದ ವೇಳೆ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾಗಿ 16 ಮಂದಿ ಜಲಸಮಾಧಿಯಾಗಿದ್ದರು. ಈ ಹಿನ್ನಲೆ ಈ ಬಾರಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನ ಕೈಗೊಂಡಿದ್ದು, 9 ಪರ್ಸಿನ್ ಹಾಗೂ 19 ಟ್ರಾಲರ್ ಬೋಟುಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ಅಲ್ಲದೇ ಕೇವಲ ಬೈತಖೋಲ್ ಬಂದರಿನಿಂದ ಮಾತ್ರ ಜನರನ್ನು ಕರೆದೊಯ್ಯಲು ಅವಕಾಶ ನೀಡಿದ್ದು, ಭಕ್ತರು ಲೈಫ್ ಜಾಕೆಟ್ಗಳನ್ನು ಧರಿಸಿಯೇ ಬೋಟುಗಳಲ್ಲಿ ಪ್ರಯಾಣಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಸಾಕಷ್ಟು ಮಂದಿ ಭಕ್ತರು ಯಾವುದೇ ಆತಂಕವಿಲ್ಲದೇ ದ್ವೀಪ ಜಾತ್ರೆಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

ನರಸಿಂಹ ದೇವರಿಗೆ ಬಾಳೆಗೊನೆ ಸೇವೆ ನೀಡುವುದು ವಿಶೇಷವಾಗಿದ್ದು, ದೇವರಲ್ಲಿ ಹರಕೆ ಹೊತ್ತುಕೊಂಡರೆ ಈಡೇರುತ್ತದೆ ಎನ್ನುವ ನಂಬಿಕೆ ಇದೆ. ಅಲ್ಲದೇ ಮೀನುಗಾರರು ಪ್ರತಿವರ್ಷ ಜಾತ್ರೆಗೆ ಆಗಮಿಸಿ ದೇವರಿಗೆ ಬಾಳೆಗೊನೆಯನ್ನು ಅರ್ಪಿಸಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂದು ಬೇಡಿಕೊಳ್ಳುತ್ತಾರೆ.
ಕೊರೊನಾ ಹಿನ್ನಲೆ ಈ ಬಾರಿ ಗೋವಾ, ಮಹಾರಾಷ್ಟ್ರ ಭಾಗದ ಭಕ್ತರು ಆಗಮಿಸಿಲ್ಲವಾಗಿದ್ದು, ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಅಲ್ಲದೇ ಕಳೆದ ಬಾರಿ ದುರಂತ ಸಂಭವಿಸಿದ ಹಿನ್ನಲೆ ಜಾತ್ರೆಗೆ ತೆರಳುತ್ತಿರುವ ಪ್ರತಿಯೊಬ್ಬರ ಹೆಸರನ್ನೂ ನೋಂದಾಯಿಸಿಕೊಳ್ಳಲಾಗುತ್ತಿದ್ದು, ದ್ವೀಪದಲ್ಲೂ ಸಹ ಬೋಟುಗಳಿಂದ ಜನರನ್ನು ಸುರಕ್ಷಿತವಾಗಿ ದಡಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗಿತ್ತು. ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications