ಹಲವು ಸುರಕ್ಷತಾ ಕ್ರಮಗಳೊಂದಿಗೆ ನಿರ್ವಿಘ್ನವಾಗಿ ನಡೆದ 'ದ್ವೀಪ ಜಾತ್ರೆ'
ಕಾರವಾರ, ಜನವರಿ 28: ಮೀನುಗಾರರ ಆರಾಧ್ಯದೈವ ಎಂದೇ ಕರೆಸಿಕೊಳ್ಳುವ ಇಲ್ಲಿನ ಕೂರ್ಮಗಡ ನಡುಗಡ್ಡೆಯ ನರಸಿಂಹ ದೇವರ ಜಾತ್ರೆ ಪ್ರತಿವರ್ಷದಂತೆ ಈ ಬಾರಿ ಸಹ ಅದ್ಧೂರಿಯಾಗಿ ನಡೆಯಿತು.
ಕಾರವಾರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕೂರ್ಮಗಡ ದ್ವೀಪಕ್ಕೆ ಜನರು ಬೋಟುಗಳಲ್ಲಿ ತೆರಳಿ ನರಸಿಂಹ ದೇವರ ದರ್ಶನ ಪಡೆದರು.
ಸಮುದ್ರದ ನಡುಗಡ್ಡೆಯಲ್ಲಿ ನಡೆಯುವ ಈ ವಿಶೇಷ ಜಾತ್ರೆ ದ್ವೀಪ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ. ಈ ಜಾತ್ರೆಗೆ ನೂರಾರು ಭಕ್ತರು ದೋಣಿಗಳಲ್ಲಿ ತೆರಳಿ ದೇವರ ದರ್ಶನ ಪಡೆದುಕೊಳ್ಳುವುದೇ ವಿಶಿಷ್ಟ ಅನುಭವ. ಆದರೆ ಕಳೆದೆರಡು ವರ್ಷಗಳ ಹಿಂದೆ ದೋಣಿ ದುರಂತ ಉಂಟಾಗಿ ಸಾವು ನೋವು ಸಂಭವಿಸಿದ್ದರಿಂದಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಈ ಬಾರಿ ಜಾತ್ರೆಗೆ ಅವಕಾಶ ನೀಡಲಾಗಿತ್ತು.

ಕಳೆದೆರಡು ವರ್ಷಗಳ ಹಿಂದೆ ಜಾತ್ರೆಗೆ ತೆರಳಿ ಆಗಮಿಸುತ್ತಿದ್ದ ವೇಳೆ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾಗಿ 16 ಮಂದಿ ಜಲಸಮಾಧಿಯಾಗಿದ್ದರು. ಈ ಹಿನ್ನಲೆ ಈ ಬಾರಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನ ಕೈಗೊಂಡಿದ್ದು, 9 ಪರ್ಸಿನ್ ಹಾಗೂ 19 ಟ್ರಾಲರ್ ಬೋಟುಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ಅಲ್ಲದೇ ಕೇವಲ ಬೈತಖೋಲ್ ಬಂದರಿನಿಂದ ಮಾತ್ರ ಜನರನ್ನು ಕರೆದೊಯ್ಯಲು ಅವಕಾಶ ನೀಡಿದ್ದು, ಭಕ್ತರು ಲೈಫ್ ಜಾಕೆಟ್ಗಳನ್ನು ಧರಿಸಿಯೇ ಬೋಟುಗಳಲ್ಲಿ ಪ್ರಯಾಣಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ ಸಾಕಷ್ಟು ಮಂದಿ ಭಕ್ತರು ಯಾವುದೇ ಆತಂಕವಿಲ್ಲದೇ ದ್ವೀಪ ಜಾತ್ರೆಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

ನರಸಿಂಹ ದೇವರಿಗೆ ಬಾಳೆಗೊನೆ ಸೇವೆ ನೀಡುವುದು ವಿಶೇಷವಾಗಿದ್ದು, ದೇವರಲ್ಲಿ ಹರಕೆ ಹೊತ್ತುಕೊಂಡರೆ ಈಡೇರುತ್ತದೆ ಎನ್ನುವ ನಂಬಿಕೆ ಇದೆ. ಅಲ್ಲದೇ ಮೀನುಗಾರರು ಪ್ರತಿವರ್ಷ ಜಾತ್ರೆಗೆ ಆಗಮಿಸಿ ದೇವರಿಗೆ ಬಾಳೆಗೊನೆಯನ್ನು ಅರ್ಪಿಸಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂದು ಬೇಡಿಕೊಳ್ಳುತ್ತಾರೆ.
ಕೊರೊನಾ ಹಿನ್ನಲೆ ಈ ಬಾರಿ ಗೋವಾ, ಮಹಾರಾಷ್ಟ್ರ ಭಾಗದ ಭಕ್ತರು ಆಗಮಿಸಿಲ್ಲವಾಗಿದ್ದು, ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಅಲ್ಲದೇ ಕಳೆದ ಬಾರಿ ದುರಂತ ಸಂಭವಿಸಿದ ಹಿನ್ನಲೆ ಜಾತ್ರೆಗೆ ತೆರಳುತ್ತಿರುವ ಪ್ರತಿಯೊಬ್ಬರ ಹೆಸರನ್ನೂ ನೋಂದಾಯಿಸಿಕೊಳ್ಳಲಾಗುತ್ತಿದ್ದು, ದ್ವೀಪದಲ್ಲೂ ಸಹ ಬೋಟುಗಳಿಂದ ಜನರನ್ನು ಸುರಕ್ಷಿತವಾಗಿ ದಡಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗಿತ್ತು. ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications