ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ ನೆಬ್ಬೂರು ನಾರಾಯಣ ಹೆಗಡೆ ಇನ್ನಿಲ್ಲ
ಕಾರವಾರ, ಮೇ.11:ಯಕ್ಷಗಾನ ಕ್ಷೇತ್ರದ ಖ್ಯಾತ ಮತ್ತು ಹಿರಿಯ ಭಾಗವತ, ತಾಲೂಕಿನ ಹಣಗಾರ ನಿವಾಸಿ ನೆಬ್ಬೂರು ನಾರಾಯಣ ಹೆಗಡೆ (83) ಇಂದು ಶನಿವಾರ ಬೆಳಗ್ಗೆ ಶಿರಸಿ ತಾಲೂಕಿನ ನೆಬ್ಬೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
1956-57 ರ ಸಮಯದಲ್ಲಿ ಯಕ್ಷಗಾನದ ಆಸಕ್ತಿಯನ್ನು ಬೆಳೆಸಿಕೊಂಡ ಅವರು ಕೆರೆಮನೆ ಮೇಳವನ್ನು ಸೇರಿದರು. ಅಲ್ಲಿಂದ ಪ್ರಾರಂಭವಾದ ಅವರ ಯಕ್ಷಗಾನ ಪಯಣ 2010ರವರೆಗೂ ಅದೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಮುಂದುವರಿದಿತ್ತು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಕೆರೆಮನೆ ಶಿವರಾಮ ಹೆಗಡೆ, ಮಹಾಬಲ ಹೆಗಡೆ ಅವರಲ್ಲಿ ಭಾಗವತಿಕೆ ಅಭ್ಯಾಸ ಮಾಡಿದ ಅವರು, ಪ್ರಾಚಾರ್ಯ ನಾರ್ಣಪ್ಪ ಉಪ್ಪೂರ ಭಾಗವತರು ಕೆರೆಮನೆ ಮೇಳದಲ್ಲಿ ಇರುವಾಗ ಅವರೊಂದಿಗೆ ಸಂಗೀತಗಾರರಾಗಿ ಇದ್ದರು. ಅವರನ್ನು ತಮ್ಮ ಗುರುವಿಗೆ ಸಮ ಎಂದು ಭಾಗವತರೇ ಹೇಳುತ್ತಿದ್ದರು.

ಭಾವನಾತ್ಮಕ ಆಖ್ಯಾನಗಳಾದ ಕರ್ಣಪರ್ವ, ನಳದಮಯಂತಿ, ಹರಿಶ್ಚಂದ್ರ, ರಾಮನಿರ್ಯಾಣದಂತಹ ಪ್ರಸಂಗಗಳನ್ನು ಜನಮಾನಸದಲ್ಲಿ ಅಚ್ಚಳಿಯದಂತೆ ಮಾಡಿದ ಕೀರ್ತಿ ನೆಬ್ಬೂರು ಅವರಿಗೆ ಸಲ್ಲುತ್ತದೆ. ಕಲೆ ಎಂಬುದು ಆರಾಧನೆಯೇ ಹೊರತು ಗಳಿಗೆಯ ಭಾಗವಲ್ಲ ಎಂದು ತಾವು ಇರುವಷ್ಟು ದಿನವೂ ಅನುಸರಿಸಿಕೊಂಡು ಬಂದವರು.
ಭಾಗವತರ ಸೇವೆಯನ್ನು ಗುರುತಿಸಿ ಸಂದ ಪ್ರಶಸ್ತಿ- ಪುರಸ್ಕಾರಗಳು ಅನೇಕ. ಇಳಿವಯಸ್ಸಿನಲ್ಲೂ ಉತ್ಸಾಹದ ಚಿಲುಮೆ ಆಗಿದ್ದ ಅವರು ಅಭಿಮಾನಿಗಳ ಆಗ್ರಹಕ್ಕೆ ಮಣಿದು ಆಟ-ಕೂಟದಲ್ಲಿ ಭಾಗವಹಿಸುತ್ತಿದ್ದರು. ಅವರ ನಿಧನದಿಂದಾಗಿ ಉತ್ತರ ಕನ್ನಡ ಪರಂಪರೆಯ ಕೊಂಡಿ ಕಳಚಿದಂತಾಗಿದೆ.
ನೆಬ್ಬೂರು ನಾರಾಯಣ ಭಾಗವತರ ಆತ್ಮಕಥನವು 'ನೆಬ್ಬೂರಿನ ನಿನಾದ' ಎಂಬ ಶಿರೋನಾಮೆಯಡಿ 2007 ರಂದು ಪ್ರಕಟಿಸಲ್ಪಟ್ಟಿವೆ. ಡಾ. ಜಿ.ಎಸ್. ಭಟ್ಟ ಅವರು ಇದರ ಸಂಪಾದಕರು. ಶ್ರೀ ನೆಬ್ಬೂರರ ಷಷ್ಟ್ಯಬ್ಧ ಅಭಿನಂದನ ಸಮಿತಿ ಶಿರಸಿ ಇದರ ಪ್ರಕಾಶಕರು. ಕೆರೆಮನೆ ಶಂಭು ಹೆಗ್ಗಡೆಯವರು 'ನಿನಾದದ ನಿಷ್ಕರ್ಷೆ' ಎಂಬ ತಲೆಬರಹದಡಿ ನೆಬ್ಬೂರರ ಬಗೆಗೆ ಈ ಆತ್ಮಕಥನದಲ್ಲಿ ಅನಿಸಿಕೆಗಳನ್ನು ಅಕ್ಷರ ರೂಪಕ್ಕಿಳಿಸಿರುತ್ತಾರೆ.
ಮೊನ್ನೆ ಮೊನ್ನೆಯವರೆಗೂ ಭಾಗವತಿಕೆ ಮಾಡಿದ್ದ ನೆಬ್ಬೂರು ನಾರಾಯಣ ಭಾಗವತರು ಶನಿವಾರ ಬೆಳಗ್ಗೆ ದೇವರ ಪೂಜೆಗಾಗಿ ಹೂವು ಕೊಯ್ಯಲು ಹೋದ ಸಂದರ್ಭದಲ್ಲೇ ಕುಸಿದು ಬಿದ್ದು ಸಾವಿಗೀಡಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಅವರು ಅತ್ಯಂತ ಮೃಧು ಸ್ವಭಾವದವರಾಗಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications