New year 2024: ಕಾರವಾರ ಕಡಲತೀರದಲ್ಲಿ ಹೊಸ ವರ್ಷಕ್ಕೆ ಭಾರೀ ಸಿದ್ಧತೆ- ಭಾಗವಹಿಸುವವರಿಗೆ ಮಾಹಿತಿ ಇಲ್ಲಿದೆ
ಕಾರವಾರ, ಡಿಸೆಂಬರ್ 14: 2023 ವರ್ಷ ಮುಗಿಯಲು ಇನ್ನೇನು ಕೆಲವು ದಿನಗಳಲ್ಲೇ ಬಾಕಿಯಿದ್ದು, ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆ ಜೋರಾಗಿದೆ. ಕಡಲನಗರಿ ಕಾರವಾರದಲ್ಲಿ ಕೊರೊನಾ ಕಾರಣದಿಂದಾಗಿ ಕಳೆದ ಮೂರು ವರ್ಷವೂ ಕಳೆಗುಂದಿದ್ದ ಹೊಸ ವರ್ಷ ಸಂಭ್ರಮಾಚರಣೆಗೆ ಈ ಬಾರಿ ಜಿಲ್ಲಾಡಳಿತವೇ ಬಣ್ಣ ಹಚ್ಚಲು ಮುಂದಾಗಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಸಿದ್ಧತೆ ನಡೆಸಿದೆ.
ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು "ಈ ಬಾರಿ ಹೊಸ ವರ್ಷವನ್ನು ಸ್ವಾಗತಿಸಲು ಕಡಲತೀರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಸ್ಟಾಲ್ ಅಮ್ಯೂಸ್ಮೆಂಟ್ ಪಾರ್ಕ್ ಇಡಲು ಈಗಾಗಲ ಸಿದ್ಧತೆ ನಡೆಸಲಾಗಿದೆ. ಕನಿಷ್ಠ ಪ್ರವೇಶ ಶುಲ್ಕ ಇಟ್ಟು ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ ಕಾರ್ಯಕ್ರಮದ ರೂಪುರೇಷ ಸಿದ್ದಪಡಿಸುವುದಾಗಿ" ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಡಲತೀರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ
"ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಸ್ವಚ್ಛತೆ ಮಾಡುವ ಯಂತ್ರ ಹಾಳಾದ ಕಾರಣ ಕಳೆದ ಕೆಲ ದಿನಗಳಿಂದ ಸ್ವಚ್ಛತೆ ಇಲ್ಲದೆ ಕಡಲತೀರದ ಬಗ್ಗೆ ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗಿತ್ತು. ಆದರೆ ಪುಣೆಯಿಂದ ಎಂಜಿನಿಯರ್ ಕರೆಸಿ ಯಂತ್ರವನ್ನು ದುರಸ್ತಿಗೊಳಿಸಿದ್ದು, ಈ ಯಂತ್ರದ ಮೂಲಕ ಪ್ರತಿದಿನ ಬೀಚ್ಅನ್ನು ಸ್ವಚ್ಛಗೊಳಿಸುವ ಮೂಲಕ ಬೀಚ್ನಲ್ಲಿ ನೈರ್ಮಲ್ಯ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು. ಅಲ್ಲದೆ ಗೋಕರ್ಣ ಹಾಗೂ ಮುರುಡೇಶ್ವರದ ಕಡಲತೀರದಲ್ಲಿಯೂ ಸ್ವಚ್ಛ ಮಾಡುವ ಕಾರ್ಯ ಮಾಡಲಾಗುವುದು" ಎಂದರು.
ಇದೇ ಸಂದರ್ಭದಲ್ಲಿ ಬೀಚ್ನಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರ ಉಪಯೋಗಕ್ಕಾಗಿ ಶೌಚಾಲಯ ನಿರ್ಮಾಣದ ಅಗತ್ಯತೆಯನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಬೀಚ್ನಲ್ಲಿ ಸಿ.ಆರ್.ಜಡ್ ನಿಯಮಗಳ ಉಲ್ಲಂಘನೆ ಆಗದಂತೆ ಶೌಚಾಲಯ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸವರ್ಷಾಚರಣೆ
ಬೇರೆ ಬೇರೆ ಜಿಲ್ಲೆಗಳಿಂದ ಬೇರೆ ಬೇರೆ ಊರುಗಳಿಂದ ಬಂದ ಪ್ರವಾಸಿಗರು ಕೂಡ ಉತ್ತರ ಕನ್ನಡ ಜಿಲ್ಲಾಡಳಿತ ಆಯೋಜಿಸಿರುವ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿಯಾಬಹುದಾಗಿದೆ. ಪ್ರವಾಸಿಗರು ಜಿಲ್ಲಾಡಳಿದ ನಿಯಮಾನುಸಾರ ಭಾಗಿಯಾಗಬಹುದಾಗಿದೆ. ಈ ಬಾರಿ ಹೊಸ ವರ್ಷ ಸೋಮವಾರ ಬಿಂದಿದ್ದು, ಶುಕ್ರವಾರ ಸಂಜೆಯೇ ಪ್ರವಾಸಿ ತಾಣಗಳಿಗೆ ಹೊರಟರೆ ಮೂರು ದಿನ ಹೊಸ ವರ್ಷದ ಆಚರಣೆಯನ್ನು ಮಾಡಬಹುದಾಗಿದೆ.

ಹೊಸ ವರ್ಷ ಆಚರಣೆಗೆ ಉತ್ತರ ಕನ್ನಡ ಜಿಲ್ಲೆಗೆ ಬರುವವರು ಕಾರವಾರದ ಸಮುದ್ರ ತಟದಲ್ಲಿ ಹೊಸ ವರ್ಷವನ್ನು ಸ್ವಾಗತಿಸಿಕೊಂಡು, ಮಾರನೇ ದಿನ ಮುರುಡೇಶ್ವರ, ಗೋಕರ್ಣ, ಯಾಣ, ದಾಂಡೇಲಿ, ಕಾಳಿ ನದಿ, ಶರಾವತಿ ಹಿನ್ನೀರು, ಅಪ್ಸರಕೊಂಡ ಜಲಪಾತ , ವಿಭೂತಿ ಜಲಪಾತ, ಭೀಮಕೋಲ್, ಸಾಥೋಡಿ ಜಲಪಾತ, ನಾದಿಭಾಗ್ ಬೀಚ್, ಮಾಗೋಡು ಜಲಪಾತ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಬಹುದು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications