ಅಂಕೋಲಾದಲ್ಲಿ ಮದುವೆಯಾದ 9 ನೇ ದಿನಕ್ಕೆ ನವ ವಿವಾಹಿತೆ ಕಾಣೆ
ಕಾರವಾರ , ಜುಲೈ.08: 9 ದಿನದ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬಳನ್ನು ಗದಗ ಮೂಲದ ವ್ಯಕ್ತಿಯೊಬ್ಬ ಅಪಹರಿಸಿರುವ ಕುರಿತು ಅಪಹರಣಕ್ಕೊಳಗಾದ ವಿವಾಹಿತಳ ಪತಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾರವಾರ ತಾಲೂಕಿನ ಬಾಡದ ನಿವಾಸಿ ಸಚಿನ್ ನಾಯ್ಕ ಎಂಬುವವರು ಜೂನ್ 28ರಂದು ಅಂಕೋಲಾ ತಾಲೂಕಿನ ಅವರ್ಸಾದ ದಿವ್ಯಾ ನಾಯ್ಕ ಎಂಬ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಅನ್ಯೋನ್ಯವಾಗಿದ್ದ ಈ ದಂಪತಿ ಜುಲೈ 2 ಮತ್ತು 3ಕ್ಕೆ ಗ್ರಾಮ ದೇವರು, ಕುಲ ದೇವರಿಗೆ ಪೂಜೆ ಸಲ್ಲಿಸಿ ಬಂದಿದ್ದರು.
ನಂತರ ಜುಲೈ 4ರಂದು ದಿವ್ಯಾಳ ತವರು ಮನೆಗೆ ನೆಂಟರ ಊಟಕ್ಕೆಂದು ತೆರಳಿದ್ದ ದಂಪತಿಗೆ, ಸಂಪ್ರದಾಯದಂತೆ ನವ ವಧು ಐದು ದಿನ ತವರು ಮನೆಯಲ್ಲೇ ಇರಬೇಕೆಂದು ದಿವ್ಯಾಳ ಕುಟುಂಬದವರು ತಿಳಿಸಿದ್ದಾರೆ. ಅದರಂತೆ ದಿವ್ಯಾಳನ್ನು ತವರು ಮನೆಯಲ್ಲೇ ಬಿಟ್ಟು ಸಚಿನ್ ಮನೆಗೆ ವಾಪಾಸಾಗಿದ್ದಾನೆ.

ಅದರ ನಂತರ ಜುಲೈ 6ರ ಬೆಳಗಿನವರೆಗೂ ಕರೆ ಮಾಡಿ ಮಾತನಾಡಿದ ದಿವ್ಯಾ 6ರ ಸಂಜೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ. ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ತವರು ಮನೆಯಿಂದ ಹೊರಟ ದಿವ್ಯಾ ಈವರೆಗೂ ವಾಪಾಸಾಗಿಲ್ಲ.
ಆದರೆ, ಜುಲೈ 7ರಂದು ಗದಗ ಮೂಲದ ದಿಲನ್ ಎಂಬುವವನು ಸಚಿನ್ ಗೆ ಕರೆಮಾಡಿ, ದಿವ್ಯಾಳನ್ನು ಅಪಹರಿಸಿರುವುದಾಗಿ ಹಾಗೂ ಆಕೆಯನ್ನು ಹುಡುಕಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ.
ಇದರಿಂದಾಗಿ ಭಯಭೀತರಾಗಿರುವ ಸಚಿನ್ ಕುಟುಂಬ ದಿವ್ಯಾಳನ್ನು ಹುಡುಕಿಕೊಡುವಂತೆ ದೂರು ದಾಖಲಿಸಿದ್ದಾರೆ. ಅವಳ ಮೈಮೇಲೆ ಒಡವೆಗಳಿದ್ದು, ಅವುಗಳಿಗಾಗಿ ಅಥವಾ ಇನ್ಯಾವುದೇ ಕಾರಣಕ್ಕೆ ಆಕೆಯನ್ನು ಅಪಹರಿಸಿರಬಹುದು ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿದಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications