Get Updates
Get notified of breaking news, exclusive insights, and must-see stories!

Sukri Bommagowda: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೋಲಾದ ಸುಕ್ರಿ ಬೊಮ್ಮಗೌಡ ವಿಧಿವಶ

ಕಾರವಾರ, ಫೆಬ್ರವರಿ 13: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.

Padma Shri Recipient Sukri Bommagowda No More

ಬುಧವಾರ ತಡರಾತ್ರಿ ತನಕ ಕುಟುಂಬ ಸದಸ್ಯರ ಜೊತೆ ಸುಕ್ರಿ ಬೊಮ್ಮಗೌಡ ಮಾತುಕತೆ ನಡೆಸಿದ್ದರು. ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಸುಕ್ರಿ ಬೊಮ್ಮಗೌಡ ಕಳೆದ ವರ್ಷವೂ ಉಸಿರಾಟದ ಸಮಸ್ಯೆಯ ಕಾರಣ ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ ಹಾಗೂ ಆಗಾಗ ತಲೆ ಸುತ್ತುವ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.

ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ: ಸುಕ್ರಜ್ಜಿ ಎಂದು ಸುಕ್ರಿ ಬೊಮ್ಮಗೌಡ ಪ್ರಸಿದ್ಧಿಯನ್ನು ಪಡೆದಿದ್ದರು. ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಅವರು ಜನಪದ ಹಾಡುಗಾರ್ತಿಯಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಾದಾಗ ಅದನ್ನು ತಡೆಯಲು ಜನಾಂದೋಲನ ನಡೆಸಿ, ಹೋರಾಟಗಾರ್ತಿಯಾಗಿಯೂ ಸುಕ್ರಿ ಬೊಮ್ಮಗೌಡ ಗುರುತಿಸಿಕೊಂಡಿದ್ದರು.

ಸಾರಾಯಿ ಇಂದ ಸುಕ್ರಿ ಬೊಮ್ಮಗೌಡ ಪತಿಯನ್ನು ಕಳೆದುಕೊಂಡರು. ಆಗ ಅವರ ಪುತ್ರ ಸಹ ಚಿಕ್ಕವನು. ಮಗನೂ ತೀರಿ ಹೋದಾಗ ಸಾರಾಯಿ ನಿರ್ಮೂಲನೆ ಮಾಡಬೇಕು ಎಂದು ಪಣತೊಟ್ಟು ಅವರು ಹೋರಾಟವನ್ನು ಆರಂಭಿಸಿದರು. ಸಾರಾಯಿ ವಿರುದ್ಧದ ಹೋರಾಟದಲ್ಲಿ ಸುಕ್ರಿ ಬೊಮ್ಮಗೌಡ ದೆಹಲಿಯ ತನಕ ಹೋಗಿ ಬಂದಿದ್ದಾರೆ.

ಸುಕ್ರಿ ಬೊಮ್ಮಗೌಡ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪ್ರದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದರು. 2023ರ ವಿಧಾನಸಭೆ ಚುನಾವಣೆ ಪ್ರಚಾರದ ಸಮಯದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸುಕ್ರಿ ಬೊಮ್ಮಗೌಡ ಭೇಟಿ ಮಾಡಿದ್ದರು.

ಸುಕ್ರಿ ಬೊಮ್ಮಗೌಡ ಕರ್ನಾಟಕ ವಿಶ್ವವಿದ್ಯಾಲಯದ ಜನಪದ ವಿಭಾಗದಲ್ಲಿ 5 ವರ್ಷಗಳ ಕಾಲ ಹಾಲಕ್ಕಿ ಸಮುದಾಯದ ಉಡುಪು, ಹಾಡು, ಆಹಾರ, ಸಾಂಸ್ಕೃತಿಕ ವಿಚಾರಗಳ ಕುರಿತು ಅತಿಥಿ ಉಪನ್ಯಾಸಕಿಯಾಗಿ ಪಾಠ ಮಾಡಿದ್ದರು. ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಇವರ ಜನಪದ ಹಾಡುಗಳ ಧ್ವನಿ ಮುದ್ರಿಕೆಗಳಿವೆ.

ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮುದಾಯದ ಸಾಂಸ್ಕೃತಿಕ ರಾಯಭಾರಿಯಾಗಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಹಾಲಕ್ಕಿ ಸಮಯದಾಯದ ಒಕ್ಕಲ ಪೂರ್ವಜರ ನೆಲೆಗಳನ್ನು ಕಾಣಬಹುದಾಗಿದೆ. ಈ ಒಕ್ಕಲ ಈ ನೆಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದವರು ಸುಕ್ರಿ ಬೊಮ್ಮ ಗೌಡ.

ಅಂಕೋಲಾ ತಾಲೂಕು ಬಡಗೇರಿಯ ಹಾಲಕ್ಕಿ ಒಕ್ಕಲ ಮಹಿಳೆಯಾದ ಸುಕ್ರಿ ಬೊಮ್ಮಗೌಡ ಹೆಸರಿನ ಕುರಿತು ಹಲವು ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ. ಹೆಸರಿನ ಮೊದಲ ಅಕ್ಷರ 'ಸು' ಹಾಲಕ್ಕಿ ಒಕ್ಕಲ ಸಮಾಜದ ಜನರ ಬಾಯಲ್ಲಿ 'ಸು', 'ಶು' ಎಂದು ಉಚ್ಚಾರಗೊಳ್ಳುತ್ತದೆ. ಆದ್ದರಿಂದ ಹೆಸರು ಚುಕ್ರಿ, ಸುಕ್ರಿ, ಶುಕ್ರಿ ಎಂದು ಕರೆಯಲಾಗುತ್ತದೆ. ಹಾಲಕ್ಕಿ ಒಕ್ಕಲ ಭಾಷೆಯೂ ದ್ರಾವಿಡ ಭಾಷೆಗೆ ಸೇರಿದ ಒಂದು ಸಾಮಾಜಿಕ ಉಪಭಾಷೆ ಎಂಬ ಉಲ್ಲೇಖಗಳಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+