PM Narendra Modi: ಅಂಕೋಲಾದಲ್ಲಿ ಪದ್ಮಶ್ರೀ ಪುರಸ್ಕೃತರ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಕಾರವಾರ, ಮೇ, 03: ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಪರ ರಾಷ್ಟ್ರಿಯ ನಾಯಕರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ಅದೇ ರೀತಿ ನರೇಂದ್ರ ಮೋದಿಯವರು ಇಂದು ಅಂಕೋಲಾದ ಹಿಟ್ಟಿಕೇರಿಗೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಿದರು. ಇದಕ್ಕೂ ಮುನ್ನ ಅವರು ಪದ್ಮಶ್ರೀ ಪುರಸ್ಕೃತರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸಿ ಗಮನ ಸೆಳೆದರು.
ಹಿಟ್ಟಿಕೇರಿಯಲ್ಲಿ ಬಿಜೆಪಿಪಿಯಿಂದ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮ ಗೌಡ, ತುಳಸಿ ಗೌಡರಿಂದ ಆಶೀರ್ವಾದ ಪಡೆದರು. ಅಷ್ಟೇ ಅಲ್ಲದೆ ಅವರಿಗೆ ನಮಸ್ಕರಿಸಿದರು.

ಈ ವೇಳೆ ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ, ಸುಕ್ರಿ ಗೌಡ ಅವರ ಪ್ರಧಾನಿ ಅವರಿಗೆ ಶುಭ ಹಾರೈಸಿದರು. ಅಲ್ಲದೆ ತುಳಸಿ ಗೌಡ ಅವರು ಪ್ರಧಾನಿ ಪಾದಕ್ಕೆ ನಮಸ್ಕರಿಸಲು ಮುಂದಾದಾಗ, ಪ್ರಧಾನಿಯೇ ತಲೆ ಭಾಗಿ ಅವರಿಗೆ ನಮಸ್ಕರಿಸಿರುವ ಫೋಟೋ ಇದೀಗ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹೀಗೆ ಹಿರಿಯರನ್ನು ಗೌರವಿಸಿರುವುದು ಇದೇ ಮೋದಲೇನಲ್ಲ. ಹಲವು ಕಡೆ ಕಾರ್ಯಕ್ರಮಗಳಲ್ಲಿ ಭಾಗಿಯಾದಗಲೆಲ್ಲ ಹಿರಿಯರು, ಮಕ್ಕಳ ಜೊತೆಗೆ ಚರ್ಚಿಸಿರುವ ಉದಾಹರಣೆಗಳು ಇವೆ.
ಕಾಂಗ್ರೆಸ್ ವಿರುದ್ಧ ಪ್ರಧಾನಿ ಆರೋಪ
ಇದೇ ವೇಳೆ ಮಾತನಾಡಿದ ಅವರು, ದೇಶದ 140 ಕೋಟಿ ಜನರು ನನಗೆ ಯಜಮಾನರು, ಅವರೇ ನನಗೆ ರಿಮೋಟ್ ಕಂಟ್ರೋಲ್ ಆಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸುಳ್ಳು ಭರವಸೆ ನೀಡುತ್ತಿದೆ. ಇದನ್ನು ಜನ ನಂಬದೆ ಮತ್ತೊಮ್ಮೆ ಡಬಲ್ ಎಂಜಿನ್ ಸರ್ಕಾರ ಬೆಂಬಲಿಸುವಂತೆ ಪ್ರಧಾನಿ ಕರೆ ನೀಡಿದರು.
ನಾನು ಜನರ ಸೇವಕನಾಗಿದ್ದೇನೆ. ನೀವು ಹೇಳಿದ್ದನ್ನು ನಿಮ್ಮ ಸೇವಕನಾಗಿ ಮಾಡುತ್ತಿದ್ದೇನೆ. ನನಗೆ ದೇಶದ 140 ಕೋಟಿ ಜನರು ಯಜಮಾನರು. ನಮಗೆ ಯಾವುದೇ ರಿಮೋಟ್ ಕಂಟ್ರೋಲ್ ಇಲ್ಲ. ಜನರೇ ನನಗೆ ರಿಮೋಟ್ ಕಂಟ್ರೋಲ್ ಆಗಿದ್ದಾರೆ. 2018ರ ಬಳಿಕ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಡಬಲ್ ಎಂಜಿನ್ ಸರಕಾರಕ್ಕೆ ಪ್ರಮುಖ ಸೇವೆ ಸಲ್ಲಿಸಿದವರಾಗಿದ್ದಾರೆ.
ಕಾಂಗ್ರೆಸ್ ಮಾಡಿದ ನಷ್ಟವನ್ನು ಸರಿ ಮಾಡಲು ಪ್ರಯತ್ನಿಸುವುದರ ಜೊತೆಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಮಾಡಿದೆ. ಕಾಂಗ್ರೆಸ್, ಜೆಡಿಎಸ್ ಸರ್ಕಾರದ ಅವಧಿಯಲ್ಲಿ ವಿದೇಶದಿಂದ ಕೇವಲ 30 ಸಾವಿರ ಕೋಟಿ ಹಣ ಹೂಡಿಕೆ ಆಗಿದೆ. ಆದರೆ ಡಬಲ್ ಸರ್ಕಾರ ಬಂದ ಬಳಿಕ 3 ಪಟ್ಟು ಹೆಚ್ಚಾಗಿ 90 ಸಾವಿರ ಕೋಟಿ ಹೂಡಿಕೆ ರಾಜ್ಯದಲ್ಲಿ ಆಗುತ್ತಿದೆ. ಉದ್ಯೋಗ, ಅಭಿವೃದ್ಧಿ ಆಗುತ್ತಿದೆ. ಇದು ಬಿಜೆಪಿ ಸರ್ಕಾರ ಅಭಿವೃದ್ಧಿಗೆ ನೀಡುವ ಮೊದಲ ಪ್ರಾಶಸ್ತ್ಯವಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ದಾಖಲೆಯಲ್ಲಿ ಅಸ್ತಿತ್ವದಲ್ಲಿ ಇಲ್ಲದವರಿಗೆ, ಹೆಸರೇ ಇಲ್ಲದವರಿಗೆ ಸೌಲಭ್ಯ ನೀಡುತ್ತಿತ್ತು. ಒಂದು ಲಕ್ಷ ನಕಲಿ ಖಾತೆಗೆ ಸಿಲೆಂಡರ್ ಸಬ್ಸಿಡಿ, ಒಂದು ಕೋಟಿ ನಕಲಿ ಖಾತೆಗೆ ವಿಧವಾ ವೇತನ ಸೇರಿದಂತೆ ಒಟ್ಟು ನಾಲ್ಕು ಕೋಟಿ ನಕಲಿ ಖಾತೆಗೆ ಸರ್ಕಾರದ ವಿವಿಧ ಸಹಾಯಧನ ಕಾಂಗ್ರೆಸ್ ನಾಯಕರಿಗೆ ಹೋಗುತ್ತಿತ್ತು ಎಂದು ಆರೋಪಿಸಿದರು.
ನಾನು ಕಾಂಗ್ರೆಸ್ನ ಭ್ರಷ್ಟ ವ್ಯವಸ್ಥೆಯನ್ನು ನಿಯಂತ್ರಿಸಿದ್ದೇನೆ. ಬಡವರಿಗೆ ಸೌಲಭ್ಯ ಸಿಗಲು ಮುಳುವಾಗಿದ್ದ 10 ಕೋಟಿ ನಕಲಿ ಹೆಸರುಗಳನ್ನು ತೆಗೆದು ಹಾಕಿದ್ದೇನೆ. ಇದರಿಂದ ಕಾಂಗ್ರೆಸ್ ನಾಯಕರು ನನ್ನ ಮೇಲೆ ಸಿಟ್ಟು ಮಾಡಿಕೊಂಡಿದ್ದಾರೆ. ಮೂರು ಮುಕ್ಕಾಲು ಲಕ್ಷ ಕೋಟಿ ರೂಪಾಯಿ ಹಣ ನಷ್ಟವಾಗುವುದನ್ನು ತಡೆದಿದ್ದೇನೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಹಿ ಪರಿವಾರ ದೇಶ ಲೂಟಿ ಮಾಡಿದೆ. ಕಾಂಗ್ರೆಸ್ನಲ್ಲಿ ಟಾಪ್ನಿಂದ ಬಾಟಮ್ವರೆಗೆ ಭ್ರಷ್ಟಾಚಾರ ನಡೆಯುತ್ತದೆ. ಕಾಂಗ್ರೆಸ್ ನನ್ನನ್ನು ಕಂಡರೆ ವಿಷಕಾರುತ್ತದೆ. ಯಾಕಂದರೆ ಬಿಜೆಪಿ ಸರ್ಕಾರ ಕಾಂಗ್ರೆಸ್ನ ಭ್ರಷ್ಟಾಚಾರದ ಬೇರನ್ನು ಕಿತ್ತು ಹಾಕಿದೆ ಎಂದು ಹೇಳಿದರು.
ನಾನು ಬರುವುದಕ್ಕೂ ಮೊದಲು ಸಮುದ್ರ ಇತ್ತು. ಆದರೆ ಈ ಹಿಂದಿನ ಸರ್ಕಾರಗಳಿಗೆ ಮೀನುಗಾರರು ಮಾಡುವ ಕೆಲಸ ಕಣ್ಣಿಗೆ ಕಂಡಿಲ್ಲ. ನಾನು ಅಧಿಕಾರಕ್ಕೆ ಬಂದ ಬಳಿಕ ಮೀನುಗಾರಿಕೆಗೆ ಪ್ರತ್ಯೇಕ ಖಾತೆ ರಚಿಸಲಾಗಿದೆ. ಮೀನುಗಾರರಿಗೆ ಸಹಕಾರಿಯಾಗುವಂತೆ ಮತ್ಯ್ಸ ಸಂಪದ ಯೋಜನೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications