Get Updates
Get notified of breaking news, exclusive insights, and must-see stories!

ಅಂಕೋಲಾದಲ್ಲಿ ಮೋದಿ ಪ್ರಚಾರ ಸಮಾವೇಶ: ಕಾರ್ಯಕ್ರಮದ ಯಶಸ್ಸಿಗೆ ಶಾಸಕಿಯಿಂದ ಗಣಹೋಮ

ಕಾರವಾರ, ಮೇ 03: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿಯೊಬ್ಬರು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು ಈ ಐತಿಹಾಸಿಕ ಸಮಾವೇಶಕ್ಕೆ ಬಿಜೆಪಿ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದೆ.

ಅಂಕೋಲಾದ ಹಟ್ಟಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡೆ ಇರುವ ನೌಕಾನೆಲೆಯ 40 ಎಕರೆ ಜಾಗದಲ್ಲಿ ಪ್ರಚಾರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಎಸ್‌ಪಿಜಿ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು ವೇದಿಕೆ ಸೇರಿದಂತೆ ಸಮಾವೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದೆ. ಅಲ್ಲದೇ ಸಮುದ್ರ, ರಸ್ತೆ ಮಾರ್ಗದಲ್ಲಿ ಭದ್ರತೆಗಳನ್ನು ಹೆಚ್ಚಿಸಲಾಗಿದೆ. ಸಮುದ್ರದಿಂದ ಬರುವ ಎಲ್ಲಾ ಬೋಟುಗಳನ್ನು ತಪಾಸಣೆ ನಡೆಸಲಾಗುತ್ತಿದೆ.

PM Narendra Modi Will Arrive To Ankola For The Election Campaign

ದಕ್ಷಿಣ ಕನ್ನಡಕ್ಕೆ ಮೊದಲ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಳಿಕ 12 ಗಂಟೆಗೆ ಸರಿಯಾಗಿ ಅಂಕೋಲಾಕ್ಕೆ ಆಗಮಿಸಲಿದ್ದಾರೆ. ಸಮಾವೇಶದ ಹಿಂಭಾಗದಲ್ಲಿಯೇ ಹೆಲಿಪ್ಯಾಡ್ ವ್ಯವಸ್ಥೆ ಮಾಡಿದ್ದು, ಅಂಕೋಲಾದ ಹಟ್ಟಿಕೇರಿ ಟೋಲ್‌ಗೆಟ್ ಬಳಿ ನೌಕನೆಲೆ ಜಾಗದಲ್ಲಿ ಹಮ್ಮಿಕೊಂಡಿರುವ ಈ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಸಮಾವೇಶಕ್ಕೆ ಮೂರು ಲಕ್ಷ ಜನ ನಿರೀಕ್ಷೆ

ಇನ್ನು ಸಮಾವೇಶಕ್ಕೆ ಕೈಗೊಂಡಿದ್ದ ವ್ಯವಸ್ಥೆಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಬ್ಬಾರ್ 'ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶಕ್ಕೆ ಮೂರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಮೋದಿ ಆಗಮನದಿಂದ ಜಿಲ್ಲೆಯ 6 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರಚನೆಯ ಅವಕಾಶ ಆಗಬಾರದು. ಸ್ವತಂತ್ರ ಬಿಜೆಪಿ ಸರಕಾರ ರಚನೆ ಗುರಿಯಾಗಿದೆ. ಇದಕ್ಕಾಗಿ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ' ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಪಕ್ಷದ ಅಭೈರ್ಥಿಗಳು, ಬಿಜೆಪಿ ಮುಖಂಡರು ಸೇರಿ 17 ಮಂದಿ ವೇದಿಕೆ ಮೇಲಿರಲಿದ್ದಾರೆ. ಈಗಾಗಲೇ ಬಿಜೆಪಿ ಕೂಡ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಆರಕ್ಕೆ ಆರು ಕ್ಷೇತ್ರ ಗೆಲ್ಲುವುದರ ಜೊತೆಗೆ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್‌ನ ಒಳ ಜಗಳದಿಂದಾಗಿ ಮತದಾರರು ವಿಚಲಿತರಾಗಿದ್ದಾರೆ. ಮತ್ತೆ ಅವರು ಅಧಿಕಾರದ ಕನಸು ಕಾಣುವುದು ಬಿಡಬೇಕು ಎಂದು ಹೇಳಿದರು.

PM Narendra Modi Will Arrive To Ankola For The Election Campaign

ಇನ್ನು ಸಮವೇಶಕ್ಕಾಗಿ ವೇದಿಕೆ, ಆಸನ, ವಿಐಪಿಗೆ, ಜನಸಾಮಾನ್ಯರಿಗೆ, ಮಾಧ್ಯಮದವರಿಗೆ ಪ್ರತ್ಯೇಕ ಗ್ಯಾಲರಿ ಮೂಲಕ ಆಸನ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶಕ್ಕೆ ಪ್ರವೇಶ ಪಡೆಯುವವರನ್ನು ಹಲವು ಹಂತಗಳಲ್ಲಿ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ ಎಂದರು.

ಪ್ರಧಾನಿ ತಂಡಕ್ಕೆ ವಿಶೇಷ ಖಾದ್ಯ

ಪ್ರಧಾನಿ ನರೇಂದ್ರ ಮೋದಿಗೆ ಉತ್ತರ ಕನ್ನಡ ಜಿಲ್ಲೆಯ ವಿಶೇಷವಾದ ಇಡಗುಂಜಿಯ ಮಹಾಗಣಪತಿ ವಿಗ್ರಹ, ಶಿರಸಿಯಲ್ಲಿ ತಯಾರಿಸುವ ಗಂಧದ ಹಾರ, ಹಾಗೂ ವಿಶೇಷ ಕಿರೀಟ ತೊಡಿಸಲಾಗುತ್ತಿದೆ. ಅಲ್ಲದೇ ಪ್ರಧಾನ ಮಂತ್ರಿಯೊಂದಿಗೆ ಆಗಮಿಸುತ್ತಿರುವ ಸುಮಾರು 50 ಜನರ ತಂಡಕ್ಕೆ ಕ್ಷೇತ್ರದ ವಿಶೇಷವಾದ ಕರಿ ಇಶಾಡು, ಆಪೂಸ್ ಮಾವು, ಕೆಂಪು ಸೊಪ್ಪಿನ ಬಾಜಿ, ರವೆ ಪಾಯಸ, ಹಾಗೂ ರವೆ ಕರ್ಜೂರ ಸ್ವೀಟ್ ಸೇರಿದಂತೆ ಇನ್ನಿತರ ತಿಂಡಿಯೊಂದಿಗೆ ಊಟದ ವ್ಯವಸ್ಥೆ ಮಾಡಿರುವುದಾಗಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

PM Narendra Modi Will Arrive To Ankola For The Election Campaign

ಮೋದಿ ಸಮಾವೇಶ ಯಶಸ್ಸಿಗೆ ಗಣಹೋಮ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಯಶಸ್ಸಿಗೆ ಶಾಸಕಿ ರೂಪಾಲಿ ನಾಯ್ಕ 108 ತೆಂಗಿನಕಾಯಿಗಳ ಗಣಹೋಮ ನೆರವೇರಿಸಿದ್ದಾರೆ. ಕಾರವಾರ ತಾಲೂಕಿನ ಅಮದಳ್ಳಿಯ ವೀರಗಣಪತಿ ದೇಗುಲದಲ್ಲಿ ಸಮಾವೇಶಕ್ಕೆ ಯಾವುದೇ ವಿಘ್ನ ಬಾರದಂತೆ ಯಶಸ್ವಿಯಾಗಿ ನೆರವೇರಲು ದೇಗುಲದ ಪ್ರಧಾನ ಅರ್ಚಕ ಮಹಾಬಲೇಶ್ವರ ಹಾಗೂ ಮಧುಕೇಶ್ವರ ಭಟ್ ಅವರ ಅರ್ಚಕತ್ವದಲ್ಲಿ ಮಂಗಳವಾರ 108 ಕಾಯಿಯ ಗಣಹೋಮ ನಡೆಸಿದ್ದಾರೆ. ಪುತ್ರ ಪರ್ಭತ್, ಸೊಸೆ ರೇಖಾ ಅವರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಪ್ರಾರ್ಥಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+