ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆ ರಕ್ಷಣೆ, ಜಿಂಕೆ ಕೊಂಬು ಮಾರಲೆತ್ನಿಸಿದವರ ಬಂಧನ
ಕಾರವಾರ, ಜುಲೈ 11: ಹಿಂಸಾತ್ಮಕ ರೀತಿಯಲ್ಲಿ 6 ಒಂಟೆಗಳನ್ನು ಹಗ್ಗದಿಂದ ಬಿಗಿದು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಹಿಡಿದಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.
ಯಲ್ಲಾಪುರದ ಜೋಡುಕೆರೆ ಚೆಕ್ ಪೊಸ್ಟ್ ಬಳಿ ಹುಬ್ಬಳ್ಳಿ ಮಾರ್ಗದಿಂದ ಬಂದ ಈಚರ್ ಲಾರಿಯನ್ನು ತಪಾಸಣೆಗೆ ಕೈ ಮಾಡಿದರು ನಿಲ್ಲಿಸದೆ ಸ್ಪೀಡಾಗಿ ತೆರಳಿದ್ದರು. ಆದರೆ ಪೊಲೀಸರು ವಾಹನವನ್ನು ಬೆನ್ನತ್ತಿ ಅಡ್ಡಗಟ್ಟಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಒಂಟೆಗಳು ಪತ್ತೆಯಾಗಿವೆ. ಕಾಲು ಮುಖಗಳಿಗೆ ಹಗ್ಗದಿಂದ ಕಟ್ಟಿದ ಒಂಟೆಗಳಿಗೆ ಮಲಗಲು ಆಗದೇ ನಿಲ್ಲಲು ಸಾಧ್ಯವಾಗದೆ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು. ಪೊಲೀಸರು ಒಂಟೆಗಳನ್ನು ರಕ್ಷಣೆ ಮಾಡಿದ್ದಲ್ಲದೆ, ಮೂವರನ್ನು ಬಂಧಿಸಿದ್ದಾರೆ.

ಕಾಂತೇಶ್, ಪ್ರಕಾಶ್, ಈಶ್ವರಪ್ಪ ಎಂಬುವವರೇ ಬಂಧಿತರು. ಆರೋಪಿಗಳು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನವರ ಎಂದು ತಿಳಿದುಬಂದಿದೆ. ಈ ಕುರಿತು ಯಲ್ಲಾಪುರ ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.

ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಅಂಕೋಲಾದ ಮಾಸ್ತಿಕಟ್ಟಾ ಹೆದ್ದಾರಿಯಲ್ಲಿ ನಡೆದಿದೆ. ಹಳಿಯಾಳದ ಶೌಕತ್ ಸಾಬ್, ಕಲ್ಲೇಶ್ವರ ಗ್ರಾಮದ ಪ್ರಸಾದ ದೇಸಾಯಿ, ಸೂರಜ್ ಭಂಡಾರಿ, ಸಂದೀಪ ಭಂಡಾರಿ, ಬಂಧಿತ ಆರೋಪಿಗಳು. ಎರಡು ಜಿಂಕೆ ಕೊಂಬುಗಳನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಅಂಕೋಲಾದ ಮಾಸ್ತಿಕಟ್ಟಾ ಬಳಿ ಹೆದ್ದಾರಿಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾರಾಟ ಮಾಡುವ ಉದ್ದೇಶಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ತಪಾಸಣೆ ನಡೆಸಿದ ಪೊಲೀಸರು ಕೊಂಬು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಡಾಲ್ಫಿನ್ ಮೃತದೇಹ ಪತ್ತೆ
ಕಾರವಾರದ ಟ್ಯಾಗೋರ್ ಕಡಲ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಡಾಲ್ಫಿನ್ ಮೃತ ದೇಹವೊಂದು ಪತ್ತೆಯಾಗಿದೆ. ಮೃತ ಡಾಲ್ಫಿನ್ ಇಂಡೋ ಫೆಸಿಫಿಕ್ ಹಂಪ್ ಬ್ಯಾಕ್ ಪ್ರಜಾತಿಗೆ ಸೇರಿದ್ದು ಸುಮಾರು 35-40 ವರ್ಷದ ಹೆಣ್ಣು ಡಾಲ್ಫಿನ್ ಇದಾಗಿದೆ. ಹೊಟ್ಟೆ ಹಾಗೂ ಮುಖದ ಭಾಗದಲ್ಲಿ ಕೊಳೆತಿದ್ದು ಎರಡು ದಿನದ ಹಿಂದೆ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ. 80 ಕೆಜಿ ತೂಕ ಹಾಗೂ 7 ಅಡಿ ಉದ್ದವಿದೆ. ಡಾಲ್ಫಿನ್ ಮರಣೋತ್ತರ ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ರಕ್ತಸ್ರಾವವಾದ ಮತ್ತು ಇನ್ನಾವುದೇ ವಸ್ತುಗಳು ಪತ್ತೆಯಾಗಿಲ್ಲ. ಸಹಜವಾಗಿ ಸಾವನ್ನಪ್ಪಿರಬಹುದು. ಅಲೆಗಳ ರಭಸದಿಂದ ತೀರಕ್ಕೆ ಬಂದಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications