ದಾಂಡೇಲಿಯ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ನೋಟುಗಳು ಪತ್ತೆ, ಪೊಲೀಸರಿಗೆ ಅಚ್ಚರಿ
ಕಾರವಾರ, ಏಪ್ರಿಲ್ 09: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮನೆಯಲ್ಲಿ ಸಿಕ್ಕ 500 ರೂ. ನೋಟುಗಳು ಪೊಲೀಸರಿಗೆ ಅಚ್ಚರಿ ಮೂಡಿಸಿದೆ. ಸುಮಾರು 14 ಕೋಟಿ ರೂ.ಗಳಷ್ಟು ಮೌಲ್ಯದ ನೋಟುಗಳು ಸಿಕ್ಕಿದ್ದು, ಇದು ಮಾತ್ರವಲ್ಲದೇ ಮನೆಯಲ್ಲಿ ನೋಟು ಎಣಿಸುವ ಯಂತ್ರ ಸಹ ಸಿಕ್ಕಿದೆ. ಈ ಮನೆಯಲ್ಲಿ ವಾಸವಾಗಿದ್ದ ಗೋವಾ ಮೂಲದ ಅರ್ಷದ್ ಖಾನ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ದಾಂಡೇಲಿಯ ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬುವವರ ಮನೆಯಲ್ಲಿ 500 ರೂ. ಮುಖಬೆಲೆಯ ನೋಟುಗಳು ಪತ್ತೆಯಾಗಿವೆ. ನೋಟುಗಳ ಮೇಲೆ ಸಂಖ್ಯೆಗಳ ಜಾಗದಲ್ಲಿ ಕೇವಲ '0' ಎಂದು ನಮೂದಿಸಲಾಗಿದ್ದು, ಯಾವುದೇ ನೋಟಿನ ಮೇಲೆ ಆರ್ಬಿಐ ಗೌರ್ನರ್ ಸಹಿ ಇಲ್ಲ.

ನೂರಜಾನ್ ಜುಂಜುವಾಡ್ಕರ ಅವರ ಮನೆಯನ್ನು ಗೋವಾ ಮೂಲದ ಅರ್ಷದ್ ಖಾನ್ ಎಂಬುವವರಿಗೆ ಬಾಡಿಗೆಗೆ ನೀಡಲಾಗಿತ್ತು. ಸುಮಾರು ಒಂದು ತಿಂಗಳಿನಿಂದ ಅರ್ಷದ್ ಖಾನ್ ಮನೆಯಲ್ಲಿ ಇರಲಿಲ್ಲ. ಅಲ್ಲದೇ ಮನೆಯಲ್ಲಿ ಅನುಮಾಸ್ಪದ ಚಟುವಟಿಕೆ ನಡೆಯುತ್ತಿರಬಹುದು ಎಂದು ನೂರಜಾನ್ ಜುಂಜುವಾಡ್ಕರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳವಾರ ಪೊಲೀಸರು ದಾಳಿ ಮಾಡಿದ್ದರು.
ಸಿನಿಮಾ ಶೂಟಿಂಗ್ಗೆ ಮಾತ್ರ: ಪೊಲೀಸರು ದಾಳಿ ಮಾಡಿದಾಗ ಅರ್ಷದ್ ಖಾನ್ ಮನೆಯಲ್ಲಿ ಇರಲಿಲ್ಲ, 500 ರೂ. ಬೆಲೆಯ ಸುಮಾರು 14 ಕೋಟಿ ರೂ. ಮೌಲ್ಯದ ನೋಟುಗಳು ಮನೆಯಲ್ಲಿ ಸಿಕ್ಕಿವೆ. ನೋಟು ಎಣಿಸುವ ಯಂತ್ರ ಸಹ ಸಿಕ್ಕಿದೆ. ನೋಟಿನ ಮೇಲೆ ಸಿನಿಮಾ ಶೂಟಿಂಗ್ಗಾಗಿ ಮಾತ್ರ ಎಂದು ಬರೆಯಲಾಗಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅರ್ಷದ್ ಖಾನ್ಗಾಗಿ ಹುಡುಕಾಟ ಆರಂಭವಾಗಿದೆ.
ಮನೆಯನ್ನು ಬಾಡಿಗೆಗೆ ಪಡೆದಿದ್ದ ಗೋವಾ ಮೂಲದ ಅರ್ಷದ್ ಖಾನ್ ಒಂದು ತಿಂಗಳಿನಿಂದ ಮನೆಯಲ್ಲಿ ಇಲ್ಲ ಎಂಬುದು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಹಣ, ಹಣ ಎಣಿಸುವ ಯಂತ್ರವನ್ನು ವಾಪಸ್ ಪಡೆದಿದ್ದಾರೆ. ಮನೆಯಲ್ಲಿ ನಕಲಿ ನೋಟು ಮುದ್ರಣ ಮಾಡಲಾಗುತ್ತಿದೆಯೇ? ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅರ್ಷದ್ ಖಾನ್ ಸಿಕ್ಕಿದ ಬಳಿಕ ಪ್ರಕರಣದ ಕುರಿತು ಮಾಹಿತಿ ತಿಳಿಯಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications