ಸಿನಿಮೀಯ ರೀತಿಯಲ್ಲಿ ಗೋವುಗಳನ್ನು ರಕ್ಷಿಸಿದ ಪೊಲೀಸರು
ಕಾರವಾರ, ಜೂನ್.22: ಇಂದು ಮುಂಜಾನೆ ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ವಶಪಡಿಸಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ನೋಂದಣಿಯಾಗಿರದ ಹೊಸ ಮಾರುತಿ ಸುಜಿಕಿ ಇಗ್ನಿಸ್ ಕಾರ್ ನಲ್ಲಿ ಕುಮಟಾದ ಹರಕಾರ್ ನ ಹರಿಕಂತ್ರ ಕೇರಿಯಲ್ಲಿ ಹಸುಗಳನ್ನು ಕದ್ದು ಒಯ್ಯುಲಾಗುತ್ತಿತ್ತು. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಕುಮಟಾ ಠಾಣೆ ಪಿ.ಎಸ್.ಐ ಸಂಪತ್ ಕುಮಾರ್ ಅವರ ತಂಡ ಇದನ್ನು ಗಮನಿಸಿ ಕಾರನ್ನು ಬೆನ್ನಟ್ಟಿದೆ.
ಮಂಗಳೂರು: ಗೋಶಾಲೆಯಿಂದ ದನಗಳ್ಳತನ, ಇಬ್ಬರ ಬಂಧನ
ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕಳ್ಳರು ವೇಗವಾಗಿ ಕಾರು ಚಲಾಯಿಸಿದ್ದು, ಕಾರು ಅಪಘಾತಕ್ಕೀಡಾಗಿದೆ. ನಂತರ ಅಲ್ಲಿಂದ ಕಳ್ಳರು ತಪ್ಪಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಹಸುಗಳನ್ನು ಕಾರಿನ ಸಮೇತ ವಶಪಡಿಸಿಕೊಂಡು ರಕ್ಷಣೆ ಮಾಡಲಾಗಿದೆ. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಸಹ ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಚೇಸ್ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.