ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕನ್ನಡ: ಶಿರಸಿ ತಾಲ್ಲೂಕಿನಲ್ಲಿ ಗುಡುಗು ಸಹಿತ ಅಕಾಲಿಕ ಮಳೆ

|
Google Oneindia Kannada News

ಶಿರಸಿ, ಮಾರ್ಚ್ 11: ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಹಲವೆಡೆ ಗುರುವಾರ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಅಕಾಲಿಕ ಮಳೆಗೆ ಜನರು ಕಂಗಾಲಾಗಿದ್ದಲ್ಲದೇ, ಶಿವರಾತ್ರಿ ಆಚರಣೆಗೂ ಮಳೆ ಅಡ್ಡಿಯನ್ನುಂಟು ಮಾಡಿತು.

ಶಿವರಾತ್ರಿಯಂದು ಈ ಹಿಂದೆ ಶಿರಸಿಯಲ್ಲಿ ಮಳೆ ಸುರಿದ ಯಾವುದೇ ದಾಖಲೆಯಿಲ್ಲ. ಆದರೆ ಈ ಬಾರಿ ಶಿರಸಿ ನಗರ ಹಾಗೂ ಸುತ್ತಮುತ್ತ ಗುರುವಾರ ಮಧ್ಯಾಹ್ನ ಮಳೆ ಆರಂಭವಾಗಿ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸುರಿದಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಕೆಲ ತಾಲ್ಲೂಕಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.

Karwar: Premature Rain In Sirsi Taluk With Thunderstorms

ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಇನ್ನು ಸಿದ್ದಾಪುರ ಪಟ್ಟಣದ ರವೀಂದ್ರ ನಗರದಲ್ಲಿ ರೋಹಿಣಿ ಅಂಬಿಗ ಎನ್ನುವವರಿಗೆ ಸೇರಿದ ಮನೆಯ ಬಳಿ ಇದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಇನ್ನು ಜೋರಾಗಿ ಸಿಡಿಲು ಬಡಿದು ಮನೆಗೂ ಸಿಡಿಲು ಅಪ್ಪಳಿಸಿದ ಪರಿಣಾಮ ಸುಮಾರು 10 ಸಾವಿರ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

English summary
Rainfall is reported in various parts of the Karnataka, while Sirsi Taluk Of Uttar Kannada District has also experienced moderate rainfall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X