ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ: ನೆಚ್ಚಿನ ನಟನ ನೋಡಲು ಜನಸಾಗರ
ಕಾರವಾರ, ಜನವರಿ 6: ಸ್ಯಾಂಡಲ್ವುಡ್ ನಟ ಪವರ್ಸ್ಟಾರ್ ಪುನೀತ್ ರಾಜಕುಮಾರ ಆಪ್ತರೊಬ್ಬರ ವಿವಾಹದಲ್ಲಿ ಭಾಗಿಯಾಗಲು ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಭೇಟಿ ನೀಡಿದರು.
ಕುಮಟಾ ಪಟ್ಟಣದ ದೇವರಹಕ್ಕಲ ಸಭಾ ಭವನದಲ್ಲಿ ಪುನೀತ್ ರಾಜಕುಮಾರ ಅವರ ಕಚೇರಿಯ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಗುರುರಾಜ್ ಎಂಬುವವರ ಮದುವೆ ನಿಮಿತ್ತ ಆಗಮಿಸಿದ ಅಪ್ಪು, ನೂತನ ವಧು-ವರರಿಗೆ ಶುಭಕೋರಿ ತೆರಳಿದರು.

ಇನ್ನು ಪವರ್ಸ್ಟಾರ್ ಆಗಮನದ ಸುದ್ದಿ ತಿಳಿದು ಅವರು ಸಾವಿರಾರು ಅಭಿಮಾನಿಗಳು ಸಭಾಭವನದ ಹೊರಗೆ ಕಿಕ್ಕಿರಿದು ಜಮಾಯಿಸಿದ್ದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ ಆಗಮಿಸುತ್ತಿದ್ದಂತೆ ಘೋಷಣೆಗಳನ್ನು ಕೂಗಿ, ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು.

ಗುರುರಾಜ್ ಅವರ ಮದುವೆಯಲ್ಲಿ ಭಾಗವಹಿಸಿದ ಪುನೀತ್ ರಾಜಕುಮಾರ, ವಾಪಸ್ ತೆರಳುವವರೆಗೂ ಅಭಿಮಾನಿಗಳು ಕಾದು ಕುಳಿತಿದ್ದರು. ನಂತರ ನಟ ಪುನೀತ್ ಹೊರಬರುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅಭಿಮಾನಿಗಳು ಮುಗಿಬಿದ್ದರು.
ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ.
— Kannada Filmibeat (@FilmibeatKa) January 6, 2021
ಆಪ್ತರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರಕ್ಕೆ ಆಗಮಿಸಿದ್ದರು.#Kumta #PuneethRajkumar @PuneethRajkumar pic.twitter.com/hsfmVuVhe3
ತಮ್ಮ ಊರಿನಲ್ಲಿ ನೆಚ್ಚಿನ ನಟನನ್ನು ಕಂಡು ಪವರ್ಸ್ಟಾರ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಇನ್ನು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಅರ್ಚಕರಾದ ವೇ.ಪ್ರಶಾಂತ್ ಭಟ್ ಹಿರೇಗಂಗೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶ್ರೀ ದೇವಾಲಯದ ಆಡಳಿತಾಧಿಕಾರಿ ಜಿ.ಕೆ ಹೆಗಡೆ ಹಾರ ಹಾಕಿ ಸ್ವಾಗತಿಸಿದರು.
Recommended Video
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications