ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ: ನೆಚ್ಚಿನ ನಟನ ನೋಡಲು ಜನಸಾಗರ
ಕಾರವಾರ, ಜನವರಿ 6: ಸ್ಯಾಂಡಲ್ವುಡ್ ನಟ ಪವರ್ಸ್ಟಾರ್ ಪುನೀತ್ ರಾಜಕುಮಾರ ಆಪ್ತರೊಬ್ಬರ ವಿವಾಹದಲ್ಲಿ ಭಾಗಿಯಾಗಲು ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಭೇಟಿ ನೀಡಿದರು.
ಕುಮಟಾ ಪಟ್ಟಣದ ದೇವರಹಕ್ಕಲ ಸಭಾ ಭವನದಲ್ಲಿ ಪುನೀತ್ ರಾಜಕುಮಾರ ಅವರ ಕಚೇರಿಯ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಗುರುರಾಜ್ ಎಂಬುವವರ ಮದುವೆ ನಿಮಿತ್ತ ಆಗಮಿಸಿದ ಅಪ್ಪು, ನೂತನ ವಧು-ವರರಿಗೆ ಶುಭಕೋರಿ ತೆರಳಿದರು.
ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ಕಿಚ್ಚ ಸುದೀಪ್
ಇನ್ನು ಪವರ್ಸ್ಟಾರ್ ಆಗಮನದ ಸುದ್ದಿ ತಿಳಿದು ಅವರು ಸಾವಿರಾರು ಅಭಿಮಾನಿಗಳು ಸಭಾಭವನದ ಹೊರಗೆ ಕಿಕ್ಕಿರಿದು ಜಮಾಯಿಸಿದ್ದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ ಆಗಮಿಸುತ್ತಿದ್ದಂತೆ ಘೋಷಣೆಗಳನ್ನು ಕೂಗಿ, ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು.
ಗುರುರಾಜ್ ಅವರ ಮದುವೆಯಲ್ಲಿ ಭಾಗವಹಿಸಿದ ಪುನೀತ್ ರಾಜಕುಮಾರ, ವಾಪಸ್ ತೆರಳುವವರೆಗೂ ಅಭಿಮಾನಿಗಳು ಕಾದು ಕುಳಿತಿದ್ದರು. ನಂತರ ನಟ ಪುನೀತ್ ಹೊರಬರುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅಭಿಮಾನಿಗಳು ಮುಗಿಬಿದ್ದರು.
ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ.
— Kannada Filmibeat (@FilmibeatKa) January 6, 2021
ಆಪ್ತರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರಕ್ಕೆ ಆಗಮಿಸಿದ್ದರು.#Kumta #PuneethRajkumar @PuneethRajkumar pic.twitter.com/hsfmVuVhe3
ತಮ್ಮ ಊರಿನಲ್ಲಿ ನೆಚ್ಚಿನ ನಟನನ್ನು ಕಂಡು ಪವರ್ಸ್ಟಾರ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಇನ್ನು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
Recommended Video
ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಅರ್ಚಕರಾದ ವೇ.ಪ್ರಶಾಂತ್ ಭಟ್ ಹಿರೇಗಂಗೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶ್ರೀ ದೇವಾಲಯದ ಆಡಳಿತಾಧಿಕಾರಿ ಜಿ.ಕೆ ಹೆಗಡೆ ಹಾರ ಹಾಕಿ ಸ್ವಾಗತಿಸಿದರು.