ನರಕ ಸದೃಶ ಮನವನ್ನು ನಾಕವಾಗಿಸಲು ಶಂಕರರು ಬೇಕು: ರಾಘವೇಶ್ವರ ಶ್ರೀ
ಕಾರವಾರ, ಮೇ 10: ನರಕ ಸದೃಶವಾದ ಮನವನ್ನು ನಾಕವಾಗಿಸಿಕೊಳ್ಳಲು ಚಿತ್ತದಲ್ಲಿ ಶಂಕರಾಚಾರ್ಯರು ಸುಳಿದಾಡಬೇಕು ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿಗಳು ಹೇಳಿದರು.
ಸಿದ್ದಾಪುರದ "ಗೋಸ್ವರ್ಗ"ದಲ್ಲಿ ನಡೆಯುತ್ತಿರುವ ಶಂಕರ ಪಂಚಮೀ ಉತ್ಸವದಲ್ಲಿ ಮೇ 9ರಂದು ನಡೆದ ಸಭೆಯಲ್ಲಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಶ್ರೀರಾಮಚಂದ್ರ ಹಾಗೂ ಶಂಕರರು ಶ್ರೀಮಠದ ನೇತ್ರಧ್ವಯಗಳಿದ್ದಂತೆ. ಅರಿವನ್ನು ಜ್ಞಾನವನ್ನು ಮಠ ಹೆಚ್ಚಿಸಬೇಕು. ಅದಕ್ಕೆ ಶಂಕರಾಚಾರ್ಯರ ಆಶೀರ್ವಾದ ಬೇಕು ಎಂದು ಹೇಳಿದರು.
ಕೆಲಸ ಕೈಗೂಡಲು ರಾಮನ ಶಕ್ತಿಯೂ ಅದಕ್ಕೆ ಸಮ್ಮಿಳಿತವಾಗಬೇಕು. ಶಂಕರರಿಲ್ಲದಿದ್ದರೆ ಗುರುಪೀಠ, ಗೋಸ್ವರ್ಗ, ನಾವು ನೀವು ಇಲ್ಲಿ ಸೇರುತ್ತಿರಲಿಲ್ಲ. ಶಂಕರಾಚಾರ್ಯರನ್ನು ನೆನಪಿಸಿಕೊಳ್ಳುವುದೇ ಶಂಕರ ಪಂಚಮೀ ಉತ್ಸವದ ಉದ್ದೇಶ. ಈ ಉತ್ಸವ ಅವರಿಗಾಗಿ ಅಲ್ಲ. ನಮ್ಮ ಮನಸ್ಸಿನ ಕೊಳೆ ನಿವಾರಿಸಿಕೊಳ್ಳಲು ಎಂದು ಶ್ರೀಗಳು ಹೇಳಿದರು.

"ಶಂಕರ ಕಿಂಕರ" ಪ್ರಶಸ್ತಿ ಸ್ವೀಕರಿಸಿದ ಡಾ.ಎಸ್.ರಂಗನಾಥರು ಸೌಜನ್ಯ, ವಿನಯಗಳ ಮೂರ್ತಿ. ಅವರು ಬಯಕೆ ವ್ಯಕ್ತಪಡಿಸಿದಂತೆ ಮುಂದಿನ ಶಂಕರ ಪಂಚಮಿಯಲ್ಲಿ ಶಾಸ್ತ್ರಗಳ ವಾಖ್ಯಾರ್ಥ ನಡೆಯಲಿದೆ. ಶಾಂಕರ ಚರ್ಚೆ ಸರಳವಾಗಿ ನಡೆಯಲಿದೆ ಎಂದ ಶ್ರೀಗಳು, ಮುಂದಿನ ಶಂಕರ ಪಂಚಮೀ ಒಳಗೆ 50 ಲಕ್ಷ ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ ಪಠಣವನ್ನು ಪೂರೈಸುವಂತೆ ಸಮಾಜಕ್ಕೆ ಆದೇಶ ನೀಡಿ, ಈ ವರ್ಷ ಭಜನ ರಾಮಾಯಣ ಅಭಿಯಾನಕ್ಕೆ ಸಮಾಜದಿಂದ ವ್ಯಕ್ತವಾದ ಸ್ಪಂದನೆಯನ್ನು ಶ್ಲಾಘಿಸಿದರು.
ಪ್ರಶಸ್ತಿ ಸ್ವೀಕರಿಸಿದ ಮಹಾಮಹೋಪಾಧ್ಯಾಯ ಎಸ್.ರಂಗನಾಥ ಮಾತನಾಡಿ ಗೋವನ್ನು ಕಡೆಗಣಿಸುವುದು, ಕೊಲ್ಲುವುದು ಅಪರಾಧ. ಕ್ರೂರವಾದ ಹುಲಿ ನಮ್ಮ ರಾಷ್ಟ್ರ ಪ್ರಾಣಿ ಎನಿಸದೇ ಸಾತ್ವಿಕವಾದ ಗೋವು ರಾಷ್ಟ್ರಪ್ರಾಣಿಯಾಗಬೇಕು ಎಂದರು. ಅನಾಚಾರ ತಾಂಡವವಾಡುತ್ತಿದ್ದ ಸಮಯದಲ್ಲಿ ಶಂಕರರ ಅವತಾರವಾಯಿತು, ಅವರಿಂದ ಧರ್ಮದ ಪುನರುತ್ಠಾನವಾಯಿತು. ಇಂದು ರಾಘವೇಶ್ವರ ಶ್ರೀಗಳು ಗೋಸ್ವರ್ಗದಂತ ವಿಶ್ವದ 8ನೇ ಅದ್ಭುತ ನಿರ್ಮಿಸಿ ಪುನಃ ಶಂಕರರ ನೆನಪು ಮಾಡುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ನಂದಿಗುಡಿಯ ಶ್ರೀ ಶಿವಾಚಾರ್ಯ ಸ್ವಾಮಿಗಳು, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು. ಡಾ. ರಾಘವೇಂದ್ರ ಭಟ್ಟ ಕ್ಯಾದಗಿ ಹಾಗೂ ರಮೇಶ ಗುಂಡೂಮನೆ ಅಭಿನಂದನಾ ಮಾತುಗಳನ್ನಾಡಿದರು. ಸಂದೇಶ ತಲಕಾಲಕೊಪ್ಪ ಹಾಗೂ ಆನಂದ ಹಿರೇಕೋಡ ಪ್ರಶಸ್ತಿಪತ್ರಗಳನ್ನು ವಾಚಿಸಿದರು. ಆರ್.ಎಸ್.ಹೆಗಡೆ ದಂಪತಿಗಳು ಸಭಾಪೂಜೆ ನೆರವೇರಿಸಿದರು.
ಶಂಕರಪಂಚಮೀ ಉತ್ಸವ ಸಮಿತಿಯ ಅಧ್ಯಕ್ಷ ಮಹೇಶ ಚಟ್ನಳ್ಳಿ ಅವಲೋಕನ ನಡೆಸಿಕೊಟ್ಟರು. ರಾಘವೇಂದ್ರ ಮಧ್ಯಸ್ಥ ಹಾಗೂ ವಿನಾಯಕ ತಲವಾಟ ನಿರ್ವಹಿಸಿದರು. ಅತಿರುದ್ರಾನುಷ್ಠಾನ, ಮಹಾರುದ್ರ ಹವನ, ಚಂಡಿಹವನ, ಶಾಂಕರಭಾಷ್ಯ ಪಾರಾಯಣ, ಶಂಕರ ಗುರುಪೂಜಾ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಶಂಕರ ಪಂಚಮೀ ಉತ್ಸವ ನಿಮಿತ್ತ ಗೋಸ್ವರ್ಗದಲ್ಲಿ ನಡೆದ "ಮಕ್ಕಳ ಮಹಾಸಮ್ಮೇಳನ"ದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ರಾಘವೇಶ್ವರ ಶ್ರೀಗಳು, ಮಕ್ಕಳಿಗೆ ಹಾಲು ಜೇನು ಇಷ್ಟ. ಗೋವು ಹಾಲಿನಂತೆ, ಮಕ್ಕಳು ಜೇನಿನಂತೆ, ಇವೆರಡರ ಸಮಾಗಮವು ಇಂದು ಗೋಸ್ವರ್ಗದಲ್ಲಿ ಸಾಕ್ಷಾತ್ಕಾರವಾಗಿದೆ. ಗೋವುಗಳು ಮಕ್ಕಳು ಒಂದಾಗಬೇಕು, ಮಕ್ಕಳಲ್ಲಿ ಗೋವಿನ ಕುರಿತು ಪ್ರೀತಿ ಹೆಚ್ಚಬೇಕು ಎಂದು ಶ್ರೀಗಳು ಆಶಯ ವ್ಯಕ್ತಪಡಿಸಿ ಮಕ್ಕಳೊಂದಿಗೆ ಆತ್ಮೀಯ ಸಂವಾದ ನಡೆಸಿಕೊಟ್ಟರು.
ಸಪ್ತ ಸನ್ನಿಧಿಯ ಕುರಿತು ವಿವರಿಸಿದ ಶ್ರೀಗಳು ಸೀತಾರಾಮಚಂದ್ರ, ಚಂದ್ರಮೌಳೀಶ್ವರ, ರಾಜರಾಜೇಶ್ವರೀ, ಆಂಜನೇಯ, ಗುರುಪರಂಪರೆ, ರಾಮೇಶ್ವರ, ಭುವನೇಶ್ವರೀ ದೇವತೆಗಳ ಆವಾಸವಿದಾಗಿದೆ ಎಂದರು. ವಿಷ್ಣುವಿನಿಂದ ಗುರುಪರಂಪರೆ ಆರಂಭವಾಗಿ ಗೌಡಪಾದರಿಂದ ಶಂಕರಾಚಾರ್ಯರಿಗೆ ಬಂದು ಈ ವರೆಗೂ ಅನೂಚಾನವಾಗಿದೆ ಎಂದು ಶ್ರೀಗಳು ಮಕ್ಕಳಿಗೆ ಮನಮುಟ್ಟುವಂತೆ ವಿವರಿಸಿದರು.
ಡಿ.ಎಸ್.ಹೆಗಡೆ ದೇಶೀಯ ಆಕಳ ಹಾಲಿನಲ್ಲಿಯ ವಿವಿಧ ಅಂಶಗಳ ಕುರಿತು ವಿವರಣೆ ನೀಡಿದರು. ಮಹಾಮಂಡಲ ಅಧ್ಯಕ್ಷೆ ಈಶ್ವರೀ ಬೇರ್ಕಡವು, ಕುಮಾರಸ್ವಾಮಿ ವರ್ಮುಡಿ(ಕೊಚ್ಚಿ), ಆರ್.ಎಸ್.ಹೆಗಡೆ ಹರಗಿ, ಆರ್.ಎಸ್.ಎಸ್ನ ಅ.ಪು.ನಾರಾಯಣ ಭಟ್ಟ ಮುಂತಾದವರು ಪಾಲ್ಗೊಂಡಿದ್ದರು. ಮಹಾಮಂಡಲ ವ್ಯಾಪ್ತಿಯ ಮಂಗಳೂರು, ಕಾಸರಗೋಡು, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಮಕ್ಕಳು ವಿವಿಧ ಆಟ-ಪಾಠಗಳಲ್ಲಿ ತನ್ಮಯತೆ, ಉತ್ಸಾಹದಿಂದ ಪಾಲ್ಗೊಂಡು ಹರ್ಷೋದ್ಘಾರ ಮಾಡಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications