ಶ್ರೀರಾಮಚಂದ್ರಾಪುರ ಮಠದಿಂದ ವಿಷ್ಣುಗುಪ್ತ ವಿವಿ: ರಾಘವೇಶ್ವರ ಶ್ರೀ
ಕಾರವಾರ, ಫೆಬ್ರವರಿ 23: ವಿಶ್ವಕ್ಕೆ ಮಾದರಿ ಎನಿಸುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ. ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ಇದು ಬೃಹದಾಕಾರವಾಗಿ ಬೆಳೆಯಲಿದೆ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
ಶಿವರಾತ್ರಿ ಮಹೋತ್ಸವ ಅಂಗವಾಗಿ ಗೋಕರ್ಣದಲ್ಲಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಇಂಥ ವಿದ್ಯಾಸಂಸ್ಥೆ ಕಟ್ಟುವ ಮುನ್ನ ಭದ್ರಕಾಳಿ ಶಿಕ್ಷಣ ಸಂಸ್ಥೆಯಂತಹ ಉತ್ತಮ ಸಂಸ್ಥೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಭಾರತೀಯ ಪ್ರಾಚೀನ ಶಿಕ್ಷಣ, ಕಲೆಗಳ ಪುನರುತ್ಥಾನ ನೂತನ ವಿದ್ಯಾಪೀಠದ ಉದ್ದೇಶ ಎಂದು ಹೇಳಿದರು.
ಪುರಾತನ ಸಂಸ್ಥೆಗೆ ಸನಾತನ ಸಂಸ್ಥೆಯಿಂದ ಸನ್ಮಾನಿಸಲಾಗುತ್ತಿದೆ, ಇದು ದೈವೇಚ್ಛೆ. ಮಣ್ಣಿನಲ್ಲಿ ಬೆಳೆದ ವೃಕ್ಷ ಮಣ್ಣಿಗೆ ನೆರಳಾಗುತ್ತದೆ, ಆಧಾರವಾಗುತ್ತದೆ ಮತ್ತು ಆ ಮಣ್ಣಿಗೆ ಅಲಂಕಾರವಾಗುತ್ತದೆ. ಅಂತೆಯೇ ಮಹಾಬಲನ ಸನ್ನಿಧಿಯಲ್ಲಿ ಬೆಳೆದ ಭದ್ರಕಾಳಿ ಶಿಕ್ಷಣ ಸಂಸ್ಥೆ ಈ ಭಾಗಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿದೆ ಎಂದು ಬಣ್ಣಿಸಿದರು.

ಭದ್ರಕಾಳಿ ಶಾಲೆಯಲ್ಲಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ, ಪರೀಕ್ಷೆ ಬರೆದ ನೆನಪನ್ನು ರಾಘವೇಶ್ವರ ಸ್ವಾಮೀಜಿ ಹಂಚಿಕೊಂಡರು. ಲಕ್ಷಾಂತರ ಮಕ್ಕಳ ಬದುಕನ್ನು ಬೆಳಗಿಸಿದ ಸಂಸ್ಥೆಯ ಸೇವೆ ಅವರ್ಣನೀಯ ಎಂದು ಹೇಳಿದರು. ಸಂಸ್ಥೆಗೆ ಅಗತ್ಯ ಸೇವೆ ಸಲ್ಲಿಸಲು ದೇವಾಲಯ, ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ ಎಂದು ತಿಳಿಸಿದರು.
ಭದ್ರಕಾಳಿ ವಿದ್ಯಾಸಂಸ್ಥೆಗೆ ಇದೇ ಸಂದರ್ಭದಲ್ಲಿ ಸಾರ್ವಭೌಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. 1927 ರಲ್ಲಿ ಆರಂಭವಾಗಿ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ವಿ.ಆರ್.ಮಲ್ಲನ್ ಮತ್ತು ಜಿ.ಎನ್.ನಾಯಕ ಪ್ರಶಸ್ತಿ ಸ್ವೀಕರಿಸಿದರು.

ಕುಮಟಾ ಶಾಸಕ ದಿನಕರ ಶೆಟ್ಟಿ, ಹಿರಿಯ ಪತ್ರಕರ್ತ ವಿನಾಯಕ ಭಟ್ ಮುರೂರು ಭಾಗವಹಿಸಿದ್ದರು. ತಾಲೂಕು ಪಂಚಾಯ್ತಿ ಸದಸ್ಯ ಮಹೇಶ್ ಶೆಟ್ಟಿ ಅವಲೋಕನ ನೆರವೇರಿಸಿರು. ಶಿವರಾತ್ರಿ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಅಧ್ಯಕ್ಷೆ ಡಾ.ಶೀಲಾ ಹೊಸಮನೆ ಸನ್ಮಾನ ಪತ್ರ ವಾಚಿಸಿದರು. ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಹೆಗಡೆ ಸಭಾಪೂಜೆ ನೆರವೇರಿಸಿದರು. ಶಿರಸಿಯ ಗಣಪತಿ ಶಿವರಾಮ ಯಾಜಿ ಸಂಕಲನ ಮಾಡಿದ ಗೋಮಾತ್ರಷ್ಟೋತ್ತರ ಶತನಾಮ ಸ್ತೋತ್ರ ಮತ್ತು ನಾಮಾವಳಿ ಕೃತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಮಲ್ಲನ್ ಮಾತನಾಡಿ, ""1927ರಲ್ಲೇ ಈ ಭಾಗದ ಜನತೆಗೆ ಇಂಗ್ಲಿಷ್ ಕಲಿಕೆಗೆ ಅವಕಾಶ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಆರಂಭಿಸಿದ ಸಂಸ್ಥೆ ಜನಸೇವೆ ಮಾಡುತ್ತಾ ಬಂದಿದೆ'' ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications